AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಕರ್ಣಿಕಾ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬಂದ ನಟಿ ಕಂಗನಾ ರಣಾವತ್​!

ಕಂಗನಾ ಮಣಿಕರ್ಣಿಕಾ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಅವರೇ ನಿರ್ದೇಶನ ಕೂಡ ಮಾಡಿದ್ದರು. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು.

ಮಣಿಕರ್ಣಿಕಾ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬಂದ ನಟಿ ಕಂಗನಾ ರಣಾವತ್​!
ಕಂಹನಾ ರಣಾವತ್​-ಮಣಿಕರ್ಣಿಕಾ ಪ್ರೊಡಕ್ಷನ್​ ಹೌಸ್
ರಾಜೇಶ್ ದುಗ್ಗುಮನೆ
|

Updated on: May 01, 2021 | 7:59 PM

Share

ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದವರು ನಟಿ ಕಂಗನಾ ರಣಾವತ್​. ಗ್ಯಾಂಗ್​ಸ್ಟರ್​ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು, ಚಿತ್ರರಂಗದಲ್ಲಿ 15 ವರ್ಷ ಕಳೆದಿದ್ದಾರೆ. ಈಗ ಅವರು ಹೊಸ ಹೆಜ್ಜೆ ಇಟ್ಟಿದ್ದಾರೆ. ಇದೇ ಮೊದಲ ಬಾರಿ ಕಂಗನಾ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಟೀಕು ವೆಡ್ಸ್​ ಶೇರು ಹೆಸರಿನ ಸಿನಿಮಾವನ್ನು ಕಂಗನಾ ನಿರ್ಮಾಣ ಮಾಡುತ್ತಿದ್ದಾರೆ. ಒಟಿಟಿಯಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಹೆಸರೇ ಹೇಳುವಂತೆ ಈ ಚಿತ್ರ ಪ್ರೀತಿಯ ಕಥೆ ಹೇಳಲಿದೆ. ಶನಿವಾರ (ಮೇ 1) ತಮ್ಮ ಪ್ರೊಡಕ್ಷನ್​ ಹೌಸ್​ ಲೋಗೋ ಅನಾವರಣ ಮಾಡಿದ್ದಾರೆ ಕಂಗನಾ. ಮಣಿಕರ್ಣಿಕಾ ಫಿಲ್ಮ್ಸ್​​ ಎಂದು ಇದಕ್ಕೆ ಹೆಸರಿಡಲಾಗಿದೆ.

ಕಂಗನಾ ರಣಾವತ್​ ತುಂಬಾ ಕಷ್ಟದಿಂದ ಮೇಲೆ ಬಂದವರು. ಹೀಗಾಗಿ, ಹೊಸ ಪ್ರತಿಭೆಗಳಿಗೆ ಮಣೆ ಹಾಕಬೇಕು ಎನ್ನುವ ಆಲೋಚನೆ ಕಂಗನಾ ಅವರದ್ದು. ಅಲ್ಲದೆ, ಸಿನಿಮಾ ಕಥೆ ಕೂಡ ಬೇರೆಯದೇ ರೀತಿ ಇರಲಿದೆಯಂತೆ. ಅಂದಹಾಗೆ, ಈ ಸಿನಿಮಾದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎನ್ನುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಕಂಗನಾ ಮಣಿಕರ್ಣಿಕಾ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಅವರೇ ನಿರ್ದೇಶನ ಕೂಡ ಮಾಡಿದ್ದರು. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅದೇ ಹೆಸರನ್ನು ಅವರು ತಮ್ಮ ಪ್ರೊಡಕ್ಷನ್​ ಹೌಸ್​ಗೆ ಇಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಕೊರೊನಾ ವೈರಸ್​ ಎರಡನೇ ಅಲೆಗೆ ಸಿನಿಮಾ ರಂಗ ಮತ್ತೆ ತೊಂದರೆಗೆ ಸಿಲುಕಿದೆ. ಕೆಲವೆಡೆ ಚಿತ್ರಮಂದಿರ ಮುಚ್ಚಲಾಗಿದೆ ಇದರಿಂದಾಗಿ ಅನೇಕ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿದೆ. ಈ ಸಾಲಿಗೆ ಕಂಗನಾ ರಣಾವತ್​ ನಟನೆಯ ತಲೈವಿ ಸಿನಿಮಾ ಕೂಡ ಸೇರ್ಪಡೆ ಆಗಿತ್ತು. ಚಿತ್ರತಂಡದಿಂದ ಮುಂದಿನ ರಿಲೀಸ್​ ದಿನಾಂಕ ಯಾವಾಗ ಎಂಬುದು ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಕೊರೊನಾ ಪ್ರಕರಣಗಳು ಕಡಿಮೆ ಆದ ನಂತರದಲ್ಲಿ ಸಿನಿಮಾ ತೆರೆಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು