AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?

ಕಂಗನಾ ಕಳೆದ ವರ್ಷ ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಇವರ ವಿರುದ್ಧ ದೂರು ಕೂಡ ದಾಖಲಾಗಿತ್ತು.

Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?
ಕಂಗನಾ ರಣಾವತ್
Follow us
ರಾಜೇಶ್ ದುಗ್ಗುಮನೆ
|

Updated on: Jun 15, 2021 | 5:54 PM

ಕಂಗನಾ ರಣಾವತ್​ ಅವರಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಅವರು ನಟನೆ ಜತೆಗೆ ಆಗಾಗ ವಿವಾದದ ಮೂಲಕವೂ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದು, ಪಾಸ್​​​ಪೋರ್ಟ್​ ನವೀಕರಿಸಲು ಅವಕಾಶ ನೀಡಬೇಕು ಎಂದು ಕೋರಿದ್ದಾರೆ.

ಕಂಗನಾ ಕಳೆದ ವರ್ಷ ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಇವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ದೂರನ್ನು ಪರಿಶೀಲಿಸಿದ ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು.

ಸೆಪ್ಟೆಂಬರ್​ 15ರಂದು ಕಂಗನಾ ಅವರ ಪಾಸ್​ಪೋರ್ಟ್​ ಅವಧಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ಅದನ್ನು ನವೀಕರಿಸಲು ಕಂಗನಾ ತೆರಳಿದ್ದರು. ಆದರೆ, ಕಂಗನಾ ವಿರುದ್ಧ ಎಫ್​ಐಆರ್​ ದಾಖಲಾಗಿರುವುದರಿಂದ ಪಾಸ್​ಪೋರ್ಟ್​ ನವೀಕರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಂಗನಾ ಎಷ್ಟೇ ಮನವಿ ಮಾಡಿಕೊಂಡರೂ ಈ ಮನವಿಗೆ ಅಧಿಕಾರಿಗಳು ಒಪ್ಪಿಲ್ಲ. ಈ ಕಾರಣಕ್ಕೆ ಕಂಗನಾ ಬಾಂಬೇ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ. ದಯವಿಟ್ಟು ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಬೇಕು ಎಂದು ಕಂಗನಾ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇತ್ತೀಚೆಗೆ ಲಾಕ್​ಡೌನ್​ನಿಂದ ಅನುಭವಿಸುತ್ತಿರುವ ಕಷ್ಟದ ಬಗ್ಗೆ ಕಂಗನಾ ಹೇಳಿಕೊಂಡಿದ್ದರು, ‘ನನ್ನ ಒಟ್ಟು ಆದಾಯದಲ್ಲಿ ಶೇ.45 ತೆರಿಗೆ ಪಾವತಿ ಮಾಡುತ್ತೇನೆ. ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ ನಟಿ ನಾನು. ಆದರೆ, ಕೆಲಸ ಇಲ್ಲದೆ, ಕಳೆದ ವರ್ಷದ ಅರ್ಧದಷ್ಟು ತೆರಿಗೆಯನ್ನು ಮಾತ್ರ ಪಾವತಿ ಮಾಡಿದ್ದೇನೆ. ಹೀಗಾಗಿದ್ದು ನನ್ನ ಜೀವನದಲ್ಲಿ ಇದೆ ಮೊದಲು’ ಎಂದು ಕಂಗನಾ ಬಣ್ಣಿಸಿದ್ದರು.

ಇದನ್ನೂ ಓದಿ: ಲಾಕ್​ಡೌನ್​ ಎಫೆಕ್ಟ್​; ತೆರಿಗೆ ಕಟ್ಟಲೂ ಆಗದೆ ಒದ್ದಾಡುತ್ತಿದ್ದಾರೆ ಕಂಗನಾ ರಣಾವತ್​; ಅಳಲು ತೋಡಿಕೊಂಡ ನಟಿ

ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ