AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ.

Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ
ಕಂಗನಾ
Follow us
ರಾಜೇಶ್ ದುಗ್ಗುಮನೆ
|

Updated on: Jun 16, 2021 | 9:47 PM

ನಟಿ ಕಂಗನಾ ರಣಾವತ್​ಗೆ ಬಾಂಬೇ ಹೈಕೋರ್ಟ್​ನಲ್ಲಿ ತೀವ್ರ ಹಿನ್ನಡೆ ಉಂಟಾಗಿದೆ. ಪಾಸ್​ಪೋರ್ಟ್​ ನವೀಕರಿಸಲು ಕೋರಿದ್ದ ಅರ್ಜಿ ವಿಚಾರಣೆಯನ್ನು ತಕ್ಷಣಕ್ಕೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ, ಅವರು ವಿದೇಶಕ್ಕೆ ತೆರಳುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಂಗನಾ ನಟಿ ಕಳೆದ ವರ್ಷ ಟ್ವೀಟ್​ ಒಂದನ್ನು ಮಾಡಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಇವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ದೂರನ್ನು ಪರಿಶೀಲಿಸಿದ ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು. ಸೆಪ್ಟೆಂಬರ್​ 15ರಂದು ಕಂಗನಾ ಅವರ ಪಾಸ್​ಪೋರ್ಟ್​ ಅವಧಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ಅದನ್ನು ನವೀಕರಿಸಲು ಕಂಗನಾ ತೆರಳಿದ್ದರು. ಆದರೆ, ಕಂಗನಾ ವಿರುದ್ಧ ಎಫ್​ಐಆರ್​ ದಾಖಲಾಗಿರುವುದರಿಂದ ಪಾಸ್​ಪೋರ್ಟ್​ ನವೀಕರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಂಗನಾ ಎಷ್ಟೇ ಮನವಿ ಮಾಡಿಕೊಂಡರೂ ಈ ಮನವಿಗೆ ಅಧಿಕಾರಿಗಳು ಒಪ್ಪಿಲ್ಲ. ಈ ಕಾರಣಕ್ಕೆ ಕಂಗನಾ ಬಾಂಬೇ ಹೈಕೋರ್ಟ್​ ಮೆಟ್ಟಿಲೇರಿದ್ದರು.

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ. ದಯವಿಟ್ಟು ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಬೇಕು ಎಂದು ಕಂಗನಾ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ, ಕಂಗನಾ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ, ಅರ್ಜಿಯನ್ನು ತಕ್ಷಣಕ್ಕೆ ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ಬಾಂಬೇ ಹೈಕೋರ್ಟ್​ ಹೇಳಿದೆ. ಇದರಿಂದ ಕಂಗನಾಗೆ ತೀವ್ರ ಹಿನ್ನಡೆ ಉಂಟಾಗಿದೆ.

ಇದನ್ನೂ ಓದಿ: Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?

ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ