AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ

ಕನ್ನಡದಲ್ಲಿ ‘ಉಲ್ಲಾಸ ಉತ್ಸಾಹೌ ಸಿನಿಮಾ ಮಾಡಿದ ಬಳಿಕ ಬೇರೆ ಬೇರೆ ಭಾಷೆಗಳಿಂದ ಯಾಮಿ ಗೌತಮ್​ ಅವರಿಗೆ ಆಫರ್​ಗಳು ಬರಲಾರಂಭಿಸಿದವು. ಸದ್ಯ ಅವರು ಹಿಂದಿಯ ‘ಭೂತ್​ ಪೊಲೀಸ್’ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ
ಕಂಗನಾ-ಯಾಮಿ
ರಾಜೇಶ್ ದುಗ್ಗುಮನೆ
|

Updated on: Jun 06, 2021 | 9:57 PM

Share

‘ಉಲ್ಲಾಸ ಉತ್ಸಾಹ’ ಸಿನಿಮಾದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​ ಜೊತೆ ತೆರೆ ಹಂಚಿಕೊಂಡಿದ್ದ ನಟಿ ಯಾಮಿ ಗೌತಮ್​ ಅವರು ಸದ್ದಿಲ್ಲದೇ ಹಸೆಮಣೆ ಏರಿದ್ದರು. ಬಾಲಿವುಡ್​ನ ‘ಉರಿ’ ಚಿತ್ರದ ನಿರ್ದೇಶಕ ಆದಿತ್ಯ ಧಾರ್​ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿಚಾರವನ್ನು ಯಾಮಿ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತ ಮಾಡಿದ್ದಾರೆ. ಅವರು ಹಂಚಿಕೊಂಡ ಫೋಟೋದ ಕಮೆಂಟ್​ ಬಾಕ್ಸ್​ನಲ್ಲಿ ಸಣ್ಣ ಕಿತ್ತಾಟವೊಂದು ನಡೆದಿದೆ. ಇದಕ್ಕೆ ಕಾರಣ ನಟಿ ಕಂಗನಾ ರಣಾವತ್​.  

ಮದುವೆ ಫೋಟೋಗಳನ್ನು ಹಂಚಿಕೊಂಡಿರುವ ಯಾಮಿ ಗೌತಮ್​ ಅವರು ಎಲ್ಲರ ಆಶೀರ್ವಾದ ಕೋರಿದ್ದರು. ‘ಕುಟುಂಬದವರ ಆಶೀರ್ವಾದದೊಂದಿಗೆ ನಾವು ಇಂದು ಮದುವೆ ಆದೆವು. ಕೇವಲ ನಮ್ಮ ಆಪ್ತರ ಸಮ್ಮುಖದಲ್ಲಿ ಖಾಸಗಿಯಾಗಿ ಈ ವಿವಾಹ ಸಮಾರಂಭ ನೆರವೇರಿತು. ಪ್ರೀತಿ-ಸ್ನೇಹದ ನಮ್ಮ ಈ ಹೊಸ ಪಯಣಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು’ ಎಂದು ಕೋರಿದ್ದರು. ಅಲ್ಲದೆ, ಭಾನುವಾರ ಸಾಲು ಸಾಲು ಫೋಟೋಗಳನ್ನು ಯಾಮಿ ಹಂಚಿಕೊಂಡಿದ್ದರು.

ಈ ಫೋಟೋಗೆ ಸಾಕಷ್ಟು ಸೆಲೆಬ್ರಿಟಿಗಳು ಕಮೆಂಟ್​ ಮಾಡಿ ಶುಭಾಶಯ ತಿಳಿಸಿದ್ದಾರೆ. ಬಾಲಿವುಡ್​ ನಟ ವಿಕ್ರಾಂತ್​ ಮಾಸ್ಸಿ ಕೂಡ ಇದಕ್ಕೆ ಕಮೆಂಟ್​ ಮಾಡಿ ನಗೆಚಟಾಕಿ ಹಾರಿಸಿದ್ದಾರೆ. ‘ರಾಧೆ ಮಾ ಅವರಂತೆ ಶುದ್ಧ ಮತ್ತು ಧರ್ಮನಿಷ್ಠರಾಗಿ ಕಾಣುತ್ತಿದ್ದೀರಿ’ ಎಂದು ಯಾಮಿ ಫೋಟೋಗೆ ಅವರು ಕಮೆಂಟ್​ ಮಾಡಿದ್ದಾರೆ. ಈ ಕಮೆಂಟ್​ ಓದಿದ ಕಂಗನಾ ಸಿಟ್ಟಾಗಿದ್ದಾರೆ, ‘ಈ ಜಿರಲೆ ಎಲ್ಲಿಂದ ಬಂತು? ಯಾರಾದರೂ ನನ್ನ ಚಪ್ಪಲಿ  ತನ್ನಿ ಎಂದು ಹೇಳುವ ಮೂಲಕ ವಿವಾದ ಹೊತ್ತಿಸಿದ್ದಾರೆ. ಈ ಸ್ಕ್ರೀನ್​ಶಾಟ್​ಗಳು ಸಾಕಷ್ಟು ವೈರಲ್​ ಆಗಿದೆ.

ಕನ್ನಡದಲ್ಲಿ ‘ಉಲ್ಲಾಸ ಉತ್ಸಾಹ’ ಸಿನಿಮಾ ಮಾಡಿದ ಬಳಿಕ ಬೇರೆ ಬೇರೆ ಭಾಷೆಗಳಿಂದ ಯಾಮಿ ಗೌತಮ್​ ಅವರಿಗೆ ಆಫರ್​ಗಳು ಬರಲಾರಂಭಿಸಿದವು. ಸದ್ಯ ಅವರು ಹಿಂದಿಯ ‘ಭೂತ್​ ಪೊಲೀಸ್’ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ನಟಿ ಪ್ರಣಿತಾ ಕೂಡ ಇದೇ ರೀತಿ ಗುಟ್ಟಾಗಿ ಮದುವೆ ಆಗಿದ್ದರು.

ಇದನ್ನೂ ಓದಿ: ‘ಉರಿ’ ನಿರ್ದೇಶಕನ ಜೊತೆ ಗುಟ್ಟಾಗಿ ಮದುವೆಯಾದ ‘ಉಲ್ಲಾಸ ಉತ್ಸಾಹ’ ಚಿತ್ರದ ನಟಿ ಯಾಮಿ ಗೌತಮ್​

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು