AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮನ ಹೆಸರು ಕೆಡಿಸಬೇಡಿ’; ‘ಆದಿಪುರುಷ್’ ತಂಡಕ್ಕೆ ಕಂಗನಾ ಪರೋಕ್ಷ ತಿರುಗೇಟು

ರಾಮ ಹಾಗೂ ಸೀತೆಯ ಫೋಟೋನ ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ರಾಮನ ಹೆಸರನ್ನು ಕೆಡಿಸಬೇಡಿ ಎಂದು ಕೋರಿದ್ದಾರೆ.

‘ರಾಮನ ಹೆಸರು ಕೆಡಿಸಬೇಡಿ’; ‘ಆದಿಪುರುಷ್’ ತಂಡಕ್ಕೆ ಕಂಗನಾ ಪರೋಕ್ಷ ತಿರುಗೇಟು
ಪ್ರಭಾಸ್​-ಕಂಗನಾ
ರಾಜೇಶ್ ದುಗ್ಗುಮನೆ
|

Updated on:Jun 17, 2023 | 1:51 PM

Share

ಕಾಲ್ಪನಿಕ ಕಥೆ ಇಟ್ಟುಕೊಂಡು ಸಿನಿಮಾ ಮಾಡಿದರೆ ಅಲ್ಲಿ ವಿವಾದಗಳು ಹುಟ್ಟಿಕೊಳ್ಳೋದು ಕಡಿಮೆ. ಅಲ್ಲಿಯೂ ತಪ್ಪುಗಳನ್ನು ಹುಡುಕಿ ಟೀಕೆ ಮಾಡುವವರು ಇದ್ದಾರೆ. ಆದರೆ, ರಾಮಾಯಣ-ಮಹಾಭಾರತದಂಥ ಮಹಾಗ್ರಂಥಗಳನ್ನು ಆಧರಿಸಿ ಸಿನಿಮಾ ಮಾಡುವಾಗ ಹೆಚ್ಚು ಎಚ್ಚರಿಕೆ ಬೇಕು. ಅಲ್ಲಿ ಮನಬಂದಂತೆ ದೃಶ್ಯಗಳನ್ನು ತೋರಿಸಲು ಆಯ್ಕೆ ಇರುವುದಿಲ್ಲ. ‘ಆದಿಪುರುಷ್’ (Adipurush Movie) ನಿರ್ದೇಶಕ ಓಂ ರಾವತ್ ಇದನ್ನು ಮರೆತಂತಿದೆ. ಅವರ ನಿರ್ದೇಶನದ ಬಗ್ಗೆ ಟೀಕೆ ವ್ಯಕ್ತವಾಗಿದೆ. ನಟಿ ಕಂಗನಾ ರಣಾವತ್ (Kangana Ranaut) ಕೂಡ ಪರೋಕ್ಷವಾಗಿ ಈ ಚಿತ್ರವನ್ನು ಟೀಕೆ ಮಾಡಿದ್ದಾರೆ. ಜೊತೆಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ನಟಿ ಕಂಗನಾ ರಣಾವತ್ ಅವರು ತುಂಬಾನೇ ವಿಚಿತ್ರ ಸ್ವಭಾವದವರು. ಅವರು ಬಾಲಿವುಡ್ ಮಾಫಿಯಾನ ತೆಗಳುತ್ತಿರುತ್ತಾರೆ. ಸ್ಟಾರ್ ಕಿಡ್​​ಗಳ ಬಗ್ಗೆ ಅವರಿಗೆ ಸಿಟ್ಟಿದೆ. ಅವರು ಒಳ್ಳೆಯ ಕೆಲಸ ಮಾಡಿದರೆ ಕಂಗನಾ ಹೊಗಳುತ್ತಾರೆ. ಆಪ್ತರು ಕೆಟ್ಟ ಕೆಲಸ ಮಾಡಿದರೆ ಅವರನ್ನು ಬೈಯ್ಯೋಕೆ ಕಂಗನಾ ಹಿಂಜರಿದವರಲ್ಲ. ಈಗ ಕಂಗನಾ ‘ಆದಿಪುರುಷ್’ ತಂಡವನ್ನು ಟೀಕಿಸಿದ್ದಾರೆ. ‘ರಾಮನ ಹೆಸರು ಹಾಳುಮಾಡಬೇಡಿ’ ಎಂದು ಕೋರಿದ್ದಾರೆ.

ರಾಮ ಹಾಗೂ ಸೀತೆಯ ಫೋಟೋನ ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ರಾಮ್ ಕ ನಾಮ್ ಬದ್ನಾಮ್ ನ ಕರೋ’ (ರಾಮನ ಹೆಸರನ್ನು ಕೆಡಿಸಬೇಡಿ) ಎಂದು ಸಾಂಗ್ ಹಾಕಿದ್ದಾರೆ. ಇದು ‘ಆದಿಪುರುಷ್’ ತಂಡಕ್ಕೆ ಹೇಳಿದ ಮಾತು ಎಂಬುದನ್ನು ಎಲ್ಲರೂ ಸುಲಭವಾಗಿ ಊಹಿಸಿದ್ದಾರೆ. ಕಂಗನಾ ಮಾತನನ್ನು ಅನೇಕರು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಟೀಕೆ ಬಂದರೇನಂತೆ? ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆದ ತೆಗೆದ ‘ಆದಿಪುರುಷ್’ ಸಿನಿಮಾ

ನೆಗೆಟಿವ್ ವಿಮರ್ಶೆ ಪಡೆದ ಹೊರತಾಗಿಯೂ ‘ಆದಿಪುರುಷ್’ ಒಳ್ಳೆಯ ಗಳಿಕೆ ಮಾಡಿದೆ. ಮೊದಲ ದಿನ ಈ ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ವಿಶ್ವಾದ್ಯಂತ 150 ಕೋಟಿ ರೂಪಾಯಿ ಗಳಿಸಿದೆ. ‘ಆದಿಪುರುಷ್’ ಚಿತ್ರ ಇಂದು (ಜೂನ್17) ಹಾಗೂ ನಾಳೆ (ಜೂನ್ 18) ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:20 pm, Sat, 17 June 23

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ