AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?

ಕಂಗನಾ ಕಳೆದ ವರ್ಷ ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಇವರ ವಿರುದ್ಧ ದೂರು ಕೂಡ ದಾಖಲಾಗಿತ್ತು.

Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?
ಕಂಗನಾ ರಣಾವತ್
ರಾಜೇಶ್ ದುಗ್ಗುಮನೆ
|

Updated on: Jun 15, 2021 | 5:54 PM

Share

ಕಂಗನಾ ರಣಾವತ್​ ಅವರಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಅವರು ನಟನೆ ಜತೆಗೆ ಆಗಾಗ ವಿವಾದದ ಮೂಲಕವೂ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದು, ಪಾಸ್​​​ಪೋರ್ಟ್​ ನವೀಕರಿಸಲು ಅವಕಾಶ ನೀಡಬೇಕು ಎಂದು ಕೋರಿದ್ದಾರೆ.

ಕಂಗನಾ ಕಳೆದ ವರ್ಷ ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಇವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ದೂರನ್ನು ಪರಿಶೀಲಿಸಿದ ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು.

ಸೆಪ್ಟೆಂಬರ್​ 15ರಂದು ಕಂಗನಾ ಅವರ ಪಾಸ್​ಪೋರ್ಟ್​ ಅವಧಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ಅದನ್ನು ನವೀಕರಿಸಲು ಕಂಗನಾ ತೆರಳಿದ್ದರು. ಆದರೆ, ಕಂಗನಾ ವಿರುದ್ಧ ಎಫ್​ಐಆರ್​ ದಾಖಲಾಗಿರುವುದರಿಂದ ಪಾಸ್​ಪೋರ್ಟ್​ ನವೀಕರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಂಗನಾ ಎಷ್ಟೇ ಮನವಿ ಮಾಡಿಕೊಂಡರೂ ಈ ಮನವಿಗೆ ಅಧಿಕಾರಿಗಳು ಒಪ್ಪಿಲ್ಲ. ಈ ಕಾರಣಕ್ಕೆ ಕಂಗನಾ ಬಾಂಬೇ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ. ದಯವಿಟ್ಟು ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಬೇಕು ಎಂದು ಕಂಗನಾ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇತ್ತೀಚೆಗೆ ಲಾಕ್​ಡೌನ್​ನಿಂದ ಅನುಭವಿಸುತ್ತಿರುವ ಕಷ್ಟದ ಬಗ್ಗೆ ಕಂಗನಾ ಹೇಳಿಕೊಂಡಿದ್ದರು, ‘ನನ್ನ ಒಟ್ಟು ಆದಾಯದಲ್ಲಿ ಶೇ.45 ತೆರಿಗೆ ಪಾವತಿ ಮಾಡುತ್ತೇನೆ. ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ ನಟಿ ನಾನು. ಆದರೆ, ಕೆಲಸ ಇಲ್ಲದೆ, ಕಳೆದ ವರ್ಷದ ಅರ್ಧದಷ್ಟು ತೆರಿಗೆಯನ್ನು ಮಾತ್ರ ಪಾವತಿ ಮಾಡಿದ್ದೇನೆ. ಹೀಗಾಗಿದ್ದು ನನ್ನ ಜೀವನದಲ್ಲಿ ಇದೆ ಮೊದಲು’ ಎಂದು ಕಂಗನಾ ಬಣ್ಣಿಸಿದ್ದರು.

ಇದನ್ನೂ ಓದಿ: ಲಾಕ್​ಡೌನ್​ ಎಫೆಕ್ಟ್​; ತೆರಿಗೆ ಕಟ್ಟಲೂ ಆಗದೆ ಒದ್ದಾಡುತ್ತಿದ್ದಾರೆ ಕಂಗನಾ ರಣಾವತ್​; ಅಳಲು ತೋಡಿಕೊಂಡ ನಟಿ

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್