Kangana Ranaut: ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?

Sonu Sood: ‘ಈತ ಎಂಥ ಫ್ರಾಡ್. ಈ ದುಸ್ಥಿತಿಯನ್ನು ಹಣ ಮಾಡಲು ಬಳಸಿಕೊಂಡಿದ್ದಾನೆ. ಆಕ್ಸಿಜನ್​ ಕಾನ್ಸಂಟ್ರೇಟರ್​ ಮಷಿನ್ ಬೆಲೆ 2 ಲಕ್ಷ ರೂಪಾಯಿ’ ಎಂದು ಟ್ವೀಟ್​ ಮಾಡಲಾಗಿದೆ.

Kangana Ranaut: ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?
ಕಂಗನಾ ರಣಾವತ್​ - ಸೋನು ಸೂದ್​
Follow us
|

Updated on: May 04, 2021 | 1:01 PM

ನಟ ಸೋನು ಸೂದ್​ ಅವರ ಸಮಾಜ ಸೇವೆ ಬಗ್ಗೆ ಹೊಸದಾಗಿ ಹೇಳಬೇಕಾದ್ದು ಏನೂ ಇಲ್ಲ. ಕಳೆದ ವರ್ಷ ಲಾಕ್​ಡೌನ್​ ಕಾಲದಿಂದಲೂ ಅವರು ಜನ ಸೇವೆಗಾಗಿ ಪಣ ತೊಟ್ಟಿದ್ದಾರೆ. ಲಕ್ಷಾಂತರ ಜನರಿಗೆ ಸಹಾಯ ಮಾಡಿದ್ದಾರೆ. ಇಂದಿಗೂ ಅವರ ಈ ಕಾರ್ಯ ಮುಂದುವರೆಯುತ್ತಿದೆ. ಸೋನು ಸೂದ್​ ಅವರನ್ನು ಎಷ್ಟೋ ಜನರು ದೇವರು ಎಂದೇ ಪೂಜಿಸುತ್ತಿದ್ದಾರೆ! ಆದರೆ ಅಂಥ ನಟನನ್ನು ಕಂಗನಾ ಈಗ ಫ್ರಾಡ್​ ಎಂದು ಕರೆದಿದ್ದಾರೆ.

ಬಾಲಿವುಡ್​ ಮಾತ್ರವಲ್ಲದೆ ದಕ್ಷಿಣ ಭಾರತದ ಭಾಷೆಯ ಸಿನಿಮಾಗಳಲ್ಲೂ ಫೇಮಸ್​ ಆಗಿರುವ ಸೋನು ಸೂದ್​ ಅವರು ಹಲವು ಕಂಪನಿಗಳಿಗೆ ರಾಯಬಾರಿ ಆಗಿದ್ದಾರೆ. ಅದೇ ರೀತಿ ಆಕ್ಸಿಜನ್​ ಕಾನ್ಸಂಟ್ರೇಟರ್​ ಮಷಿನ್​ಗಳ ಒಂದು ಕಂಪನಿಗೂ ಅವರು ರಾಯಬಾರಿ. ಅದರ ಒಂದು ಜಾಹೀರಾತಿನ ಚಿತ್ರವನ್ನು ಬಳಸಿಕೊಂಡು ಟ್ವಿಟರ್​ ಬಳಕೆದಾರರೊಬ್ಬರು ಟ್ರೋಲ್​ ಮಾಡಿದ್ದಾರೆ.

‘ಈತ ಎಂಥ ಫ್ರಾಡ್. ಈ ದುಸ್ಥಿತಿಯನ್ನು ಹಣ ಮಾಡಲು ಬಳಸಿಕೊಂಡಿದ್ದಾನೆ. ಆಕ್ಸಿಜನ್​ ಕಾನ್ಸಂಟ್ರೇಟರ್​ ಮಷಿನ್ ಬೆಲೆ 2 ಲಕ್ಷ ರೂಪಾಯಿ’ ಎಂದು ಟ್ವೀಟ್​ ಮಾಡಲಾಗಿದೆ. ಅದನ್ನು ನಟಿ ಕಂಗನಾ ರಣಾವತ್​ ಕೂಡ ಲೈಕ್​ ಮಾಡಿದ್ದಾರೆ. ಆ ಮೂಲಕ ಸೋನು ಸೂದ್​ ಫ್ರಾಡ್​ ಎಂಬುದಕ್ಕೆ ತಮ್ಮ ಸಹಮತ ಕೂಡ ಇದೆ ಎಂಬುದನ್ನು ಪರೋಕ್ಷವಾಗಿ ಕಂಗನಾ ಹೇಳಿದಂತಾಗಿದೆ. ಇದು ಈಗ ಸೋಶಿಯಲ್​ ಮೀಡಿಯಾದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ.

(ಕಂಗನಾ ಲೈಕ್​ ಮಾಡಿರುವ ಟ್ವೀಟ್​)

ಕೊರೊನಾ ವೈರಸ್​ ಎರಡನೇ ಅಲೆಗೆ ಜನರು ಕಂಗಾಲಾಗಿದ್ದಾರೆ. ದಿನದಿಂದ ದಿನಕ್ಕೆ ವಾತಾವರಣ ಬಿಗಿಯಾಗುತ್ತಿದೆ. ಸೂಕ್ತ ಸಮಯಕ್ಕೆ ವೈದ್ಯಕೀಯ ಸೌಲಭ್ಯಗಳು ಸಿಗುತ್ತಿಲ್ಲ. ಅದರಲ್ಲೂ ಆಕ್ಸಿಜನ್​ ಮತ್ತು ವೆಂಟಿಲೇಟರ್​ಗಾಗಿ ಸೋಂಕಿತರು ಪರದಾಡುತ್ತಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್​ ಕೂಡ ಸಿಗದವರ ಕಷ್ಟ ಹೇಳತೀರದು. ಇಂಥ ಸಮಯದಲ್ಲಿ ಕೆಲವು ಸೆಲೆಬ್ರಿಟಿಗಳು ಜನರ ಕಷ್ಟಕ್ಕೆ ನೆರವಾಗುತ್ತಿದ್ದಾರೆ. ಆದರೆ ಕಂಗನಾ ಏನೂ ಮಾಡಿಲ್ಲ ಎಂದು ಇತ್ತೀಚೆಗೆ ನಟಿ ರಾಖಿ ಸಾವಂತ್​ ಅವರು ಕಂಗನಾ ವಿರುದ್ಧ ಗುಡುಗಿದ್ದರು.

ಹರ್ಷವರ್ಧನ್​ ರಾಣೆ, ಸುನೀಲ್​ ಶೆಟ್ಟಿ, ಸುಷ್ಮಿತಾ ಸೇನ್,​ ಜಗ್ಗೇಶ್, ಅರ್ಜುನ್​ ಗೌಡ, ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ ಮುಂತಾದ ಸೆಲೆಬ್ರಿಟಿಗಳು ಈ ಕಷ್ಟದ ಸಂದರ್ಭದಲ್ಲಿ ಜನರ ಸಹಾಯಕ್ಕೆ ನಿಂತಿದ್ದಾರೆ.

ಇದನ್ನೂ ಓದಿ:

100 ಕೋಟಿ ಸಿನಿಮಾದಲ್ಲಿ ನಟಿಸುವುದಕ್ಕಿಂತ ಸಹಾಯ ಮಾಡುವುದರಲ್ಲಿ ಖುಷಿ ಸಿಗುತ್ತೆ : ನಟ ಸೋನು ಸೂದ್

ಬೆಂಗಳೂರು ಪೊಲೀಸರಿಗೆ ನೆರವಿನ ಹಸ್ತ ನೀಡಿದ ಬಾಲಿವುಡ್ ನಟ ಸೋನು ಸೂದ್

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ