Kangana Ranaut: ಕಂಗನಾ ರಣಾವತ್​ಗೆ ಕೊರೊನಾ ಪಾಸಿಟಿವ್​; ಇದೊಂದು ಸಣ್ಣ ಜ್ವರ ಎಂದ ನಟಿ

Coronavirus Positive: ಸದ್ಯ ಕಂಗನಾ ರಣಾವತ್​ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

Kangana Ranaut: ಕಂಗನಾ ರಣಾವತ್​ಗೆ ಕೊರೊನಾ ಪಾಸಿಟಿವ್​; ಇದೊಂದು ಸಣ್ಣ ಜ್ವರ ಎಂದ ನಟಿ
ಕಂಗನಾ ರಣಾವತ್
Follow us
|

Updated on: May 08, 2021 | 11:33 AM

ಚಿತ್ರರಂಗದ ಹಲವರಿಗೆ ಕೊರೊನಾ ವೈರಸ್​ ತಗುಲುತ್ತಿದೆ. ಈಗ ನಟಿ ಕಂಗನಾ ರಣಾವತ್​ ಅವರಿಗೂ ಕೊವಿಡ್​ ಪಾಸಿಟಿವ್​ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ‘ಕಳೆದ ಕೆಲವು ದಿನಗಳಿಂದ ಸುಸ್ತಾಗುತ್ತಿತ್ತು. ಕಣ್ಣುಗಳು ಉರಿಯುತ್ತಿದ್ದವು. ಹಿಮಾಚಲ ಪ್ರದೇಶಕ್ಕೆ ಹೋಗಬೇಕು ಅಂದುಕೊಂಡಿದ್ದೆ. ಹಾಗಾಗಿ ಟೆಸ್ಟ್​ ಮಾಡಿಸಿದೆ. ಪಾಸಿಟಿವ್​ ವರದಿ ಬಂದಿದೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಸದ್ಯ ಕಂಗನಾ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ‘ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ. ಹೆದರಿಕೊಂಡರೆ ಇದು ಮತ್ತಷ್ಟು ಹೆದರಿಸುತ್ತದೆ. ಎಲ್ಲರೂ ಇದನ್ನು ನಾಶ ಮಾಡೋಣ. ಕೊವಿಡ್​-19 ಎಂದರೆ ಸಣ್ಣ ಜ್ವರವಲ್ಲದೇ ಮತ್ತೇನೂ ಅಲ್ಲ’ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್​ ಈ ಹಿಂದೆ ಅನೇಕ ಬಾರಿ ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್​ ಧರಿಸಿರಲಿಲ್ಲ. ಆ ಕಾರಣದಿಂದ ಅವರನ್ನು ಹಲವರು ಟೀಕಿಸಿದ್ದರು. ಈಗ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಕಂಗನಾ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಕಮೆಂಟ್​ಗಳ ಮೂಲಕ ಹಾರೈಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈಗಾಗಲೇ ಕೊರೊನಾದಿಂದ ಮೃತರಾಗಿದ್ದಾರೆ. ಆದ್ದರಿಂದ ಕೊರೊನಾ ಎಂಬ ಪದ ಕೇಳಿದರೆ ಭಯ ಬೀಳುವಂತಹ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಧೈರ್ಯವೇ ಮುಖ್ಯ ಎಂಬುದನ್ನು ಕಂಗನಾ ಒತ್ತಿ ಹೇಳುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್​ ಆಗಿರುವ ಕಂಗನಾಗೆ ಇತ್ತೀಚೆಗೆ ಟ್ವಿಟರ್ ಶಾಕ್​ ನೀಡಿತ್ತು. ಪದೇಪದೇ ಆಕ್ಷೇಪಾರ್ಹ ಟ್ವೀಟ್​ಗಳನ್ನು ಮಾಡಿದ ಕಾರಣಕ್ಕಾಗಿ ಅವರ ಟ್ವಿಟರ್​ ಖಾತೆಯನ್ನು ಶಾಶ್ವತವಾಗಿ ಸಸ್ಪೆಂಡ್​ ಮಾಡಲಾಗಿತ್ತು. ಸದ್ಯ ಅವರು ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಹೆಚ್ಚಾಗಿ ಇನ್​ಸ್ಟಾಗ್ರಾಮ್​ ಬಳಸುತ್ತಿದ್ದಾರೆ.

ಇದನ್ನೂ ಓದಿ:

Kangana Ranaut: ಕಂಗನಾ ರಣಾವತ್​ ಟ್ವಿಟರ್​ ಖಾತೆ ಸಸ್ಪೆಂಡ್​; ವಿಡಿಯೋ ಮೂಲಕ ಕಣ್ಣೀರು ಹಾಕಿದ ನಟಿ

ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ