Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮನ ಹೆಸರು ಕೆಡಿಸಬೇಡಿ’; ‘ಆದಿಪುರುಷ್’ ತಂಡಕ್ಕೆ ಕಂಗನಾ ಪರೋಕ್ಷ ತಿರುಗೇಟು

ರಾಮ ಹಾಗೂ ಸೀತೆಯ ಫೋಟೋನ ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ರಾಮನ ಹೆಸರನ್ನು ಕೆಡಿಸಬೇಡಿ ಎಂದು ಕೋರಿದ್ದಾರೆ.

‘ರಾಮನ ಹೆಸರು ಕೆಡಿಸಬೇಡಿ’; ‘ಆದಿಪುರುಷ್’ ತಂಡಕ್ಕೆ ಕಂಗನಾ ಪರೋಕ್ಷ ತಿರುಗೇಟು
ಪ್ರಭಾಸ್​-ಕಂಗನಾ
Follow us
ರಾಜೇಶ್ ದುಗ್ಗುಮನೆ
|

Updated on:Jun 17, 2023 | 1:51 PM

ಕಾಲ್ಪನಿಕ ಕಥೆ ಇಟ್ಟುಕೊಂಡು ಸಿನಿಮಾ ಮಾಡಿದರೆ ಅಲ್ಲಿ ವಿವಾದಗಳು ಹುಟ್ಟಿಕೊಳ್ಳೋದು ಕಡಿಮೆ. ಅಲ್ಲಿಯೂ ತಪ್ಪುಗಳನ್ನು ಹುಡುಕಿ ಟೀಕೆ ಮಾಡುವವರು ಇದ್ದಾರೆ. ಆದರೆ, ರಾಮಾಯಣ-ಮಹಾಭಾರತದಂಥ ಮಹಾಗ್ರಂಥಗಳನ್ನು ಆಧರಿಸಿ ಸಿನಿಮಾ ಮಾಡುವಾಗ ಹೆಚ್ಚು ಎಚ್ಚರಿಕೆ ಬೇಕು. ಅಲ್ಲಿ ಮನಬಂದಂತೆ ದೃಶ್ಯಗಳನ್ನು ತೋರಿಸಲು ಆಯ್ಕೆ ಇರುವುದಿಲ್ಲ. ‘ಆದಿಪುರುಷ್’ (Adipurush Movie) ನಿರ್ದೇಶಕ ಓಂ ರಾವತ್ ಇದನ್ನು ಮರೆತಂತಿದೆ. ಅವರ ನಿರ್ದೇಶನದ ಬಗ್ಗೆ ಟೀಕೆ ವ್ಯಕ್ತವಾಗಿದೆ. ನಟಿ ಕಂಗನಾ ರಣಾವತ್ (Kangana Ranaut) ಕೂಡ ಪರೋಕ್ಷವಾಗಿ ಈ ಚಿತ್ರವನ್ನು ಟೀಕೆ ಮಾಡಿದ್ದಾರೆ. ಜೊತೆಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ನಟಿ ಕಂಗನಾ ರಣಾವತ್ ಅವರು ತುಂಬಾನೇ ವಿಚಿತ್ರ ಸ್ವಭಾವದವರು. ಅವರು ಬಾಲಿವುಡ್ ಮಾಫಿಯಾನ ತೆಗಳುತ್ತಿರುತ್ತಾರೆ. ಸ್ಟಾರ್ ಕಿಡ್​​ಗಳ ಬಗ್ಗೆ ಅವರಿಗೆ ಸಿಟ್ಟಿದೆ. ಅವರು ಒಳ್ಳೆಯ ಕೆಲಸ ಮಾಡಿದರೆ ಕಂಗನಾ ಹೊಗಳುತ್ತಾರೆ. ಆಪ್ತರು ಕೆಟ್ಟ ಕೆಲಸ ಮಾಡಿದರೆ ಅವರನ್ನು ಬೈಯ್ಯೋಕೆ ಕಂಗನಾ ಹಿಂಜರಿದವರಲ್ಲ. ಈಗ ಕಂಗನಾ ‘ಆದಿಪುರುಷ್’ ತಂಡವನ್ನು ಟೀಕಿಸಿದ್ದಾರೆ. ‘ರಾಮನ ಹೆಸರು ಹಾಳುಮಾಡಬೇಡಿ’ ಎಂದು ಕೋರಿದ್ದಾರೆ.

ರಾಮ ಹಾಗೂ ಸೀತೆಯ ಫೋಟೋನ ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ರಾಮ್ ಕ ನಾಮ್ ಬದ್ನಾಮ್ ನ ಕರೋ’ (ರಾಮನ ಹೆಸರನ್ನು ಕೆಡಿಸಬೇಡಿ) ಎಂದು ಸಾಂಗ್ ಹಾಕಿದ್ದಾರೆ. ಇದು ‘ಆದಿಪುರುಷ್’ ತಂಡಕ್ಕೆ ಹೇಳಿದ ಮಾತು ಎಂಬುದನ್ನು ಎಲ್ಲರೂ ಸುಲಭವಾಗಿ ಊಹಿಸಿದ್ದಾರೆ. ಕಂಗನಾ ಮಾತನನ್ನು ಅನೇಕರು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಟೀಕೆ ಬಂದರೇನಂತೆ? ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆದ ತೆಗೆದ ‘ಆದಿಪುರುಷ್’ ಸಿನಿಮಾ

ನೆಗೆಟಿವ್ ವಿಮರ್ಶೆ ಪಡೆದ ಹೊರತಾಗಿಯೂ ‘ಆದಿಪುರುಷ್’ ಒಳ್ಳೆಯ ಗಳಿಕೆ ಮಾಡಿದೆ. ಮೊದಲ ದಿನ ಈ ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ವಿಶ್ವಾದ್ಯಂತ 150 ಕೋಟಿ ರೂಪಾಯಿ ಗಳಿಸಿದೆ. ‘ಆದಿಪುರುಷ್’ ಚಿತ್ರ ಇಂದು (ಜೂನ್17) ಹಾಗೂ ನಾಳೆ (ಜೂನ್ 18) ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:20 pm, Sat, 17 June 23

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ