AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ.

Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Jun 16, 2021 | 9:47 PM

Share

ನಟಿ ಕಂಗನಾ ರಣಾವತ್​ಗೆ ಬಾಂಬೇ ಹೈಕೋರ್ಟ್​ನಲ್ಲಿ ತೀವ್ರ ಹಿನ್ನಡೆ ಉಂಟಾಗಿದೆ. ಪಾಸ್​ಪೋರ್ಟ್​ ನವೀಕರಿಸಲು ಕೋರಿದ್ದ ಅರ್ಜಿ ವಿಚಾರಣೆಯನ್ನು ತಕ್ಷಣಕ್ಕೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ, ಅವರು ವಿದೇಶಕ್ಕೆ ತೆರಳುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಂಗನಾ ನಟಿ ಕಳೆದ ವರ್ಷ ಟ್ವೀಟ್​ ಒಂದನ್ನು ಮಾಡಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಇವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ದೂರನ್ನು ಪರಿಶೀಲಿಸಿದ ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು. ಸೆಪ್ಟೆಂಬರ್​ 15ರಂದು ಕಂಗನಾ ಅವರ ಪಾಸ್​ಪೋರ್ಟ್​ ಅವಧಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ಅದನ್ನು ನವೀಕರಿಸಲು ಕಂಗನಾ ತೆರಳಿದ್ದರು. ಆದರೆ, ಕಂಗನಾ ವಿರುದ್ಧ ಎಫ್​ಐಆರ್​ ದಾಖಲಾಗಿರುವುದರಿಂದ ಪಾಸ್​ಪೋರ್ಟ್​ ನವೀಕರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಂಗನಾ ಎಷ್ಟೇ ಮನವಿ ಮಾಡಿಕೊಂಡರೂ ಈ ಮನವಿಗೆ ಅಧಿಕಾರಿಗಳು ಒಪ್ಪಿಲ್ಲ. ಈ ಕಾರಣಕ್ಕೆ ಕಂಗನಾ ಬಾಂಬೇ ಹೈಕೋರ್ಟ್​ ಮೆಟ್ಟಿಲೇರಿದ್ದರು.

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ. ದಯವಿಟ್ಟು ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಬೇಕು ಎಂದು ಕಂಗನಾ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ, ಕಂಗನಾ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ, ಅರ್ಜಿಯನ್ನು ತಕ್ಷಣಕ್ಕೆ ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ಬಾಂಬೇ ಹೈಕೋರ್ಟ್​ ಹೇಳಿದೆ. ಇದರಿಂದ ಕಂಗನಾಗೆ ತೀವ್ರ ಹಿನ್ನಡೆ ಉಂಟಾಗಿದೆ.

ಇದನ್ನೂ ಓದಿ: Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು