AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಎಫೆಕ್ಟ್​; ತೆರಿಗೆ ಕಟ್ಟಲೂ ಆಗದೆ ಒದ್ದಾಡುತ್ತಿದ್ದಾರೆ ಕಂಗನಾ ರಣಾವತ್​; ಅಳಲು ತೋಡಿಕೊಂಡ ನಟಿ

ಕಂಗನಾ ರಣಾವತ್​ ಬಾಲಿವುಡ್​ನ ಸ್ಟಾರ್​ ನಟಿಯರ ಸಾಲಿನಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗಿದೆ. ಸದ್ಯ, ಅವರ ಕೈಯಲ್ಲಿ ಮೂರು ಚಿತ್ರಗಳಿದ್ದು, ಪ್ರತಿ ಸಿನಿಮಾಗೂ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ.

ಲಾಕ್​ಡೌನ್​ ಎಫೆಕ್ಟ್​; ತೆರಿಗೆ ಕಟ್ಟಲೂ ಆಗದೆ ಒದ್ದಾಡುತ್ತಿದ್ದಾರೆ ಕಂಗನಾ ರಣಾವತ್​; ಅಳಲು ತೋಡಿಕೊಂಡ ನಟಿ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Jun 09, 2021 | 12:38 PM

Share

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿರುವುದರಿಂದ ಬಹುತೇಕ ರಾಜ್ಯಗಳು ಲಾಕ್​ಡೌನ್​ ಘೋಷಣೆ ಮಾಡಿವೆ. ಇದರಿಂದ ಬಹುತೇಕ ಆರ್ಥಿಕ ಚಟುವಟಿಕೆ ನಿಂತಿದ್ದು, ಜನರು ಕೆಲಸ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಸಾಕಷ್ಟು ಕಲಾವಿದರು ಈ ಸಂದರ್ಭದಲ್ಲಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಬಗ್ಗೆ ವಿಡಿಯೋ ಮಾಡಿ ಹಾಕಿದ್ದಾರೆ. ಈಗ ಸ್ಟಾರ್​ ಕಲಾವಿದರು ಕೂಡ ತಮ್ಮ ತೊಂದರೆ ಹೇಳಿಕೊಳ್ಳಲು ಆರಂಭಿಸಿದ್ದಾರೆ. ನಟಿ ಕಂಗನಾ ರಣಾವತ್​ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದು, ಟ್ಯಾಕ್ಸ್​ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.

ಕಂಗನಾ ರಣಾವತ್​ ಬಾಲಿವುಡ್​ನ ಸ್ಟಾರ್​ ನಟಿಯರ ಸಾಲಿನಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗಿದೆ. ಸದ್ಯ, ಅವರ ಕೈಯಲ್ಲಿ ಮೂರು ಚಿತ್ರಗಳಿದ್ದು, ಪ್ರತಿ ಸಿನಿಮಾಗೂ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದಾಗ್ಯೂ ಕಂಗನಾಗೆ ತೆರಿಗೆ ಕಟ್ಟೋಕೆ ಅಸಾಧ್ಯವಾಗಿದೆಯಂತೆ. ಕಳೆದ ವರ್ಷದ ತೆರಿಗೆಯಲ್ಲಿ ಅರ್ಧದಷ್ಟನ್ನು ಮಾತ್ರ ಅವರು ಪಾವತಿ ಮಾಡಿದ್ದಾರೆ. ಅಲ್ಲದೆ, ಹೀಗಾಗಿದ್ದು ಇದೇ ಮೊದಲು ಎಂದು ಹೇಳಿಕೊಂಡಿದ್ದಾರೆ.

ಕಂಗನಾ ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಸ್ಟೋರಿ ಒಂದನ್ನು ಹಾಕಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ನನ್ನ ಒಟ್ಟು ಆದಾಯದಲ್ಲಿ ಶೇ.45 ತೆರಿಗೆ ಪಾವತಿ ಮಾಡುತ್ತೇನೆ. ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ ನಟಿ ನಾನು. ಆದರೆ, ಕೆಲಸ ಇಲ್ಲದೆ, ಕಳೆದ ವರ್ಷದ ಅರ್ಧದಷ್ಟು ತೆರಿಗೆಯನ್ನು ಮಾತ್ರ ಪಾವತಿ ಮಾಡಿದ್ದೇನೆ. ಹೀಗಾಗಿದ್ದು ನನ್ನ ಜೀವನದಲ್ಲಿ ಇದೆ ಮೊದಲು’ ಎಂದಿದ್ದಾರೆ ಕಂಗನಾ .

ಈ ಮೊದಲಿನಿಂದಲೂ ಕಂಗನಾ ಮೋದಿ ಸರ್ಕಾರವನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ಸರ್ಕಾರದ ವಿರುದ್ಧ ಮಾತನಾಡಿದರೆ ಕಂಗನಾ ತಿರುಗಿ ಬೀಳುತ್ತಾರೆ. ಇಷ್ಟು ಕಷ್ಟವಿದ್ದರೂ ಮೋದಿ ಸರ್ಕಾರದ ಪರವಾಗಿಯೇ ಮಾತನಾಡಿದ್ದಾರೆ. ‘ನಾನು ತೆರಿಗೆ ಪಾವತಿ ಮಾಡುವುದು ವಿಳಂಬ ಮಾಡಿದರೆ ಸರ್ಕಾರ ಅದಕ್ಕೆ ಮತ್ತೆ ಬಡ್ಡಿ ವಿಧಿಸುತ್ತದೆ. ಇದನ್ನು ನಾನು ಸ್ವಾಗತಿಸುತ್ತೇನೆ. ಈ ಸಮಯ ನಮಗೆಲ್ಲರಿಗೂ ಕಠಿಣವಾಗಬಹುದು ಆದರೆ ನಾವು ಒಂದಾದರೆ ಸಮಯಕ್ಕಿಂತ ಕಠಿಣವಾಗಬಹುದು’ ಎಂದು ಸ್ಫೂರ್ತಿ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ:ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ