AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟೀಕೆಗೆಳಿಗೆ ತಕ್ಕ ಉತ್ತರ ಕೊಟ್ಟರು’; ಇಂದಿರಾ ಗಾಂಧಿ ಬಗ್ಗೆ ಮೆಚ್ಚುಗೆ ಸೂಚಿಸಿದ ಕಂಗನಾ ರಣಾವತ್

‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಅವರ ರಾಜಕೀಯದ ಆರಂಭಿಕ ದಿನಗಳಿಂದ ಹಿಡಿದು ಅವರ ಹತ್ಯೆವರೆಗೆ ಎಲ್ಲವನ್ನೂ ತೋರಿಸಲಾಗಿದೆ. ಈ ಸಿನಿಮಾದಲ್ಲಿ ಅನುಪಮ್ ಖೇರ್, ಸತೀಶ್ ಶಾ, ಶ್ರೇಯಸ್ ತಲ್ಪಡೆ, ಮಹಿಮಾ ಚೌಧರಿ ನಟಿಸಿದ್ದಾರೆ. ಈಗ ಕಂಗನಾ ಅವರು ಇಂದಿರಾ ಗಾಂಧಿ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

‘ಟೀಕೆಗೆಳಿಗೆ ತಕ್ಕ ಉತ್ತರ ಕೊಟ್ಟರು’; ಇಂದಿರಾ ಗಾಂಧಿ ಬಗ್ಗೆ ಮೆಚ್ಚುಗೆ ಸೂಚಿಸಿದ ಕಂಗನಾ ರಣಾವತ್
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Aug 24, 2024 | 7:28 AM

Share

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತು ನಟಿ, ಸಂಸದೆ ಕಂಗನಾ ರಣಾವತ್ ಅವರು ಸಿನಿಮಾ ಮಾಡಿದ್ದು, ಅದಕ್ಕೆ ‘ಎಮರ್ಜೆನ್ಸಿ’ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದಲ್ಲಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ ಕುರಿತಾದ ವಿಚಾರಗಳನ್ನು ಹೇಳಲಾಗಿದೆ. ಈ ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ಕಂಗನಾ ಅವರೇ ಮಾಡಿದ್ದಾರೆ. ಅವರು ಕಂಗನಾ ಅವರನ್ನು ಹೊಗಳಿದ್ದಾರೆ. ಕೆಲವು ವಿಚಾರಗಳಲ್ಲಿ ಅವರನ್ನು ತೆಗಳಿದ್ದಾರೆ.

‘ಇಂದಿರಾ ಗಾಂಧಿ ಅವರು ಸವಲತ್ತು ಪಡೆದಿದ್ದರು. ಅವರು ಅವರು ಪ್ರಧಾನಿಯ ಮಗಳು. ತಮ್ಮ ತಂದೆಯ ಅಧಿಕಾರದ ಅವಧಿಯಲ್ಲಿ ಅಧಿಕೃತ ಸ್ಥಾನಗಳನ್ನು ಹೊಂದಿದ್ದರು. ಇಷ್ಟೆಲ್ಲ ಸವಲತ್ತು ಇದ್ದರೂ ತಮ್ಮನ್ನು ತಾವು ಸಾಬೀತುಪಡಿಸಬೇಕು ಎಂಬ ಸಂಕಲ್ಪವನ್ನು ಹೊಂದಿದ್ದರು. ಇದು ನನಗೆ ಅವರಲ್ಲಿ ಇಷ್ಟವಾದ ಗುಣ. ಅವರು ಸಾಕಷ್ಟು ಸವಲತ್ತುಗಳನ್ನು ಪಡೆದಿರಬಹುದು. ಆದರೆ ಅವರನ್ನು ಟೀಕಿಸಿದಾಗಲೆಲ್ಲಾ ಅವರು ತಮ್ಮನ್ನು ತಾವು ಸಾಬೀತುಪಡಿಸಿಕೊಂಡಿದ್ದಾರೆ. ಅವರು ನಿಜಕ್ಕೂ ವಿನ್ನರ್’ ಎಂದಿದ್ದಾರೆ ಕಂಗನಾ.

‘ಇಂದಿರಾ ಗಾಂಧಿ ಬಗ್ಗೆ ನೆಗೆಟಿವ್ ವಿಚಾರಗಳೂ ಇವೆ. ಅವರು ತಮ್ಮ ಜೀವನದಲ್ಲಿ ಯಾವುದೇ ಸ್ವಾಭಾವಿಕ ಹೋರಾಟವನ್ನು ಎದುರಿಸಲಿಲ್ಲ. ಯಾರೋ ಮಾಡಿದ ಹೋರಾಟವು ನಿಜವಾಗಿರಲು ಸಾಧ್ಯವಿಲ್ಲ. ನೀವು ಪಿಎಂ ಕುರ್ಚಿಯಲ್ಲಿದ್ದಾಗ, ನೀವು ನಿಸ್ವಾರ್ಥವಾಗಿರಬೇಕು. ನೀವು ಅಹಂಕಾರದಿಂದ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ’ ಎಂದು ಕಂಗನಾ ಹೇಳಿದ್ದಾರೆ.

ಇದನ್ನೂ ಓದಿ: ‘ಎಮರ್ಜೆನ್ಸಿ’ ಟ್ರೇಲರ್: ಇಂದಿರಾ ಗಾಂಧಿ ಪಾತ್ರ ಮಾಡಿದ ಕಂಗನಾಗೆ ರಾಷ್ಟ್ರ ಪ್ರಶಸ್ತಿ ನಿರೀಕ್ಷಿಸಿದ ಫ್ಯಾನ್ಸ್

‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಅವರ ರಾಜಕೀಯದ ಆರಂಭಿಕ ದಿನಗಳಿಂದ ಹಿಡಿದು ಅವರ ಹತ್ಯೆವರೆಗೆ ಎಲ್ಲವನ್ನೂ ತೋರಿಸಲಾಗಿದೆ. ಈ ಸಿನಿಮಾದಲ್ಲಿ ಅನುಪಮ್ ಖೇರ್, ಸತೀಶ್ ಶಾ, ಶ್ರೇಯಸ್ ತಲ್ಪಡೆ, ಮಹಿಮಾ ಚೌಧರಿ ನಟಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 6ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ