AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಕರ್ಣಿಕಾ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬಂದ ನಟಿ ಕಂಗನಾ ರಣಾವತ್​!

ಕಂಗನಾ ಮಣಿಕರ್ಣಿಕಾ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಅವರೇ ನಿರ್ದೇಶನ ಕೂಡ ಮಾಡಿದ್ದರು. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು.

ಮಣಿಕರ್ಣಿಕಾ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬಂದ ನಟಿ ಕಂಗನಾ ರಣಾವತ್​!
ಕಂಹನಾ ರಣಾವತ್​-ಮಣಿಕರ್ಣಿಕಾ ಪ್ರೊಡಕ್ಷನ್​ ಹೌಸ್
ರಾಜೇಶ್ ದುಗ್ಗುಮನೆ
|

Updated on: May 01, 2021 | 7:59 PM

Share

ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದವರು ನಟಿ ಕಂಗನಾ ರಣಾವತ್​. ಗ್ಯಾಂಗ್​ಸ್ಟರ್​ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು, ಚಿತ್ರರಂಗದಲ್ಲಿ 15 ವರ್ಷ ಕಳೆದಿದ್ದಾರೆ. ಈಗ ಅವರು ಹೊಸ ಹೆಜ್ಜೆ ಇಟ್ಟಿದ್ದಾರೆ. ಇದೇ ಮೊದಲ ಬಾರಿ ಕಂಗನಾ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಟೀಕು ವೆಡ್ಸ್​ ಶೇರು ಹೆಸರಿನ ಸಿನಿಮಾವನ್ನು ಕಂಗನಾ ನಿರ್ಮಾಣ ಮಾಡುತ್ತಿದ್ದಾರೆ. ಒಟಿಟಿಯಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಹೆಸರೇ ಹೇಳುವಂತೆ ಈ ಚಿತ್ರ ಪ್ರೀತಿಯ ಕಥೆ ಹೇಳಲಿದೆ. ಶನಿವಾರ (ಮೇ 1) ತಮ್ಮ ಪ್ರೊಡಕ್ಷನ್​ ಹೌಸ್​ ಲೋಗೋ ಅನಾವರಣ ಮಾಡಿದ್ದಾರೆ ಕಂಗನಾ. ಮಣಿಕರ್ಣಿಕಾ ಫಿಲ್ಮ್ಸ್​​ ಎಂದು ಇದಕ್ಕೆ ಹೆಸರಿಡಲಾಗಿದೆ.

ಕಂಗನಾ ರಣಾವತ್​ ತುಂಬಾ ಕಷ್ಟದಿಂದ ಮೇಲೆ ಬಂದವರು. ಹೀಗಾಗಿ, ಹೊಸ ಪ್ರತಿಭೆಗಳಿಗೆ ಮಣೆ ಹಾಕಬೇಕು ಎನ್ನುವ ಆಲೋಚನೆ ಕಂಗನಾ ಅವರದ್ದು. ಅಲ್ಲದೆ, ಸಿನಿಮಾ ಕಥೆ ಕೂಡ ಬೇರೆಯದೇ ರೀತಿ ಇರಲಿದೆಯಂತೆ. ಅಂದಹಾಗೆ, ಈ ಸಿನಿಮಾದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎನ್ನುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಕಂಗನಾ ಮಣಿಕರ್ಣಿಕಾ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಅವರೇ ನಿರ್ದೇಶನ ಕೂಡ ಮಾಡಿದ್ದರು. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅದೇ ಹೆಸರನ್ನು ಅವರು ತಮ್ಮ ಪ್ರೊಡಕ್ಷನ್​ ಹೌಸ್​ಗೆ ಇಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಕೊರೊನಾ ವೈರಸ್​ ಎರಡನೇ ಅಲೆಗೆ ಸಿನಿಮಾ ರಂಗ ಮತ್ತೆ ತೊಂದರೆಗೆ ಸಿಲುಕಿದೆ. ಕೆಲವೆಡೆ ಚಿತ್ರಮಂದಿರ ಮುಚ್ಚಲಾಗಿದೆ ಇದರಿಂದಾಗಿ ಅನೇಕ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿದೆ. ಈ ಸಾಲಿಗೆ ಕಂಗನಾ ರಣಾವತ್​ ನಟನೆಯ ತಲೈವಿ ಸಿನಿಮಾ ಕೂಡ ಸೇರ್ಪಡೆ ಆಗಿತ್ತು. ಚಿತ್ರತಂಡದಿಂದ ಮುಂದಿನ ರಿಲೀಸ್​ ದಿನಾಂಕ ಯಾವಾಗ ಎಂಬುದು ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಕೊರೊನಾ ಪ್ರಕರಣಗಳು ಕಡಿಮೆ ಆದ ನಂತರದಲ್ಲಿ ಸಿನಿಮಾ ತೆರೆಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್