AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ.

Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Jun 16, 2021 | 9:47 PM

Share

ನಟಿ ಕಂಗನಾ ರಣಾವತ್​ಗೆ ಬಾಂಬೇ ಹೈಕೋರ್ಟ್​ನಲ್ಲಿ ತೀವ್ರ ಹಿನ್ನಡೆ ಉಂಟಾಗಿದೆ. ಪಾಸ್​ಪೋರ್ಟ್​ ನವೀಕರಿಸಲು ಕೋರಿದ್ದ ಅರ್ಜಿ ವಿಚಾರಣೆಯನ್ನು ತಕ್ಷಣಕ್ಕೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ, ಅವರು ವಿದೇಶಕ್ಕೆ ತೆರಳುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಂಗನಾ ನಟಿ ಕಳೆದ ವರ್ಷ ಟ್ವೀಟ್​ ಒಂದನ್ನು ಮಾಡಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಇವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ದೂರನ್ನು ಪರಿಶೀಲಿಸಿದ ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು. ಸೆಪ್ಟೆಂಬರ್​ 15ರಂದು ಕಂಗನಾ ಅವರ ಪಾಸ್​ಪೋರ್ಟ್​ ಅವಧಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ಅದನ್ನು ನವೀಕರಿಸಲು ಕಂಗನಾ ತೆರಳಿದ್ದರು. ಆದರೆ, ಕಂಗನಾ ವಿರುದ್ಧ ಎಫ್​ಐಆರ್​ ದಾಖಲಾಗಿರುವುದರಿಂದ ಪಾಸ್​ಪೋರ್ಟ್​ ನವೀಕರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಂಗನಾ ಎಷ್ಟೇ ಮನವಿ ಮಾಡಿಕೊಂಡರೂ ಈ ಮನವಿಗೆ ಅಧಿಕಾರಿಗಳು ಒಪ್ಪಿಲ್ಲ. ಈ ಕಾರಣಕ್ಕೆ ಕಂಗನಾ ಬಾಂಬೇ ಹೈಕೋರ್ಟ್​ ಮೆಟ್ಟಿಲೇರಿದ್ದರು.

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ. ದಯವಿಟ್ಟು ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಬೇಕು ಎಂದು ಕಂಗನಾ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ, ಕಂಗನಾ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ, ಅರ್ಜಿಯನ್ನು ತಕ್ಷಣಕ್ಕೆ ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ಬಾಂಬೇ ಹೈಕೋರ್ಟ್​ ಹೇಳಿದೆ. ಇದರಿಂದ ಕಂಗನಾಗೆ ತೀವ್ರ ಹಿನ್ನಡೆ ಉಂಟಾಗಿದೆ.

ಇದನ್ನೂ ಓದಿ: Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ