ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ

ಕನ್ನಡದಲ್ಲಿ ‘ಉಲ್ಲಾಸ ಉತ್ಸಾಹೌ ಸಿನಿಮಾ ಮಾಡಿದ ಬಳಿಕ ಬೇರೆ ಬೇರೆ ಭಾಷೆಗಳಿಂದ ಯಾಮಿ ಗೌತಮ್​ ಅವರಿಗೆ ಆಫರ್​ಗಳು ಬರಲಾರಂಭಿಸಿದವು. ಸದ್ಯ ಅವರು ಹಿಂದಿಯ ‘ಭೂತ್​ ಪೊಲೀಸ್’ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ
ಕಂಗನಾ-ಯಾಮಿ
Follow us
|

Updated on: Jun 06, 2021 | 9:57 PM

‘ಉಲ್ಲಾಸ ಉತ್ಸಾಹ’ ಸಿನಿಮಾದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​ ಜೊತೆ ತೆರೆ ಹಂಚಿಕೊಂಡಿದ್ದ ನಟಿ ಯಾಮಿ ಗೌತಮ್​ ಅವರು ಸದ್ದಿಲ್ಲದೇ ಹಸೆಮಣೆ ಏರಿದ್ದರು. ಬಾಲಿವುಡ್​ನ ‘ಉರಿ’ ಚಿತ್ರದ ನಿರ್ದೇಶಕ ಆದಿತ್ಯ ಧಾರ್​ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿಚಾರವನ್ನು ಯಾಮಿ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತ ಮಾಡಿದ್ದಾರೆ. ಅವರು ಹಂಚಿಕೊಂಡ ಫೋಟೋದ ಕಮೆಂಟ್​ ಬಾಕ್ಸ್​ನಲ್ಲಿ ಸಣ್ಣ ಕಿತ್ತಾಟವೊಂದು ನಡೆದಿದೆ. ಇದಕ್ಕೆ ಕಾರಣ ನಟಿ ಕಂಗನಾ ರಣಾವತ್​.  

ಮದುವೆ ಫೋಟೋಗಳನ್ನು ಹಂಚಿಕೊಂಡಿರುವ ಯಾಮಿ ಗೌತಮ್​ ಅವರು ಎಲ್ಲರ ಆಶೀರ್ವಾದ ಕೋರಿದ್ದರು. ‘ಕುಟುಂಬದವರ ಆಶೀರ್ವಾದದೊಂದಿಗೆ ನಾವು ಇಂದು ಮದುವೆ ಆದೆವು. ಕೇವಲ ನಮ್ಮ ಆಪ್ತರ ಸಮ್ಮುಖದಲ್ಲಿ ಖಾಸಗಿಯಾಗಿ ಈ ವಿವಾಹ ಸಮಾರಂಭ ನೆರವೇರಿತು. ಪ್ರೀತಿ-ಸ್ನೇಹದ ನಮ್ಮ ಈ ಹೊಸ ಪಯಣಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು’ ಎಂದು ಕೋರಿದ್ದರು. ಅಲ್ಲದೆ, ಭಾನುವಾರ ಸಾಲು ಸಾಲು ಫೋಟೋಗಳನ್ನು ಯಾಮಿ ಹಂಚಿಕೊಂಡಿದ್ದರು.

ಈ ಫೋಟೋಗೆ ಸಾಕಷ್ಟು ಸೆಲೆಬ್ರಿಟಿಗಳು ಕಮೆಂಟ್​ ಮಾಡಿ ಶುಭಾಶಯ ತಿಳಿಸಿದ್ದಾರೆ. ಬಾಲಿವುಡ್​ ನಟ ವಿಕ್ರಾಂತ್​ ಮಾಸ್ಸಿ ಕೂಡ ಇದಕ್ಕೆ ಕಮೆಂಟ್​ ಮಾಡಿ ನಗೆಚಟಾಕಿ ಹಾರಿಸಿದ್ದಾರೆ. ‘ರಾಧೆ ಮಾ ಅವರಂತೆ ಶುದ್ಧ ಮತ್ತು ಧರ್ಮನಿಷ್ಠರಾಗಿ ಕಾಣುತ್ತಿದ್ದೀರಿ’ ಎಂದು ಯಾಮಿ ಫೋಟೋಗೆ ಅವರು ಕಮೆಂಟ್​ ಮಾಡಿದ್ದಾರೆ. ಈ ಕಮೆಂಟ್​ ಓದಿದ ಕಂಗನಾ ಸಿಟ್ಟಾಗಿದ್ದಾರೆ, ‘ಈ ಜಿರಲೆ ಎಲ್ಲಿಂದ ಬಂತು? ಯಾರಾದರೂ ನನ್ನ ಚಪ್ಪಲಿ  ತನ್ನಿ ಎಂದು ಹೇಳುವ ಮೂಲಕ ವಿವಾದ ಹೊತ್ತಿಸಿದ್ದಾರೆ. ಈ ಸ್ಕ್ರೀನ್​ಶಾಟ್​ಗಳು ಸಾಕಷ್ಟು ವೈರಲ್​ ಆಗಿದೆ.

ಕನ್ನಡದಲ್ಲಿ ‘ಉಲ್ಲಾಸ ಉತ್ಸಾಹ’ ಸಿನಿಮಾ ಮಾಡಿದ ಬಳಿಕ ಬೇರೆ ಬೇರೆ ಭಾಷೆಗಳಿಂದ ಯಾಮಿ ಗೌತಮ್​ ಅವರಿಗೆ ಆಫರ್​ಗಳು ಬರಲಾರಂಭಿಸಿದವು. ಸದ್ಯ ಅವರು ಹಿಂದಿಯ ‘ಭೂತ್​ ಪೊಲೀಸ್’ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ನಟಿ ಪ್ರಣಿತಾ ಕೂಡ ಇದೇ ರೀತಿ ಗುಟ್ಟಾಗಿ ಮದುವೆ ಆಗಿದ್ದರು.

ಇದನ್ನೂ ಓದಿ: ‘ಉರಿ’ ನಿರ್ದೇಶಕನ ಜೊತೆ ಗುಟ್ಟಾಗಿ ಮದುವೆಯಾದ ‘ಉಲ್ಲಾಸ ಉತ್ಸಾಹ’ ಚಿತ್ರದ ನಟಿ ಯಾಮಿ ಗೌತಮ್​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ