AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ರೀತಿ ಕಾರ್ತಿಕ್ ಆರ್ಯನ್​ಗೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸಬೇಡಿ; ಕರಣ್​​​ಗೆ ಕಂಗನಾ ಛೀಮಾರಿ

ದಯವಿಟ್ಟು ಕಾರ್ತಿಕ್ರನ್ನು ಬಿಟ್ಟುಬಿಡಿ. ಸುಶಾಂತ್ ರೀತಿ ಅವರ ಬೆನ್ನುಹತ್ತಬೇಡಿ. ನೇಣು ಹಾಕಿಕೊಳ್ಳುವಂತೆ ಒತ್ತಾಯ ಮಾಡಬೇಡಿ ಎಂದು ಕಂಗನಾ ರಣಾವತ್ ಅವರು ನೆಪೋಟಿಸಂ ಗ್ಯಾಂಗ್ಗೆ ಛಾಟಿ ಬೀಸಿದ್ದಾರೆ.

ಸುಶಾಂತ್ ರೀತಿ ಕಾರ್ತಿಕ್ ಆರ್ಯನ್​ಗೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸಬೇಡಿ; ಕರಣ್​​​ಗೆ ಕಂಗನಾ ಛೀಮಾರಿ
ಕಂಗನಾ ರಣಾವತ್​, ಕಾರ್ತಿಕ್​ ಆರ್ಯನ್​, ಕರಣ್​ ಜೋಹರ್​
ಮದನ್​ ಕುಮಾರ್​
| Edited By: |

Updated on: Apr 17, 2021 | 5:30 PM

Share

ಬಾಲಿವುಡ್​ನಲ್ಲಿ ನೆಪೋಟಿಸಂ ಬಿರುಗಾಳಿ ಮತ್ತೆ ಬೀಸುತ್ತಿದೆ. ನಿರ್ಮಾಪಕ ಕರಣ್​ ಜೋಹರ್​ ವಿರುದ್ಧ ನಟಿ ಕಂಗನಾ ರಣಾವತ್ ಮತ್ತೆ ಕಿಡಿಕಾರಲು ಆರಂಭಿಸಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ನಟ ಕಾರ್ತಿಕ್​ ಆರ್ಯನ್​ ಅವರನ್ನು ದೋಸ್ತಾನಾ 2 ಸಿನಿಮಾದಿಂದ ಹೊರದಬ್ಬಿರುವುದು. ಬಹುನಿರೀಕ್ಷಿತ ದೋಸ್ತಾನಾ 2 ಸಿನಿಮಾಗೆ ಕರಣ್​ ಜೋಹರ್​ ನಿರ್ಮಾಕರು. ಆ ಚಿತ್ರಕ್ಕೆ ಮೊದಲು ಹೀರೋ ಆಗಿ ಕಾರ್ತಿಕ್​ ಆಯ್ಕೆ ಆಗಿದ್ದರು. ಆದರೆ ಕೆಲವೇ ದಿನಗಳ ಹಿಂದೆ ಕರಣ್​ ಜೋಹರ್​ ಮತ್ತು ಕಾರ್ತಿಕ್​ ಆರ್ಯನ್​ ನಡುವೆ ಕಿರಿಕ್​ ಆಗಿದೆ. ಅದರ ಪರಿಣಾಮವಾಗಿ ಕಾರ್ತಿಕ್​ ಆರ್ಯನ್​ಗೆ ಕರಣ್​ ಜೋಹರ್​ ಬಹಿಷ್ಕಾರ ಹಾಕಿದ್ದಾರೆ. ಭವಿಷ್ಯದಲ್ಲಿ ಇನ್ನೆಂದೂ ಕಾರ್ತಿಕ್​ಗೆ ಕೆಲಸ ನೀಡುವುದಿಲ್ಲ ಎಂದು ಕರಣ್​ ಹೇಳಿದ್ದಾರೆ ಎಂಬ ಸುದ್ದಿ ಹರಡಿದೆ.

ಈ ಘಟನೆ ನಡೆದ ಬಳಿಕ ನಟಿ ಕಂಗನಾ ರಣಾವತ್​ ಸಿಟ್ಟಾಗಿದ್ದಾರೆ. ಕರಣ್ ಜೋಹರ್​ ವಿರುದ್ಧ ಅವರು ಸರಣಿ ಟ್ವೀಟ್​ ಮೂಲಕ ಗುಡುಗಲು ಆರಂಭಿಸಿದ್ದಾರೆ. ಈ ಹಿಂದೆ ಸುಶಾಂತ್​ ಸಿಂಗ್​ ರಜಪೂತ್​ ಇದೇ ರೀತಿ ಬಹಿಷ್ಕಾರಕ್ಕೆ ಒಳಗಾಗಿದ್ದರು. ನಂತರ ಅವರ ಮೇಲೆ ಅನೇಕ ಆರೋಪಗಳನ್ನು ಹೊರಿಸಲಾಯಿತು. ಅಂತಿಮವಾಗಿ ಸುಶಾಂತ್​ ಆತ್ಮಹತ್ಯೆ ಮಾಡಿಕೊಂಡರು. ಈಗ ಕಾರ್ತಿಕ್​ ಆರ್ಯನ್​ ಅವರಿಗೂ ಇದೇ ಪರಿಸ್ಥಿತಿ ಬಾರದಿರಲಿ ಎಂದು ಕಂಗನಾ ಆಶಿಸಿದ್ದಾರೆ.

‘ಕಾರ್ತಿಕ್​ ಸ್ವಂತವಾಗಿ ಇಲ್ಲಿಯವರಗೆ ಬೆಳೆದುಬಂದಿದ್ದಾರೆ. ಅದೇ ರೀತಿ ಅವರು ಮುಂದುವರಿಯಲಿದ್ದಾರೆ. ಕರಣ್​ ಜೋಹರ್​ ಮತ್ತು ಆತನ ನೆಪೋಟಿಸಂ ಗ್ಯಾಂಗ್​ಗೆ ನನ್ನದೊಂದು ಮನವಿ ಏನೆಂದರೆ, ದಯವಿಟ್ಟು ಕಾರ್ತಿಕ್​ರನ್ನು ಬಿಟ್ಟುಬಿಡಿ. ಸುಶಾಂತ್​ ರೀತಿ ಅವರ ಬೆನ್ನುಹತ್ತಬೇಡಿ. ನೇಣು ಹಾಕಿಕೊಳ್ಳುವಂತೆ ಒತ್ತಾಯ ಮಾಡಬೇಡಿ’ ಎಂದು ಕಂಗನಾ ಟ್ವೀಟ್​ ಮಾಡಿದ್ದಾರೆ.

ಈ ಸಂದರ್ಭದಲ್ಲಿ ನಟ ಕಾರ್ತಿಕ್​​ಗೆ ಕಂಗನಾ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ. ‘ಕಾರ್ತಿಕ್​ ಅವರೇ ನೀವು ಈ ಚಿಲ್ಲರೆಗಳಿಗೆ ಹೆದರುವ ಅವಶ್ಯಕತೆ ಇಲ್ಲ. ಕೆಟ್ಟ ಲೇಖನಗಳನ್ನು ಮಾಡಿದ ಬಳಿಕ, ನಿಮ್ಮ ಆಟಿಟ್ಯೂಡ್​ನಿಂದಾಗಿ ಇಷ್ಟೆಲ್ಲ ಆಯಿತು ಎಂದು ಪ್ರಕಟಣೆ ಹೊರಡಿಸುತ್ತಾರೆ. ನಂತರ ಈ ಮೂರ್ಖ ಮೌನ ವಹಿಸುತ್ತಾನೆ. ವೃತ್ತಿಪರತೆಯ ಕೊರತೆ ಮತ್ತು ಡ್ರಗ್​ ಅಡಿಕ್ಷನ್​ನ ವದಂತಿ ಹರಡಿಸುತ್ತಾರೆ. ಸುಶಾಂತ್​ಗೆ ಹೀಗೇ ಮಾಡಿದ್ದರು’ ಎಂದು ಕಂಗನಾ ಟ್ವೀಟ್​ ಮಾಡಿದ್ದಾರೆ.

‘ನಾವು ನಿಮ್ಮ ಜೊತೆ ಇದ್ದೇವೆ. ನಿಮ್ಮ ಬೆಳವಣಿಗೆಗೆ ಯಾರು ಕಾರಣ ಆಗುವುದಿಲ್ಲವೋ ಅವರು ನಿಮ್ಮನ್ನು ತುಳಿಯಲು ಕೂಡ ಸಾಧ್ಯವಿಲ್ಲ. ಇಂದು ನಿಮಗೆ ಒಂಟಿತನ ಕಾಡಬಹುದು. ಎಲ್ಲ ಮೂಲೆಗಳಿಂದಲೂ ನಿಮ್ಮನ್ನು ಟಾರ್ಗೆಟ್​ ಮಾಡಬಹುದು. ಆ ರೀತಿ ನೀವು ಅಂದುಕೊಳ್ಳುವುದು ಬೇಡ. ಕರಣ್​ ಜೋಹರ್​ ಡ್ರಾಮಾ ಬಗ್ಗೆ ಎಲ್ಲರಿಗೂ ಗೊತ್ತು. ನೀವು ಚೆನ್ನಾಗಿ ಮುಂದುವರಿಯುತ್ತೀರಿ. ನಿಮ್ಮ ಸಾಮರ್ಥ್ಯದ ಬಗ್ಗೆ ನಂಬಿಕೆ ಇರಲಿ ಮತ್ತು ಶಿಸ್ತಿನಿಂದಿರಿ’ ಎಂದು ಕಾರ್ತಿಕ್​ಗೆ ಕಂಗನಾ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ ರಣಾವತ್​-ತಾಪ್ಸೀ ಪನ್ನು ಈಗ ಫ್ರೆಂಡ್ಸ್​! ಜಗಳ ಅಂತ್ಯ ಆಗಿದ್ದಕ್ಕೆ ಕಾರಣ ಏನು?

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?