AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ.

Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Jun 16, 2021 | 9:47 PM

Share

ನಟಿ ಕಂಗನಾ ರಣಾವತ್​ಗೆ ಬಾಂಬೇ ಹೈಕೋರ್ಟ್​ನಲ್ಲಿ ತೀವ್ರ ಹಿನ್ನಡೆ ಉಂಟಾಗಿದೆ. ಪಾಸ್​ಪೋರ್ಟ್​ ನವೀಕರಿಸಲು ಕೋರಿದ್ದ ಅರ್ಜಿ ವಿಚಾರಣೆಯನ್ನು ತಕ್ಷಣಕ್ಕೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ, ಅವರು ವಿದೇಶಕ್ಕೆ ತೆರಳುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಂಗನಾ ನಟಿ ಕಳೆದ ವರ್ಷ ಟ್ವೀಟ್​ ಒಂದನ್ನು ಮಾಡಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಇವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ದೂರನ್ನು ಪರಿಶೀಲಿಸಿದ ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು. ಸೆಪ್ಟೆಂಬರ್​ 15ರಂದು ಕಂಗನಾ ಅವರ ಪಾಸ್​ಪೋರ್ಟ್​ ಅವಧಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ಅದನ್ನು ನವೀಕರಿಸಲು ಕಂಗನಾ ತೆರಳಿದ್ದರು. ಆದರೆ, ಕಂಗನಾ ವಿರುದ್ಧ ಎಫ್​ಐಆರ್​ ದಾಖಲಾಗಿರುವುದರಿಂದ ಪಾಸ್​ಪೋರ್ಟ್​ ನವೀಕರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಂಗನಾ ಎಷ್ಟೇ ಮನವಿ ಮಾಡಿಕೊಂಡರೂ ಈ ಮನವಿಗೆ ಅಧಿಕಾರಿಗಳು ಒಪ್ಪಿಲ್ಲ. ಈ ಕಾರಣಕ್ಕೆ ಕಂಗನಾ ಬಾಂಬೇ ಹೈಕೋರ್ಟ್​ ಮೆಟ್ಟಿಲೇರಿದ್ದರು.

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ. ದಯವಿಟ್ಟು ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಬೇಕು ಎಂದು ಕಂಗನಾ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ, ಕಂಗನಾ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ, ಅರ್ಜಿಯನ್ನು ತಕ್ಷಣಕ್ಕೆ ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ಬಾಂಬೇ ಹೈಕೋರ್ಟ್​ ಹೇಳಿದೆ. ಇದರಿಂದ ಕಂಗನಾಗೆ ತೀವ್ರ ಹಿನ್ನಡೆ ಉಂಟಾಗಿದೆ.

ಇದನ್ನೂ ಓದಿ: Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ