‘ಟೀಕೆಗೆಳಿಗೆ ತಕ್ಕ ಉತ್ತರ ಕೊಟ್ಟರು’; ಇಂದಿರಾ ಗಾಂಧಿ ಬಗ್ಗೆ ಮೆಚ್ಚುಗೆ ಸೂಚಿಸಿದ ಕಂಗನಾ ರಣಾವತ್

‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಅವರ ರಾಜಕೀಯದ ಆರಂಭಿಕ ದಿನಗಳಿಂದ ಹಿಡಿದು ಅವರ ಹತ್ಯೆವರೆಗೆ ಎಲ್ಲವನ್ನೂ ತೋರಿಸಲಾಗಿದೆ. ಈ ಸಿನಿಮಾದಲ್ಲಿ ಅನುಪಮ್ ಖೇರ್, ಸತೀಶ್ ಶಾ, ಶ್ರೇಯಸ್ ತಲ್ಪಡೆ, ಮಹಿಮಾ ಚೌಧರಿ ನಟಿಸಿದ್ದಾರೆ. ಈಗ ಕಂಗನಾ ಅವರು ಇಂದಿರಾ ಗಾಂಧಿ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

‘ಟೀಕೆಗೆಳಿಗೆ ತಕ್ಕ ಉತ್ತರ ಕೊಟ್ಟರು’; ಇಂದಿರಾ ಗಾಂಧಿ ಬಗ್ಗೆ ಮೆಚ್ಚುಗೆ ಸೂಚಿಸಿದ ಕಂಗನಾ ರಣಾವತ್
ಕಂಗನಾ
Follow us
|

Updated on: Aug 24, 2024 | 7:28 AM

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತು ನಟಿ, ಸಂಸದೆ ಕಂಗನಾ ರಣಾವತ್ ಅವರು ಸಿನಿಮಾ ಮಾಡಿದ್ದು, ಅದಕ್ಕೆ ‘ಎಮರ್ಜೆನ್ಸಿ’ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದಲ್ಲಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ ಕುರಿತಾದ ವಿಚಾರಗಳನ್ನು ಹೇಳಲಾಗಿದೆ. ಈ ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ಕಂಗನಾ ಅವರೇ ಮಾಡಿದ್ದಾರೆ. ಅವರು ಕಂಗನಾ ಅವರನ್ನು ಹೊಗಳಿದ್ದಾರೆ. ಕೆಲವು ವಿಚಾರಗಳಲ್ಲಿ ಅವರನ್ನು ತೆಗಳಿದ್ದಾರೆ.

‘ಇಂದಿರಾ ಗಾಂಧಿ ಅವರು ಸವಲತ್ತು ಪಡೆದಿದ್ದರು. ಅವರು ಅವರು ಪ್ರಧಾನಿಯ ಮಗಳು. ತಮ್ಮ ತಂದೆಯ ಅಧಿಕಾರದ ಅವಧಿಯಲ್ಲಿ ಅಧಿಕೃತ ಸ್ಥಾನಗಳನ್ನು ಹೊಂದಿದ್ದರು. ಇಷ್ಟೆಲ್ಲ ಸವಲತ್ತು ಇದ್ದರೂ ತಮ್ಮನ್ನು ತಾವು ಸಾಬೀತುಪಡಿಸಬೇಕು ಎಂಬ ಸಂಕಲ್ಪವನ್ನು ಹೊಂದಿದ್ದರು. ಇದು ನನಗೆ ಅವರಲ್ಲಿ ಇಷ್ಟವಾದ ಗುಣ. ಅವರು ಸಾಕಷ್ಟು ಸವಲತ್ತುಗಳನ್ನು ಪಡೆದಿರಬಹುದು. ಆದರೆ ಅವರನ್ನು ಟೀಕಿಸಿದಾಗಲೆಲ್ಲಾ ಅವರು ತಮ್ಮನ್ನು ತಾವು ಸಾಬೀತುಪಡಿಸಿಕೊಂಡಿದ್ದಾರೆ. ಅವರು ನಿಜಕ್ಕೂ ವಿನ್ನರ್’ ಎಂದಿದ್ದಾರೆ ಕಂಗನಾ.

‘ಇಂದಿರಾ ಗಾಂಧಿ ಬಗ್ಗೆ ನೆಗೆಟಿವ್ ವಿಚಾರಗಳೂ ಇವೆ. ಅವರು ತಮ್ಮ ಜೀವನದಲ್ಲಿ ಯಾವುದೇ ಸ್ವಾಭಾವಿಕ ಹೋರಾಟವನ್ನು ಎದುರಿಸಲಿಲ್ಲ. ಯಾರೋ ಮಾಡಿದ ಹೋರಾಟವು ನಿಜವಾಗಿರಲು ಸಾಧ್ಯವಿಲ್ಲ. ನೀವು ಪಿಎಂ ಕುರ್ಚಿಯಲ್ಲಿದ್ದಾಗ, ನೀವು ನಿಸ್ವಾರ್ಥವಾಗಿರಬೇಕು. ನೀವು ಅಹಂಕಾರದಿಂದ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ’ ಎಂದು ಕಂಗನಾ ಹೇಳಿದ್ದಾರೆ.

ಇದನ್ನೂ ಓದಿ: ‘ಎಮರ್ಜೆನ್ಸಿ’ ಟ್ರೇಲರ್: ಇಂದಿರಾ ಗಾಂಧಿ ಪಾತ್ರ ಮಾಡಿದ ಕಂಗನಾಗೆ ರಾಷ್ಟ್ರ ಪ್ರಶಸ್ತಿ ನಿರೀಕ್ಷಿಸಿದ ಫ್ಯಾನ್ಸ್

‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಅವರ ರಾಜಕೀಯದ ಆರಂಭಿಕ ದಿನಗಳಿಂದ ಹಿಡಿದು ಅವರ ಹತ್ಯೆವರೆಗೆ ಎಲ್ಲವನ್ನೂ ತೋರಿಸಲಾಗಿದೆ. ಈ ಸಿನಿಮಾದಲ್ಲಿ ಅನುಪಮ್ ಖೇರ್, ಸತೀಶ್ ಶಾ, ಶ್ರೇಯಸ್ ತಲ್ಪಡೆ, ಮಹಿಮಾ ಚೌಧರಿ ನಟಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 6ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ