AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿರ್ದೇಶಕರು ತಪ್ಪು ಮಾಡಿದರು ಎಂದು ನನಗನಿಸಿತು’; ‘ತಲೈವಿ’ ಬಗ್ಗೆ ಕಂಗನಾ ರಣಾವತ್​ ಅಚ್ಚರಿಯ ಹೇಳಿಕೆ

‘ತಲೈವಿ’ ಸಿನಿಮಾದಲ್ಲಿ ಜಯಲಲಿತಾ ಪಾತ್ರವನ್ನು ಕಂಗನಾ ನಿರ್ವಹಿಸಿದ್ದಾರೆ. ಸಿನಿಮಾದಲ್ಲಿ ಜಯಲಲಿತಾ ರೀತಿಯಲ್ಲೇ ಕಾಣುತ್ತಿದ್ದಾರೆ ಕಂಗನಾ. ಆರಂಭದಲ್ಲಿ ಕಂಗನಾಗೆ ಈ ನಂಬಿಕೆ ಇರಲಿಲ್ಲ. ನಿರ್ದೇಶಕರು ತಪ್ಪು ಮಾಡಿದರು ಎಂದು ಅವರಿಗೆ ಅನಿಸಿತ್ತು.  

‘ನಿರ್ದೇಶಕರು ತಪ್ಪು ಮಾಡಿದರು ಎಂದು ನನಗನಿಸಿತು’; ‘ತಲೈವಿ’ ಬಗ್ಗೆ ಕಂಗನಾ ರಣಾವತ್​ ಅಚ್ಚರಿಯ ಹೇಳಿಕೆ
‘ನಿರ್ದೇಶಕರು ತಪ್ಪು ಮಾಡಿದರು ಎಂದು ನನಗನಿತು’; ‘ತಲೈವಿ’ ಬಗ್ಗೆ ಕಂಗನಾ ರಣಾವತ್​ ಅಚ್ಚರಿಯ ಹೇಳಿಕೆ
TV9 Web
| Edited By: |

Updated on:Sep 08, 2021 | 3:57 PM

Share

ಕಂಗನಾ ರಣಾವತ್​ ನಟನೆಯ ‘ತಲೈವಿ’ ಸಿನಿಮಾ ಶುಕ್ರವಾರ (ಸೆಪ್ಟೆಂಬರ್ 10) ರಿಲೀಸ್​ ಆಗುತ್ತಿದೆ. ಈ ಸಿನಿಮಾ ಜಯಲಲಿತಾ ಬಯೋಪಿಕ್​ ಎನ್ನುವ ಕಾರಣಕ್ಕೆ ಬಹಳ ಮಹತ್ವ ಪಡೆದುಕೊಂಡಿದೆ. ಚಿತ್ರರಂಗದ ಹಿನ್ನೆಲೆಯಿಂದ ಬಂದ ಜಯಲಲಿತಾ ನಂತರ ತಮಿಳುನಾಡು ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಸಿದರು. ಈಗ ಅವರ ಬಗ್ಗೆ ಬಯೋಪಿಕ್​ ಸಿದ್ಧಗೊಂಡಿರುವುದು ಸಹಜವಾಗಿಯೇ ಹೈಪ್​ ಪಡೆದುಕೊಂಡಿದೆ. ಸಿನಿಮಾ ರಿಲೀಸ್​ಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕಂಗನಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ಅಮ್ಮ ಎಂದೇ ಖ್ಯಾತಿ ಪಡೆದವರು ಜಯಲಲಿತಾ. ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರು ಮೃತಪಟ್ಟಾಗ ಆದ ಶಾಕ್​ನಿಂದ ಅನೇಕರು ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಕೂಡ ಇದೆ. ಈಗಾಗಲೇ ರಿಲೀಸ್​ ಆಗಿರುವ ಸಿನಿಮಾದ ಪೋಸ್ಟರ್​, ಟ್ರೇಲರ್​ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗ ಅವರ ಜೀವನ ಆಧರಿಸಿ ಸಿನಿಮಾ ಸಿದ್ಧಗೊಂಡಿದ್ದು, ಜಯಲಲಿತಾ ಪಾತ್ರವನ್ನು ಕಂಗನಾ ನಿರ್ವಹಿಸಿದ್ದಾರೆ. ಸಿನಿಮಾದಲ್ಲಿ ಜಯಲಲಿತಾ ರೀತಿಯಲ್ಲೇ ಕಾಣುತ್ತಿದ್ದಾರೆ ಕಂಗನಾ. ಆರಂಭದಲ್ಲಿ ಕಂಗನಾಗೆ ಈ ನಂಬಿಕೆ ಇರಲಿಲ್ಲ. ನಿರ್ದೇಶಕರು ತಪ್ಪು ಮಾಡಿದರು ಎಂದು ಅವರಿಗೆ ಅನಿಸಿತ್ತು.

‘ತಲೈವಿಯ ಪಾತ್ರಕ್ಕೆ ನನ್ನ ಆಯ್ಕೆ ಮಾಡಿ ನಿರ್ದೇಶಕರು ತಪ್ಪು ಮಾಡಿದರು ಎಂದು ನನಗೆ ಅನ್ನಿಸಿತು. ನಾನು ಈ ಪಾತ್ರಕ್ಕೆ ಸೂಕ್ತಳಲ್ಲ ಎಂದೇ ಭಾವಿಸಿದ್ದೆ. ಒಂದೊಮ್ಮೆ ನಾನು ಜಯಲಲಿತಾ ರೀತಿಯಲ್ಲಿ ಕಾಣದಿದ್ದರೆ ತಮಿಳುನಾಡಿನ ಜನ ನನ್ನ ವಿರುದ್ಧ ಧಂಗೆ ಏಳುತ್ತಾರೆ. ಚಿತ್ರಮಂದಿರಗಳನ್ನು ಸುಡುವ ಸಾಧ್ಯತೆಯೂ ಇರುತ್ತದೆ ಎನ್ನುವ ಭಯದಲ್ಲಿದೆ’ ಎಂದಿದ್ದಾರೆ ಕಂಗನಾ.

ಈ ಸಿನಿಮಾಗಾಗಿ ಕಂಗನಾ ಸಾಕಷ್ಟು ತೂಕ ಹೆಚ್ಚಿಸಿಕೊಂಡಿದ್ದರು. ಈ ವಿಚಾರ ಕೂಡ ಕಂಗನಾ ಅವರನ್ನು ಚಿಂತೆಗೆ ಈಡು ಮಾಡಿತ್ತು. ‘ನಿರ್ದೇಶಕರು ಬಂದು ನೀವು ತೂಕ ಹೆಚ್ಚಿಸಿಕೊಳ್ಳಬೇಕು ಎಂದಾಗ ನನಗೆ ಚಿಂತೆ ಆಯಿತು. ಒಂದು ಸಿನಿಮಾಗಾಗಿ 20 ಕೆಜಿ ಹೆಚ್ಚಿಸಿಕೊಳ್ಳುವುದು ಎಂದರೆ ಸುಲಭದ ಮಾತಲ್ಲ. ಆದರೆ ಪಾತ್ರಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ’ ಎಂದಿದ್ದಾರೆ ಅವರು.

‘ತಲೈವಿ’ ಸಿನಿಮಾದಲ್ಲಿ ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ನಟಿಸಿದ್ದಾರೆ. ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ.  ವಿಜಯ್​ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ಕಂಗನಾ ರಣಾವತ್​ ‘ತಲೈವಿ’ಗೆ ಐದು ರಾಷ್ಟ್ರ ಪ್ರಶಸ್ತಿ ಬರಲೇಬೇಕು, ಇಲ್ಲವಾದರೆ ಬೇಸರವಾಗುತ್ತದೆ’

Published On - 3:10 pm, Wed, 8 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ