AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?

ಕಂಗನಾ ಕಳೆದ ವರ್ಷ ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಇವರ ವಿರುದ್ಧ ದೂರು ಕೂಡ ದಾಖಲಾಗಿತ್ತು.

Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?
ಕಂಗನಾ ರಣಾವತ್
ರಾಜೇಶ್ ದುಗ್ಗುಮನೆ
|

Updated on: Jun 15, 2021 | 5:54 PM

Share

ಕಂಗನಾ ರಣಾವತ್​ ಅವರಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಅವರು ನಟನೆ ಜತೆಗೆ ಆಗಾಗ ವಿವಾದದ ಮೂಲಕವೂ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದು, ಪಾಸ್​​​ಪೋರ್ಟ್​ ನವೀಕರಿಸಲು ಅವಕಾಶ ನೀಡಬೇಕು ಎಂದು ಕೋರಿದ್ದಾರೆ.

ಕಂಗನಾ ಕಳೆದ ವರ್ಷ ಟ್ವೀಟ್​ ಒಂದನ್ನು ಮಾಡಿದ್ದರು. ಈ ಟ್ವೀಟ್​ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಇವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ದೂರನ್ನು ಪರಿಶೀಲಿಸಿದ ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು.

ಸೆಪ್ಟೆಂಬರ್​ 15ರಂದು ಕಂಗನಾ ಅವರ ಪಾಸ್​ಪೋರ್ಟ್​ ಅವಧಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ಅದನ್ನು ನವೀಕರಿಸಲು ಕಂಗನಾ ತೆರಳಿದ್ದರು. ಆದರೆ, ಕಂಗನಾ ವಿರುದ್ಧ ಎಫ್​ಐಆರ್​ ದಾಖಲಾಗಿರುವುದರಿಂದ ಪಾಸ್​ಪೋರ್ಟ್​ ನವೀಕರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಂಗನಾ ಎಷ್ಟೇ ಮನವಿ ಮಾಡಿಕೊಂಡರೂ ಈ ಮನವಿಗೆ ಅಧಿಕಾರಿಗಳು ಒಪ್ಪಿಲ್ಲ. ಈ ಕಾರಣಕ್ಕೆ ಕಂಗನಾ ಬಾಂಬೇ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ. ದಯವಿಟ್ಟು ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಬೇಕು ಎಂದು ಕಂಗನಾ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇತ್ತೀಚೆಗೆ ಲಾಕ್​ಡೌನ್​ನಿಂದ ಅನುಭವಿಸುತ್ತಿರುವ ಕಷ್ಟದ ಬಗ್ಗೆ ಕಂಗನಾ ಹೇಳಿಕೊಂಡಿದ್ದರು, ‘ನನ್ನ ಒಟ್ಟು ಆದಾಯದಲ್ಲಿ ಶೇ.45 ತೆರಿಗೆ ಪಾವತಿ ಮಾಡುತ್ತೇನೆ. ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ ನಟಿ ನಾನು. ಆದರೆ, ಕೆಲಸ ಇಲ್ಲದೆ, ಕಳೆದ ವರ್ಷದ ಅರ್ಧದಷ್ಟು ತೆರಿಗೆಯನ್ನು ಮಾತ್ರ ಪಾವತಿ ಮಾಡಿದ್ದೇನೆ. ಹೀಗಾಗಿದ್ದು ನನ್ನ ಜೀವನದಲ್ಲಿ ಇದೆ ಮೊದಲು’ ಎಂದು ಕಂಗನಾ ಬಣ್ಣಿಸಿದ್ದರು.

ಇದನ್ನೂ ಓದಿ: ಲಾಕ್​ಡೌನ್​ ಎಫೆಕ್ಟ್​; ತೆರಿಗೆ ಕಟ್ಟಲೂ ಆಗದೆ ಒದ್ದಾಡುತ್ತಿದ್ದಾರೆ ಕಂಗನಾ ರಣಾವತ್​; ಅಳಲು ತೋಡಿಕೊಂಡ ನಟಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?