AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾ ರಣಾವತ್​ಗೆ ಕೊರೊನಾ ಪಾಸಿಟಿವ್​; ಇದೊಂದು ಸಣ್ಣ ಜ್ವರ ಎಂದ ನಟಿ

Coronavirus Positive: ಸದ್ಯ ಕಂಗನಾ ರಣಾವತ್​ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

Kangana Ranaut: ಕಂಗನಾ ರಣಾವತ್​ಗೆ ಕೊರೊನಾ ಪಾಸಿಟಿವ್​; ಇದೊಂದು ಸಣ್ಣ ಜ್ವರ ಎಂದ ನಟಿ
ಕಂಗನಾ ರಣಾವತ್
ಮದನ್​ ಕುಮಾರ್​
|

Updated on: May 08, 2021 | 11:33 AM

Share

ಚಿತ್ರರಂಗದ ಹಲವರಿಗೆ ಕೊರೊನಾ ವೈರಸ್​ ತಗುಲುತ್ತಿದೆ. ಈಗ ನಟಿ ಕಂಗನಾ ರಣಾವತ್​ ಅವರಿಗೂ ಕೊವಿಡ್​ ಪಾಸಿಟಿವ್​ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ‘ಕಳೆದ ಕೆಲವು ದಿನಗಳಿಂದ ಸುಸ್ತಾಗುತ್ತಿತ್ತು. ಕಣ್ಣುಗಳು ಉರಿಯುತ್ತಿದ್ದವು. ಹಿಮಾಚಲ ಪ್ರದೇಶಕ್ಕೆ ಹೋಗಬೇಕು ಅಂದುಕೊಂಡಿದ್ದೆ. ಹಾಗಾಗಿ ಟೆಸ್ಟ್​ ಮಾಡಿಸಿದೆ. ಪಾಸಿಟಿವ್​ ವರದಿ ಬಂದಿದೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಸದ್ಯ ಕಂಗನಾ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ‘ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ. ಹೆದರಿಕೊಂಡರೆ ಇದು ಮತ್ತಷ್ಟು ಹೆದರಿಸುತ್ತದೆ. ಎಲ್ಲರೂ ಇದನ್ನು ನಾಶ ಮಾಡೋಣ. ಕೊವಿಡ್​-19 ಎಂದರೆ ಸಣ್ಣ ಜ್ವರವಲ್ಲದೇ ಮತ್ತೇನೂ ಅಲ್ಲ’ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್​ ಈ ಹಿಂದೆ ಅನೇಕ ಬಾರಿ ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್​ ಧರಿಸಿರಲಿಲ್ಲ. ಆ ಕಾರಣದಿಂದ ಅವರನ್ನು ಹಲವರು ಟೀಕಿಸಿದ್ದರು. ಈಗ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಕಂಗನಾ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಕಮೆಂಟ್​ಗಳ ಮೂಲಕ ಹಾರೈಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈಗಾಗಲೇ ಕೊರೊನಾದಿಂದ ಮೃತರಾಗಿದ್ದಾರೆ. ಆದ್ದರಿಂದ ಕೊರೊನಾ ಎಂಬ ಪದ ಕೇಳಿದರೆ ಭಯ ಬೀಳುವಂತಹ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಧೈರ್ಯವೇ ಮುಖ್ಯ ಎಂಬುದನ್ನು ಕಂಗನಾ ಒತ್ತಿ ಹೇಳುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್​ ಆಗಿರುವ ಕಂಗನಾಗೆ ಇತ್ತೀಚೆಗೆ ಟ್ವಿಟರ್ ಶಾಕ್​ ನೀಡಿತ್ತು. ಪದೇಪದೇ ಆಕ್ಷೇಪಾರ್ಹ ಟ್ವೀಟ್​ಗಳನ್ನು ಮಾಡಿದ ಕಾರಣಕ್ಕಾಗಿ ಅವರ ಟ್ವಿಟರ್​ ಖಾತೆಯನ್ನು ಶಾಶ್ವತವಾಗಿ ಸಸ್ಪೆಂಡ್​ ಮಾಡಲಾಗಿತ್ತು. ಸದ್ಯ ಅವರು ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಹೆಚ್ಚಾಗಿ ಇನ್​ಸ್ಟಾಗ್ರಾಮ್​ ಬಳಸುತ್ತಿದ್ದಾರೆ.

ಇದನ್ನೂ ಓದಿ:

Kangana Ranaut: ಕಂಗನಾ ರಣಾವತ್​ ಟ್ವಿಟರ್​ ಖಾತೆ ಸಸ್ಪೆಂಡ್​; ವಿಡಿಯೋ ಮೂಲಕ ಕಣ್ಣೀರು ಹಾಕಿದ ನಟಿ

ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ