AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ.

Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ
ಕಂಗನಾ
Follow us
ರಾಜೇಶ್ ದುಗ್ಗುಮನೆ
|

Updated on: Jun 16, 2021 | 9:47 PM

ನಟಿ ಕಂಗನಾ ರಣಾವತ್​ಗೆ ಬಾಂಬೇ ಹೈಕೋರ್ಟ್​ನಲ್ಲಿ ತೀವ್ರ ಹಿನ್ನಡೆ ಉಂಟಾಗಿದೆ. ಪಾಸ್​ಪೋರ್ಟ್​ ನವೀಕರಿಸಲು ಕೋರಿದ್ದ ಅರ್ಜಿ ವಿಚಾರಣೆಯನ್ನು ತಕ್ಷಣಕ್ಕೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ, ಅವರು ವಿದೇಶಕ್ಕೆ ತೆರಳುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಂಗನಾ ನಟಿ ಕಳೆದ ವರ್ಷ ಟ್ವೀಟ್​ ಒಂದನ್ನು ಮಾಡಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಇವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ದೂರನ್ನು ಪರಿಶೀಲಿಸಿದ ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು. ಸೆಪ್ಟೆಂಬರ್​ 15ರಂದು ಕಂಗನಾ ಅವರ ಪಾಸ್​ಪೋರ್ಟ್​ ಅವಧಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ಅದನ್ನು ನವೀಕರಿಸಲು ಕಂಗನಾ ತೆರಳಿದ್ದರು. ಆದರೆ, ಕಂಗನಾ ವಿರುದ್ಧ ಎಫ್​ಐಆರ್​ ದಾಖಲಾಗಿರುವುದರಿಂದ ಪಾಸ್​ಪೋರ್ಟ್​ ನವೀಕರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಂಗನಾ ಎಷ್ಟೇ ಮನವಿ ಮಾಡಿಕೊಂಡರೂ ಈ ಮನವಿಗೆ ಅಧಿಕಾರಿಗಳು ಒಪ್ಪಿಲ್ಲ. ಈ ಕಾರಣಕ್ಕೆ ಕಂಗನಾ ಬಾಂಬೇ ಹೈಕೋರ್ಟ್​ ಮೆಟ್ಟಿಲೇರಿದ್ದರು.

ಕಂಗನಾ ಸಿನಿಮಾ ಶೂಟಿಂಗ್​ಗಾಗಿ ಆಗಸ್ಟ್​ 30ರವರೆಗೆ ಹಂಗೇರಿಯಲ್ಲೇ ಇರಬೇಕಾಗುತ್ತದೆ. ಈ ಸಿನಿಮಾಗಾಗಿ ನಿರ್ಮಾಪಕರು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಇಡೀ ಚಿತ್ರತಂಡ ಅಲ್ಲಿಗೆ ತೆರಳುತ್ತಿರುವುದರಿಂದ ಮೊದಲೇ ಎಲ್ಲವೂ ಬುಕ್​ ಆಗಿದೆ. ಶೂಟಿಂಗ್​ ವಿಸ್ತರಣೆ ಕೂಡ ಆಗಬಹುದು. ಹೀಗಾಗಿ, ಪಾಸ್​ಪೋರ್ಟ್​ ರಿನಿವಲ್​ ಆಗಲೇಬೇಕಿದೆ. ದಯವಿಟ್ಟು ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಬೇಕು ಎಂದು ಕಂಗನಾ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ, ಕಂಗನಾ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ, ಅರ್ಜಿಯನ್ನು ತಕ್ಷಣಕ್ಕೆ ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ಬಾಂಬೇ ಹೈಕೋರ್ಟ್​ ಹೇಳಿದೆ. ಇದರಿಂದ ಕಂಗನಾಗೆ ತೀವ್ರ ಹಿನ್ನಡೆ ಉಂಟಾಗಿದೆ.

ಇದನ್ನೂ ಓದಿ: Kangana Ranaut: ಹೈಕೋರ್ಟ್​ ಮೆಟ್ಟಿಲೇರಿದ ಕಂಗನಾ ರಣಾವತ್​; ಈ ಬಾರಿ ಮತ್ತೇನು ಕಿರಿಕ್​?

Daily Horoscope: ಕನ್ಯಾ ರಾಶಿಯ ಆರನೇ ಮನೆಯಲ್ಲಿ ಚಂದ್ರ ಸಂಚಾರ
Daily Horoscope: ಕನ್ಯಾ ರಾಶಿಯ ಆರನೇ ಮನೆಯಲ್ಲಿ ಚಂದ್ರ ಸಂಚಾರ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್