AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?

Sonu Sood: ‘ಈತ ಎಂಥ ಫ್ರಾಡ್. ಈ ದುಸ್ಥಿತಿಯನ್ನು ಹಣ ಮಾಡಲು ಬಳಸಿಕೊಂಡಿದ್ದಾನೆ. ಆಕ್ಸಿಜನ್​ ಕಾನ್ಸಂಟ್ರೇಟರ್​ ಮಷಿನ್ ಬೆಲೆ 2 ಲಕ್ಷ ರೂಪಾಯಿ’ ಎಂದು ಟ್ವೀಟ್​ ಮಾಡಲಾಗಿದೆ.

Kangana Ranaut: ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?
ಕಂಗನಾ ರಣಾವತ್​ - ಸೋನು ಸೂದ್​
ಮದನ್​ ಕುಮಾರ್​
|

Updated on: May 04, 2021 | 1:01 PM

Share

ನಟ ಸೋನು ಸೂದ್​ ಅವರ ಸಮಾಜ ಸೇವೆ ಬಗ್ಗೆ ಹೊಸದಾಗಿ ಹೇಳಬೇಕಾದ್ದು ಏನೂ ಇಲ್ಲ. ಕಳೆದ ವರ್ಷ ಲಾಕ್​ಡೌನ್​ ಕಾಲದಿಂದಲೂ ಅವರು ಜನ ಸೇವೆಗಾಗಿ ಪಣ ತೊಟ್ಟಿದ್ದಾರೆ. ಲಕ್ಷಾಂತರ ಜನರಿಗೆ ಸಹಾಯ ಮಾಡಿದ್ದಾರೆ. ಇಂದಿಗೂ ಅವರ ಈ ಕಾರ್ಯ ಮುಂದುವರೆಯುತ್ತಿದೆ. ಸೋನು ಸೂದ್​ ಅವರನ್ನು ಎಷ್ಟೋ ಜನರು ದೇವರು ಎಂದೇ ಪೂಜಿಸುತ್ತಿದ್ದಾರೆ! ಆದರೆ ಅಂಥ ನಟನನ್ನು ಕಂಗನಾ ಈಗ ಫ್ರಾಡ್​ ಎಂದು ಕರೆದಿದ್ದಾರೆ.

ಬಾಲಿವುಡ್​ ಮಾತ್ರವಲ್ಲದೆ ದಕ್ಷಿಣ ಭಾರತದ ಭಾಷೆಯ ಸಿನಿಮಾಗಳಲ್ಲೂ ಫೇಮಸ್​ ಆಗಿರುವ ಸೋನು ಸೂದ್​ ಅವರು ಹಲವು ಕಂಪನಿಗಳಿಗೆ ರಾಯಬಾರಿ ಆಗಿದ್ದಾರೆ. ಅದೇ ರೀತಿ ಆಕ್ಸಿಜನ್​ ಕಾನ್ಸಂಟ್ರೇಟರ್​ ಮಷಿನ್​ಗಳ ಒಂದು ಕಂಪನಿಗೂ ಅವರು ರಾಯಬಾರಿ. ಅದರ ಒಂದು ಜಾಹೀರಾತಿನ ಚಿತ್ರವನ್ನು ಬಳಸಿಕೊಂಡು ಟ್ವಿಟರ್​ ಬಳಕೆದಾರರೊಬ್ಬರು ಟ್ರೋಲ್​ ಮಾಡಿದ್ದಾರೆ.

‘ಈತ ಎಂಥ ಫ್ರಾಡ್. ಈ ದುಸ್ಥಿತಿಯನ್ನು ಹಣ ಮಾಡಲು ಬಳಸಿಕೊಂಡಿದ್ದಾನೆ. ಆಕ್ಸಿಜನ್​ ಕಾನ್ಸಂಟ್ರೇಟರ್​ ಮಷಿನ್ ಬೆಲೆ 2 ಲಕ್ಷ ರೂಪಾಯಿ’ ಎಂದು ಟ್ವೀಟ್​ ಮಾಡಲಾಗಿದೆ. ಅದನ್ನು ನಟಿ ಕಂಗನಾ ರಣಾವತ್​ ಕೂಡ ಲೈಕ್​ ಮಾಡಿದ್ದಾರೆ. ಆ ಮೂಲಕ ಸೋನು ಸೂದ್​ ಫ್ರಾಡ್​ ಎಂಬುದಕ್ಕೆ ತಮ್ಮ ಸಹಮತ ಕೂಡ ಇದೆ ಎಂಬುದನ್ನು ಪರೋಕ್ಷವಾಗಿ ಕಂಗನಾ ಹೇಳಿದಂತಾಗಿದೆ. ಇದು ಈಗ ಸೋಶಿಯಲ್​ ಮೀಡಿಯಾದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ.

(ಕಂಗನಾ ಲೈಕ್​ ಮಾಡಿರುವ ಟ್ವೀಟ್​)

ಕೊರೊನಾ ವೈರಸ್​ ಎರಡನೇ ಅಲೆಗೆ ಜನರು ಕಂಗಾಲಾಗಿದ್ದಾರೆ. ದಿನದಿಂದ ದಿನಕ್ಕೆ ವಾತಾವರಣ ಬಿಗಿಯಾಗುತ್ತಿದೆ. ಸೂಕ್ತ ಸಮಯಕ್ಕೆ ವೈದ್ಯಕೀಯ ಸೌಲಭ್ಯಗಳು ಸಿಗುತ್ತಿಲ್ಲ. ಅದರಲ್ಲೂ ಆಕ್ಸಿಜನ್​ ಮತ್ತು ವೆಂಟಿಲೇಟರ್​ಗಾಗಿ ಸೋಂಕಿತರು ಪರದಾಡುತ್ತಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್​ ಕೂಡ ಸಿಗದವರ ಕಷ್ಟ ಹೇಳತೀರದು. ಇಂಥ ಸಮಯದಲ್ಲಿ ಕೆಲವು ಸೆಲೆಬ್ರಿಟಿಗಳು ಜನರ ಕಷ್ಟಕ್ಕೆ ನೆರವಾಗುತ್ತಿದ್ದಾರೆ. ಆದರೆ ಕಂಗನಾ ಏನೂ ಮಾಡಿಲ್ಲ ಎಂದು ಇತ್ತೀಚೆಗೆ ನಟಿ ರಾಖಿ ಸಾವಂತ್​ ಅವರು ಕಂಗನಾ ವಿರುದ್ಧ ಗುಡುಗಿದ್ದರು.

ಹರ್ಷವರ್ಧನ್​ ರಾಣೆ, ಸುನೀಲ್​ ಶೆಟ್ಟಿ, ಸುಷ್ಮಿತಾ ಸೇನ್,​ ಜಗ್ಗೇಶ್, ಅರ್ಜುನ್​ ಗೌಡ, ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ ಮುಂತಾದ ಸೆಲೆಬ್ರಿಟಿಗಳು ಈ ಕಷ್ಟದ ಸಂದರ್ಭದಲ್ಲಿ ಜನರ ಸಹಾಯಕ್ಕೆ ನಿಂತಿದ್ದಾರೆ.

ಇದನ್ನೂ ಓದಿ:

100 ಕೋಟಿ ಸಿನಿಮಾದಲ್ಲಿ ನಟಿಸುವುದಕ್ಕಿಂತ ಸಹಾಯ ಮಾಡುವುದರಲ್ಲಿ ಖುಷಿ ಸಿಗುತ್ತೆ : ನಟ ಸೋನು ಸೂದ್

ಬೆಂಗಳೂರು ಪೊಲೀಸರಿಗೆ ನೆರವಿನ ಹಸ್ತ ನೀಡಿದ ಬಾಲಿವುಡ್ ನಟ ಸೋನು ಸೂದ್

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ