AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ

ಕನ್ನಡದಲ್ಲಿ ‘ಉಲ್ಲಾಸ ಉತ್ಸಾಹೌ ಸಿನಿಮಾ ಮಾಡಿದ ಬಳಿಕ ಬೇರೆ ಬೇರೆ ಭಾಷೆಗಳಿಂದ ಯಾಮಿ ಗೌತಮ್​ ಅವರಿಗೆ ಆಫರ್​ಗಳು ಬರಲಾರಂಭಿಸಿದವು. ಸದ್ಯ ಅವರು ಹಿಂದಿಯ ‘ಭೂತ್​ ಪೊಲೀಸ್’ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ
ಕಂಗನಾ-ಯಾಮಿ
ರಾಜೇಶ್ ದುಗ್ಗುಮನೆ
|

Updated on: Jun 06, 2021 | 9:57 PM

Share

‘ಉಲ್ಲಾಸ ಉತ್ಸಾಹ’ ಸಿನಿಮಾದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​ ಜೊತೆ ತೆರೆ ಹಂಚಿಕೊಂಡಿದ್ದ ನಟಿ ಯಾಮಿ ಗೌತಮ್​ ಅವರು ಸದ್ದಿಲ್ಲದೇ ಹಸೆಮಣೆ ಏರಿದ್ದರು. ಬಾಲಿವುಡ್​ನ ‘ಉರಿ’ ಚಿತ್ರದ ನಿರ್ದೇಶಕ ಆದಿತ್ಯ ಧಾರ್​ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿಚಾರವನ್ನು ಯಾಮಿ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತ ಮಾಡಿದ್ದಾರೆ. ಅವರು ಹಂಚಿಕೊಂಡ ಫೋಟೋದ ಕಮೆಂಟ್​ ಬಾಕ್ಸ್​ನಲ್ಲಿ ಸಣ್ಣ ಕಿತ್ತಾಟವೊಂದು ನಡೆದಿದೆ. ಇದಕ್ಕೆ ಕಾರಣ ನಟಿ ಕಂಗನಾ ರಣಾವತ್​.  

ಮದುವೆ ಫೋಟೋಗಳನ್ನು ಹಂಚಿಕೊಂಡಿರುವ ಯಾಮಿ ಗೌತಮ್​ ಅವರು ಎಲ್ಲರ ಆಶೀರ್ವಾದ ಕೋರಿದ್ದರು. ‘ಕುಟುಂಬದವರ ಆಶೀರ್ವಾದದೊಂದಿಗೆ ನಾವು ಇಂದು ಮದುವೆ ಆದೆವು. ಕೇವಲ ನಮ್ಮ ಆಪ್ತರ ಸಮ್ಮುಖದಲ್ಲಿ ಖಾಸಗಿಯಾಗಿ ಈ ವಿವಾಹ ಸಮಾರಂಭ ನೆರವೇರಿತು. ಪ್ರೀತಿ-ಸ್ನೇಹದ ನಮ್ಮ ಈ ಹೊಸ ಪಯಣಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು’ ಎಂದು ಕೋರಿದ್ದರು. ಅಲ್ಲದೆ, ಭಾನುವಾರ ಸಾಲು ಸಾಲು ಫೋಟೋಗಳನ್ನು ಯಾಮಿ ಹಂಚಿಕೊಂಡಿದ್ದರು.

ಈ ಫೋಟೋಗೆ ಸಾಕಷ್ಟು ಸೆಲೆಬ್ರಿಟಿಗಳು ಕಮೆಂಟ್​ ಮಾಡಿ ಶುಭಾಶಯ ತಿಳಿಸಿದ್ದಾರೆ. ಬಾಲಿವುಡ್​ ನಟ ವಿಕ್ರಾಂತ್​ ಮಾಸ್ಸಿ ಕೂಡ ಇದಕ್ಕೆ ಕಮೆಂಟ್​ ಮಾಡಿ ನಗೆಚಟಾಕಿ ಹಾರಿಸಿದ್ದಾರೆ. ‘ರಾಧೆ ಮಾ ಅವರಂತೆ ಶುದ್ಧ ಮತ್ತು ಧರ್ಮನಿಷ್ಠರಾಗಿ ಕಾಣುತ್ತಿದ್ದೀರಿ’ ಎಂದು ಯಾಮಿ ಫೋಟೋಗೆ ಅವರು ಕಮೆಂಟ್​ ಮಾಡಿದ್ದಾರೆ. ಈ ಕಮೆಂಟ್​ ಓದಿದ ಕಂಗನಾ ಸಿಟ್ಟಾಗಿದ್ದಾರೆ, ‘ಈ ಜಿರಲೆ ಎಲ್ಲಿಂದ ಬಂತು? ಯಾರಾದರೂ ನನ್ನ ಚಪ್ಪಲಿ  ತನ್ನಿ ಎಂದು ಹೇಳುವ ಮೂಲಕ ವಿವಾದ ಹೊತ್ತಿಸಿದ್ದಾರೆ. ಈ ಸ್ಕ್ರೀನ್​ಶಾಟ್​ಗಳು ಸಾಕಷ್ಟು ವೈರಲ್​ ಆಗಿದೆ.

ಕನ್ನಡದಲ್ಲಿ ‘ಉಲ್ಲಾಸ ಉತ್ಸಾಹ’ ಸಿನಿಮಾ ಮಾಡಿದ ಬಳಿಕ ಬೇರೆ ಬೇರೆ ಭಾಷೆಗಳಿಂದ ಯಾಮಿ ಗೌತಮ್​ ಅವರಿಗೆ ಆಫರ್​ಗಳು ಬರಲಾರಂಭಿಸಿದವು. ಸದ್ಯ ಅವರು ಹಿಂದಿಯ ‘ಭೂತ್​ ಪೊಲೀಸ್’ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ನಟಿ ಪ್ರಣಿತಾ ಕೂಡ ಇದೇ ರೀತಿ ಗುಟ್ಟಾಗಿ ಮದುವೆ ಆಗಿದ್ದರು.

ಇದನ್ನೂ ಓದಿ: ‘ಉರಿ’ ನಿರ್ದೇಶಕನ ಜೊತೆ ಗುಟ್ಟಾಗಿ ಮದುವೆಯಾದ ‘ಉಲ್ಲಾಸ ಉತ್ಸಾಹ’ ಚಿತ್ರದ ನಟಿ ಯಾಮಿ ಗೌತಮ್​

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ