AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾ ರಣಾವತ್​ಗೆ ಕೊರೊನಾ ಪಾಸಿಟಿವ್​; ಇದೊಂದು ಸಣ್ಣ ಜ್ವರ ಎಂದ ನಟಿ

Coronavirus Positive: ಸದ್ಯ ಕಂಗನಾ ರಣಾವತ್​ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

Kangana Ranaut: ಕಂಗನಾ ರಣಾವತ್​ಗೆ ಕೊರೊನಾ ಪಾಸಿಟಿವ್​; ಇದೊಂದು ಸಣ್ಣ ಜ್ವರ ಎಂದ ನಟಿ
ಕಂಗನಾ ರಣಾವತ್
ಮದನ್​ ಕುಮಾರ್​
|

Updated on: May 08, 2021 | 11:33 AM

Share

ಚಿತ್ರರಂಗದ ಹಲವರಿಗೆ ಕೊರೊನಾ ವೈರಸ್​ ತಗುಲುತ್ತಿದೆ. ಈಗ ನಟಿ ಕಂಗನಾ ರಣಾವತ್​ ಅವರಿಗೂ ಕೊವಿಡ್​ ಪಾಸಿಟಿವ್​ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ‘ಕಳೆದ ಕೆಲವು ದಿನಗಳಿಂದ ಸುಸ್ತಾಗುತ್ತಿತ್ತು. ಕಣ್ಣುಗಳು ಉರಿಯುತ್ತಿದ್ದವು. ಹಿಮಾಚಲ ಪ್ರದೇಶಕ್ಕೆ ಹೋಗಬೇಕು ಅಂದುಕೊಂಡಿದ್ದೆ. ಹಾಗಾಗಿ ಟೆಸ್ಟ್​ ಮಾಡಿಸಿದೆ. ಪಾಸಿಟಿವ್​ ವರದಿ ಬಂದಿದೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಸದ್ಯ ಕಂಗನಾ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ‘ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ. ಹೆದರಿಕೊಂಡರೆ ಇದು ಮತ್ತಷ್ಟು ಹೆದರಿಸುತ್ತದೆ. ಎಲ್ಲರೂ ಇದನ್ನು ನಾಶ ಮಾಡೋಣ. ಕೊವಿಡ್​-19 ಎಂದರೆ ಸಣ್ಣ ಜ್ವರವಲ್ಲದೇ ಮತ್ತೇನೂ ಅಲ್ಲ’ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್​ ಈ ಹಿಂದೆ ಅನೇಕ ಬಾರಿ ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್​ ಧರಿಸಿರಲಿಲ್ಲ. ಆ ಕಾರಣದಿಂದ ಅವರನ್ನು ಹಲವರು ಟೀಕಿಸಿದ್ದರು. ಈಗ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಕಂಗನಾ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಕಮೆಂಟ್​ಗಳ ಮೂಲಕ ಹಾರೈಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈಗಾಗಲೇ ಕೊರೊನಾದಿಂದ ಮೃತರಾಗಿದ್ದಾರೆ. ಆದ್ದರಿಂದ ಕೊರೊನಾ ಎಂಬ ಪದ ಕೇಳಿದರೆ ಭಯ ಬೀಳುವಂತಹ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಧೈರ್ಯವೇ ಮುಖ್ಯ ಎಂಬುದನ್ನು ಕಂಗನಾ ಒತ್ತಿ ಹೇಳುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್​ ಆಗಿರುವ ಕಂಗನಾಗೆ ಇತ್ತೀಚೆಗೆ ಟ್ವಿಟರ್ ಶಾಕ್​ ನೀಡಿತ್ತು. ಪದೇಪದೇ ಆಕ್ಷೇಪಾರ್ಹ ಟ್ವೀಟ್​ಗಳನ್ನು ಮಾಡಿದ ಕಾರಣಕ್ಕಾಗಿ ಅವರ ಟ್ವಿಟರ್​ ಖಾತೆಯನ್ನು ಶಾಶ್ವತವಾಗಿ ಸಸ್ಪೆಂಡ್​ ಮಾಡಲಾಗಿತ್ತು. ಸದ್ಯ ಅವರು ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಹೆಚ್ಚಾಗಿ ಇನ್​ಸ್ಟಾಗ್ರಾಮ್​ ಬಳಸುತ್ತಿದ್ದಾರೆ.

ಇದನ್ನೂ ಓದಿ:

Kangana Ranaut: ಕಂಗನಾ ರಣಾವತ್​ ಟ್ವಿಟರ್​ ಖಾತೆ ಸಸ್ಪೆಂಡ್​; ವಿಡಿಯೋ ಮೂಲಕ ಕಣ್ಣೀರು ಹಾಕಿದ ನಟಿ

ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ