AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಕರ್ಣಿಕಾ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬಂದ ನಟಿ ಕಂಗನಾ ರಣಾವತ್​!

ಕಂಗನಾ ಮಣಿಕರ್ಣಿಕಾ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಅವರೇ ನಿರ್ದೇಶನ ಕೂಡ ಮಾಡಿದ್ದರು. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು.

ಮಣಿಕರ್ಣಿಕಾ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬಂದ ನಟಿ ಕಂಗನಾ ರಣಾವತ್​!
ಕಂಹನಾ ರಣಾವತ್​-ಮಣಿಕರ್ಣಿಕಾ ಪ್ರೊಡಕ್ಷನ್​ ಹೌಸ್
ರಾಜೇಶ್ ದುಗ್ಗುಮನೆ
|

Updated on: May 01, 2021 | 7:59 PM

Share

ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದವರು ನಟಿ ಕಂಗನಾ ರಣಾವತ್​. ಗ್ಯಾಂಗ್​ಸ್ಟರ್​ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು, ಚಿತ್ರರಂಗದಲ್ಲಿ 15 ವರ್ಷ ಕಳೆದಿದ್ದಾರೆ. ಈಗ ಅವರು ಹೊಸ ಹೆಜ್ಜೆ ಇಟ್ಟಿದ್ದಾರೆ. ಇದೇ ಮೊದಲ ಬಾರಿ ಕಂಗನಾ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಟೀಕು ವೆಡ್ಸ್​ ಶೇರು ಹೆಸರಿನ ಸಿನಿಮಾವನ್ನು ಕಂಗನಾ ನಿರ್ಮಾಣ ಮಾಡುತ್ತಿದ್ದಾರೆ. ಒಟಿಟಿಯಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಹೆಸರೇ ಹೇಳುವಂತೆ ಈ ಚಿತ್ರ ಪ್ರೀತಿಯ ಕಥೆ ಹೇಳಲಿದೆ. ಶನಿವಾರ (ಮೇ 1) ತಮ್ಮ ಪ್ರೊಡಕ್ಷನ್​ ಹೌಸ್​ ಲೋಗೋ ಅನಾವರಣ ಮಾಡಿದ್ದಾರೆ ಕಂಗನಾ. ಮಣಿಕರ್ಣಿಕಾ ಫಿಲ್ಮ್ಸ್​​ ಎಂದು ಇದಕ್ಕೆ ಹೆಸರಿಡಲಾಗಿದೆ.

ಕಂಗನಾ ರಣಾವತ್​ ತುಂಬಾ ಕಷ್ಟದಿಂದ ಮೇಲೆ ಬಂದವರು. ಹೀಗಾಗಿ, ಹೊಸ ಪ್ರತಿಭೆಗಳಿಗೆ ಮಣೆ ಹಾಕಬೇಕು ಎನ್ನುವ ಆಲೋಚನೆ ಕಂಗನಾ ಅವರದ್ದು. ಅಲ್ಲದೆ, ಸಿನಿಮಾ ಕಥೆ ಕೂಡ ಬೇರೆಯದೇ ರೀತಿ ಇರಲಿದೆಯಂತೆ. ಅಂದಹಾಗೆ, ಈ ಸಿನಿಮಾದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎನ್ನುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಕಂಗನಾ ಮಣಿಕರ್ಣಿಕಾ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಅವರೇ ನಿರ್ದೇಶನ ಕೂಡ ಮಾಡಿದ್ದರು. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅದೇ ಹೆಸರನ್ನು ಅವರು ತಮ್ಮ ಪ್ರೊಡಕ್ಷನ್​ ಹೌಸ್​ಗೆ ಇಟ್ಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಕೊರೊನಾ ವೈರಸ್​ ಎರಡನೇ ಅಲೆಗೆ ಸಿನಿಮಾ ರಂಗ ಮತ್ತೆ ತೊಂದರೆಗೆ ಸಿಲುಕಿದೆ. ಕೆಲವೆಡೆ ಚಿತ್ರಮಂದಿರ ಮುಚ್ಚಲಾಗಿದೆ ಇದರಿಂದಾಗಿ ಅನೇಕ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿದೆ. ಈ ಸಾಲಿಗೆ ಕಂಗನಾ ರಣಾವತ್​ ನಟನೆಯ ತಲೈವಿ ಸಿನಿಮಾ ಕೂಡ ಸೇರ್ಪಡೆ ಆಗಿತ್ತು. ಚಿತ್ರತಂಡದಿಂದ ಮುಂದಿನ ರಿಲೀಸ್​ ದಿನಾಂಕ ಯಾವಾಗ ಎಂಬುದು ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಕೊರೊನಾ ಪ್ರಕರಣಗಳು ಕಡಿಮೆ ಆದ ನಂತರದಲ್ಲಿ ಸಿನಿಮಾ ತೆರೆಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್