AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ

ಕನ್ನಡದಲ್ಲಿ ‘ಉಲ್ಲಾಸ ಉತ್ಸಾಹೌ ಸಿನಿಮಾ ಮಾಡಿದ ಬಳಿಕ ಬೇರೆ ಬೇರೆ ಭಾಷೆಗಳಿಂದ ಯಾಮಿ ಗೌತಮ್​ ಅವರಿಗೆ ಆಫರ್​ಗಳು ಬರಲಾರಂಭಿಸಿದವು. ಸದ್ಯ ಅವರು ಹಿಂದಿಯ ‘ಭೂತ್​ ಪೊಲೀಸ್’ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ
ಕಂಗನಾ-ಯಾಮಿ
ರಾಜೇಶ್ ದುಗ್ಗುಮನೆ
|

Updated on: Jun 06, 2021 | 9:57 PM

Share

‘ಉಲ್ಲಾಸ ಉತ್ಸಾಹ’ ಸಿನಿಮಾದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​ ಜೊತೆ ತೆರೆ ಹಂಚಿಕೊಂಡಿದ್ದ ನಟಿ ಯಾಮಿ ಗೌತಮ್​ ಅವರು ಸದ್ದಿಲ್ಲದೇ ಹಸೆಮಣೆ ಏರಿದ್ದರು. ಬಾಲಿವುಡ್​ನ ‘ಉರಿ’ ಚಿತ್ರದ ನಿರ್ದೇಶಕ ಆದಿತ್ಯ ಧಾರ್​ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿಚಾರವನ್ನು ಯಾಮಿ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತ ಮಾಡಿದ್ದಾರೆ. ಅವರು ಹಂಚಿಕೊಂಡ ಫೋಟೋದ ಕಮೆಂಟ್​ ಬಾಕ್ಸ್​ನಲ್ಲಿ ಸಣ್ಣ ಕಿತ್ತಾಟವೊಂದು ನಡೆದಿದೆ. ಇದಕ್ಕೆ ಕಾರಣ ನಟಿ ಕಂಗನಾ ರಣಾವತ್​.  

ಮದುವೆ ಫೋಟೋಗಳನ್ನು ಹಂಚಿಕೊಂಡಿರುವ ಯಾಮಿ ಗೌತಮ್​ ಅವರು ಎಲ್ಲರ ಆಶೀರ್ವಾದ ಕೋರಿದ್ದರು. ‘ಕುಟುಂಬದವರ ಆಶೀರ್ವಾದದೊಂದಿಗೆ ನಾವು ಇಂದು ಮದುವೆ ಆದೆವು. ಕೇವಲ ನಮ್ಮ ಆಪ್ತರ ಸಮ್ಮುಖದಲ್ಲಿ ಖಾಸಗಿಯಾಗಿ ಈ ವಿವಾಹ ಸಮಾರಂಭ ನೆರವೇರಿತು. ಪ್ರೀತಿ-ಸ್ನೇಹದ ನಮ್ಮ ಈ ಹೊಸ ಪಯಣಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು’ ಎಂದು ಕೋರಿದ್ದರು. ಅಲ್ಲದೆ, ಭಾನುವಾರ ಸಾಲು ಸಾಲು ಫೋಟೋಗಳನ್ನು ಯಾಮಿ ಹಂಚಿಕೊಂಡಿದ್ದರು.

ಈ ಫೋಟೋಗೆ ಸಾಕಷ್ಟು ಸೆಲೆಬ್ರಿಟಿಗಳು ಕಮೆಂಟ್​ ಮಾಡಿ ಶುಭಾಶಯ ತಿಳಿಸಿದ್ದಾರೆ. ಬಾಲಿವುಡ್​ ನಟ ವಿಕ್ರಾಂತ್​ ಮಾಸ್ಸಿ ಕೂಡ ಇದಕ್ಕೆ ಕಮೆಂಟ್​ ಮಾಡಿ ನಗೆಚಟಾಕಿ ಹಾರಿಸಿದ್ದಾರೆ. ‘ರಾಧೆ ಮಾ ಅವರಂತೆ ಶುದ್ಧ ಮತ್ತು ಧರ್ಮನಿಷ್ಠರಾಗಿ ಕಾಣುತ್ತಿದ್ದೀರಿ’ ಎಂದು ಯಾಮಿ ಫೋಟೋಗೆ ಅವರು ಕಮೆಂಟ್​ ಮಾಡಿದ್ದಾರೆ. ಈ ಕಮೆಂಟ್​ ಓದಿದ ಕಂಗನಾ ಸಿಟ್ಟಾಗಿದ್ದಾರೆ, ‘ಈ ಜಿರಲೆ ಎಲ್ಲಿಂದ ಬಂತು? ಯಾರಾದರೂ ನನ್ನ ಚಪ್ಪಲಿ  ತನ್ನಿ ಎಂದು ಹೇಳುವ ಮೂಲಕ ವಿವಾದ ಹೊತ್ತಿಸಿದ್ದಾರೆ. ಈ ಸ್ಕ್ರೀನ್​ಶಾಟ್​ಗಳು ಸಾಕಷ್ಟು ವೈರಲ್​ ಆಗಿದೆ.

ಕನ್ನಡದಲ್ಲಿ ‘ಉಲ್ಲಾಸ ಉತ್ಸಾಹ’ ಸಿನಿಮಾ ಮಾಡಿದ ಬಳಿಕ ಬೇರೆ ಬೇರೆ ಭಾಷೆಗಳಿಂದ ಯಾಮಿ ಗೌತಮ್​ ಅವರಿಗೆ ಆಫರ್​ಗಳು ಬರಲಾರಂಭಿಸಿದವು. ಸದ್ಯ ಅವರು ಹಿಂದಿಯ ‘ಭೂತ್​ ಪೊಲೀಸ್’ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ನಟಿ ಪ್ರಣಿತಾ ಕೂಡ ಇದೇ ರೀತಿ ಗುಟ್ಟಾಗಿ ಮದುವೆ ಆಗಿದ್ದರು.

ಇದನ್ನೂ ಓದಿ: ‘ಉರಿ’ ನಿರ್ದೇಶಕನ ಜೊತೆ ಗುಟ್ಟಾಗಿ ಮದುವೆಯಾದ ‘ಉಲ್ಲಾಸ ಉತ್ಸಾಹ’ ಚಿತ್ರದ ನಟಿ ಯಾಮಿ ಗೌತಮ್​

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ