AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?

Sonu Sood: ‘ಈತ ಎಂಥ ಫ್ರಾಡ್. ಈ ದುಸ್ಥಿತಿಯನ್ನು ಹಣ ಮಾಡಲು ಬಳಸಿಕೊಂಡಿದ್ದಾನೆ. ಆಕ್ಸಿಜನ್​ ಕಾನ್ಸಂಟ್ರೇಟರ್​ ಮಷಿನ್ ಬೆಲೆ 2 ಲಕ್ಷ ರೂಪಾಯಿ’ ಎಂದು ಟ್ವೀಟ್​ ಮಾಡಲಾಗಿದೆ.

Kangana Ranaut: ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?
ಕಂಗನಾ ರಣಾವತ್​ - ಸೋನು ಸೂದ್​
ಮದನ್​ ಕುಮಾರ್​
|

Updated on: May 04, 2021 | 1:01 PM

Share

ನಟ ಸೋನು ಸೂದ್​ ಅವರ ಸಮಾಜ ಸೇವೆ ಬಗ್ಗೆ ಹೊಸದಾಗಿ ಹೇಳಬೇಕಾದ್ದು ಏನೂ ಇಲ್ಲ. ಕಳೆದ ವರ್ಷ ಲಾಕ್​ಡೌನ್​ ಕಾಲದಿಂದಲೂ ಅವರು ಜನ ಸೇವೆಗಾಗಿ ಪಣ ತೊಟ್ಟಿದ್ದಾರೆ. ಲಕ್ಷಾಂತರ ಜನರಿಗೆ ಸಹಾಯ ಮಾಡಿದ್ದಾರೆ. ಇಂದಿಗೂ ಅವರ ಈ ಕಾರ್ಯ ಮುಂದುವರೆಯುತ್ತಿದೆ. ಸೋನು ಸೂದ್​ ಅವರನ್ನು ಎಷ್ಟೋ ಜನರು ದೇವರು ಎಂದೇ ಪೂಜಿಸುತ್ತಿದ್ದಾರೆ! ಆದರೆ ಅಂಥ ನಟನನ್ನು ಕಂಗನಾ ಈಗ ಫ್ರಾಡ್​ ಎಂದು ಕರೆದಿದ್ದಾರೆ.

ಬಾಲಿವುಡ್​ ಮಾತ್ರವಲ್ಲದೆ ದಕ್ಷಿಣ ಭಾರತದ ಭಾಷೆಯ ಸಿನಿಮಾಗಳಲ್ಲೂ ಫೇಮಸ್​ ಆಗಿರುವ ಸೋನು ಸೂದ್​ ಅವರು ಹಲವು ಕಂಪನಿಗಳಿಗೆ ರಾಯಬಾರಿ ಆಗಿದ್ದಾರೆ. ಅದೇ ರೀತಿ ಆಕ್ಸಿಜನ್​ ಕಾನ್ಸಂಟ್ರೇಟರ್​ ಮಷಿನ್​ಗಳ ಒಂದು ಕಂಪನಿಗೂ ಅವರು ರಾಯಬಾರಿ. ಅದರ ಒಂದು ಜಾಹೀರಾತಿನ ಚಿತ್ರವನ್ನು ಬಳಸಿಕೊಂಡು ಟ್ವಿಟರ್​ ಬಳಕೆದಾರರೊಬ್ಬರು ಟ್ರೋಲ್​ ಮಾಡಿದ್ದಾರೆ.

‘ಈತ ಎಂಥ ಫ್ರಾಡ್. ಈ ದುಸ್ಥಿತಿಯನ್ನು ಹಣ ಮಾಡಲು ಬಳಸಿಕೊಂಡಿದ್ದಾನೆ. ಆಕ್ಸಿಜನ್​ ಕಾನ್ಸಂಟ್ರೇಟರ್​ ಮಷಿನ್ ಬೆಲೆ 2 ಲಕ್ಷ ರೂಪಾಯಿ’ ಎಂದು ಟ್ವೀಟ್​ ಮಾಡಲಾಗಿದೆ. ಅದನ್ನು ನಟಿ ಕಂಗನಾ ರಣಾವತ್​ ಕೂಡ ಲೈಕ್​ ಮಾಡಿದ್ದಾರೆ. ಆ ಮೂಲಕ ಸೋನು ಸೂದ್​ ಫ್ರಾಡ್​ ಎಂಬುದಕ್ಕೆ ತಮ್ಮ ಸಹಮತ ಕೂಡ ಇದೆ ಎಂಬುದನ್ನು ಪರೋಕ್ಷವಾಗಿ ಕಂಗನಾ ಹೇಳಿದಂತಾಗಿದೆ. ಇದು ಈಗ ಸೋಶಿಯಲ್​ ಮೀಡಿಯಾದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ.

(ಕಂಗನಾ ಲೈಕ್​ ಮಾಡಿರುವ ಟ್ವೀಟ್​)

ಕೊರೊನಾ ವೈರಸ್​ ಎರಡನೇ ಅಲೆಗೆ ಜನರು ಕಂಗಾಲಾಗಿದ್ದಾರೆ. ದಿನದಿಂದ ದಿನಕ್ಕೆ ವಾತಾವರಣ ಬಿಗಿಯಾಗುತ್ತಿದೆ. ಸೂಕ್ತ ಸಮಯಕ್ಕೆ ವೈದ್ಯಕೀಯ ಸೌಲಭ್ಯಗಳು ಸಿಗುತ್ತಿಲ್ಲ. ಅದರಲ್ಲೂ ಆಕ್ಸಿಜನ್​ ಮತ್ತು ವೆಂಟಿಲೇಟರ್​ಗಾಗಿ ಸೋಂಕಿತರು ಪರದಾಡುತ್ತಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್​ ಕೂಡ ಸಿಗದವರ ಕಷ್ಟ ಹೇಳತೀರದು. ಇಂಥ ಸಮಯದಲ್ಲಿ ಕೆಲವು ಸೆಲೆಬ್ರಿಟಿಗಳು ಜನರ ಕಷ್ಟಕ್ಕೆ ನೆರವಾಗುತ್ತಿದ್ದಾರೆ. ಆದರೆ ಕಂಗನಾ ಏನೂ ಮಾಡಿಲ್ಲ ಎಂದು ಇತ್ತೀಚೆಗೆ ನಟಿ ರಾಖಿ ಸಾವಂತ್​ ಅವರು ಕಂಗನಾ ವಿರುದ್ಧ ಗುಡುಗಿದ್ದರು.

ಹರ್ಷವರ್ಧನ್​ ರಾಣೆ, ಸುನೀಲ್​ ಶೆಟ್ಟಿ, ಸುಷ್ಮಿತಾ ಸೇನ್,​ ಜಗ್ಗೇಶ್, ಅರ್ಜುನ್​ ಗೌಡ, ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ ಮುಂತಾದ ಸೆಲೆಬ್ರಿಟಿಗಳು ಈ ಕಷ್ಟದ ಸಂದರ್ಭದಲ್ಲಿ ಜನರ ಸಹಾಯಕ್ಕೆ ನಿಂತಿದ್ದಾರೆ.

ಇದನ್ನೂ ಓದಿ:

100 ಕೋಟಿ ಸಿನಿಮಾದಲ್ಲಿ ನಟಿಸುವುದಕ್ಕಿಂತ ಸಹಾಯ ಮಾಡುವುದರಲ್ಲಿ ಖುಷಿ ಸಿಗುತ್ತೆ : ನಟ ಸೋನು ಸೂದ್

ಬೆಂಗಳೂರು ಪೊಲೀಸರಿಗೆ ನೆರವಿನ ಹಸ್ತ ನೀಡಿದ ಬಾಲಿವುಡ್ ನಟ ಸೋನು ಸೂದ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ