AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾ ರಣಾವತ್​ಗೆ ಕೊರೊನಾ ಪಾಸಿಟಿವ್​; ಇದೊಂದು ಸಣ್ಣ ಜ್ವರ ಎಂದ ನಟಿ

Coronavirus Positive: ಸದ್ಯ ಕಂಗನಾ ರಣಾವತ್​ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

Kangana Ranaut: ಕಂಗನಾ ರಣಾವತ್​ಗೆ ಕೊರೊನಾ ಪಾಸಿಟಿವ್​; ಇದೊಂದು ಸಣ್ಣ ಜ್ವರ ಎಂದ ನಟಿ
ಕಂಗನಾ ರಣಾವತ್
ಮದನ್​ ಕುಮಾರ್​
|

Updated on: May 08, 2021 | 11:33 AM

Share

ಚಿತ್ರರಂಗದ ಹಲವರಿಗೆ ಕೊರೊನಾ ವೈರಸ್​ ತಗುಲುತ್ತಿದೆ. ಈಗ ನಟಿ ಕಂಗನಾ ರಣಾವತ್​ ಅವರಿಗೂ ಕೊವಿಡ್​ ಪಾಸಿಟಿವ್​ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ‘ಕಳೆದ ಕೆಲವು ದಿನಗಳಿಂದ ಸುಸ್ತಾಗುತ್ತಿತ್ತು. ಕಣ್ಣುಗಳು ಉರಿಯುತ್ತಿದ್ದವು. ಹಿಮಾಚಲ ಪ್ರದೇಶಕ್ಕೆ ಹೋಗಬೇಕು ಅಂದುಕೊಂಡಿದ್ದೆ. ಹಾಗಾಗಿ ಟೆಸ್ಟ್​ ಮಾಡಿಸಿದೆ. ಪಾಸಿಟಿವ್​ ವರದಿ ಬಂದಿದೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಸದ್ಯ ಕಂಗನಾ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ‘ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ. ಹೆದರಿಕೊಂಡರೆ ಇದು ಮತ್ತಷ್ಟು ಹೆದರಿಸುತ್ತದೆ. ಎಲ್ಲರೂ ಇದನ್ನು ನಾಶ ಮಾಡೋಣ. ಕೊವಿಡ್​-19 ಎಂದರೆ ಸಣ್ಣ ಜ್ವರವಲ್ಲದೇ ಮತ್ತೇನೂ ಅಲ್ಲ’ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್​ ಈ ಹಿಂದೆ ಅನೇಕ ಬಾರಿ ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್​ ಧರಿಸಿರಲಿಲ್ಲ. ಆ ಕಾರಣದಿಂದ ಅವರನ್ನು ಹಲವರು ಟೀಕಿಸಿದ್ದರು. ಈಗ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಕಂಗನಾ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಕಮೆಂಟ್​ಗಳ ಮೂಲಕ ಹಾರೈಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈಗಾಗಲೇ ಕೊರೊನಾದಿಂದ ಮೃತರಾಗಿದ್ದಾರೆ. ಆದ್ದರಿಂದ ಕೊರೊನಾ ಎಂಬ ಪದ ಕೇಳಿದರೆ ಭಯ ಬೀಳುವಂತಹ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಧೈರ್ಯವೇ ಮುಖ್ಯ ಎಂಬುದನ್ನು ಕಂಗನಾ ಒತ್ತಿ ಹೇಳುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್​ ಆಗಿರುವ ಕಂಗನಾಗೆ ಇತ್ತೀಚೆಗೆ ಟ್ವಿಟರ್ ಶಾಕ್​ ನೀಡಿತ್ತು. ಪದೇಪದೇ ಆಕ್ಷೇಪಾರ್ಹ ಟ್ವೀಟ್​ಗಳನ್ನು ಮಾಡಿದ ಕಾರಣಕ್ಕಾಗಿ ಅವರ ಟ್ವಿಟರ್​ ಖಾತೆಯನ್ನು ಶಾಶ್ವತವಾಗಿ ಸಸ್ಪೆಂಡ್​ ಮಾಡಲಾಗಿತ್ತು. ಸದ್ಯ ಅವರು ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಹೆಚ್ಚಾಗಿ ಇನ್​ಸ್ಟಾಗ್ರಾಮ್​ ಬಳಸುತ್ತಿದ್ದಾರೆ.

ಇದನ್ನೂ ಓದಿ:

Kangana Ranaut: ಕಂಗನಾ ರಣಾವತ್​ ಟ್ವಿಟರ್​ ಖಾತೆ ಸಸ್ಪೆಂಡ್​; ವಿಡಿಯೋ ಮೂಲಕ ಕಣ್ಣೀರು ಹಾಕಿದ ನಟಿ

ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!