AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿಚಾರದಲ್ಲಿ ಯು-ಟರ್ನ್​ ತೆಗೆದುಕೊಂಡ ಕಂಗನಾ

ಕೊರೊನಾ ನಮಗೆ ಎಚ್ಚರಿಕೆಯ ಗಂಟೆ. ನಾವು ಜವಾಬ್ದಾರಿಯುತವಾಗಿ ಬದುಕದೆ ಇದ್ದರೆ ಮನುಷ್ಯ ಜನಾಂಗವು ಭವಿಷ್ಯದಲ್ಲಿ ತೊಂದರೆ ಅನುಭವಿಸಲಿದೆ ಎಂದು ಕಂಗನಾ ಹೇಳಿದ್ದರು.

ಕೊರೊನಾ ವಿಚಾರದಲ್ಲಿ ಯು-ಟರ್ನ್​ ತೆಗೆದುಕೊಂಡ ಕಂಗನಾ
ಕಂಗನಾ ರಣಾವತ್​
ರಾಜೇಶ್ ದುಗ್ಗುಮನೆ
|

Updated on:May 10, 2021 | 7:17 PM

Share

ಕಂಗನಾ ರಣಾವತ್​ಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಕಂಗನಾ ಏನೇ ಮಾಡಿದರೂ ವಿವಾದ ಸೃಷ್ಟಿಯಾಗುತ್ತದೆ. ಕೆಲವೊಂದು ಕಣ್ತಪ್ಪಿನಿಂದ ಆದರೆ, ಇನ್ನೂ ಕೆಲವನ್ನು ಅವರು ಉದ್ದೇಶಪೂರ್ವಕವಾಗಿಯೇ ಮಾಡುತ್ತಾರೆ. ಕೊರೊನಾ ಸಣ್ಣ ಜ್ವರವಷ್ಟೇ ಎಂದು ಟೀಕೆಗೆ ಒಳಗಾಗಿದ್ದ ಕಂಗನಾ ಈಗ ಈ ವಿಚಾರದಲ್ಲಿ ಯು-ಟರ್ನ್​ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಅವರು ಗಿಡ ಬೆಳೆಸಿ ಎಂದು ಹೇಳಿದ ವಿಚಾರ ಸಾಕಷ್ಟು ಟ್ರೋಲ್​ ಆಗಿದೆ.

ಕೊರೊನಾ ನಮಗೆ ಎಚ್ಚರಿಕೆಯ ಗಂಟೆ. ನಾವು ಜವಾಬ್ದಾರಿಯುತವಾಗಿ ಬದುಕದೆ ಇದ್ದರೆ ಮನುಷ್ಯ ಜನಾಂಗವು ಭವಿಷ್ಯದಲ್ಲಿ ತೊಂದರೆ ಅನುಭವಿಸಲಿದೆ. ಹೆಚ್ಚೆಚ್ಚು ಗಿಡಗಳನ್ನು ನೆಡಿ. ಪ್ರತಿ ವ್ಯಕ್ತಿ ಒಂದು ವರ್ಷಕ್ಕೆ 8 ಮರಗಳನ್ನು ನೆಡಬೇಕು ಎಂದು ಕಂಗನಾ ಕೋರಿದ್ದಾರೆ. ಇತ್ತೀಚೆಗೆ ಕೊರೊನಾ ಬಗ್ಗೆ ಹಾಕಿದ್ದ ಪೋಸ್ಟ್​ಗೆ ಈ ಹೇಳಿಕೆ ತದ್ವಿರುದ್ಧವಾಗಿದೆ.

ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಎದುರಾಗಿದೆ. ಈ ಸಂದರ್ಭದಲ್ಲಿ ಅನೇಕರು ನಾವು ಗಿಡಗಳನ್ನು ಬೆಳೆಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿಕೊಂಡಿದ್ದರು. ವೈದ್ಯಕೀಯ ಆಮ್ಲಜನಕ ಹಾಗೂ ಗಿಡಗಳು ನೀಡುವ ಆಮ್ಲಜನಕ ಎರಡೂ ಬೇರೆಬೇರೆ. ಹೀಗಾಗಿ, ಗಿಡ ಬೆಳೆಸುವುದಕ್ಕೂ ವೈದ್ಯಕೀಯ ಆಮ್ಲಜನಕ್ಕೂ ಯಾವುದೇ ನೇರ ಸಂಬಂಧವಿಲ್ಲ. ಈ ವಿಚಾರವನ್ನು ಪ್ರಸ್ತಾಪ ಮಾಡಿ ಕಂಗನಾ ಟ್ರೋಲ್​ ಆಗಿದ್ದಾರೆ. ಅನೇಕರು ಕಂಗನಾಗೆ ಸಾಮಾನ್ಯ ಜ್ಞಾನವೇ ಇಲ್ಲ ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಅವರು ಯು-ಟರ್ನ್​ ತೆಗೆದುಕೊಂಡ ಬಗ್ಗೆ ಬರೆದುಕೊಂಡಿದ್ದರು.

‘ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ. ಹೆದರಿಕೊಂಡರೆ ಇದು ಮತ್ತಷ್ಟು ಹೆದರಿಸುತ್ತದೆ. ಎಲ್ಲರೂ ಇದನ್ನು ನಾಶ ಮಾಡೋಣ. ಕೊವಿಡ್​-19 ಎಂದರೆ ಸಣ್ಣ ಜ್ವರವಲ್ಲದೇ ಮತ್ತೇನೂ ಅಲ್ಲ’ ಎಂದು ಕಂಗನಾ ಬರೆದುಕೊಂಡಿದ್ದರು. ನಂತರ ಈ ಪೋಸ್ಟ್​​ಅನ್ನು ಇನ್​ಸ್ಟಾಗ್ರಾಂ ಡಿಲೀಟ್​ ಮಾಡಿತ್ತು.

ಇದನ್ನೂ ಓದಿ: Kangana Ranaut: ಟ್ವಿಟರ್​ನಿಂದ ಹೊರದಬ್ಬಿಸಿಕೊಂಡ ಕಂಗನಾ ಇನ್​ಸ್ಟಾಗ್ರಾಮ್​ನಲ್ಲಿ ಒಂದು ವಾರ ಉಳಿಯೋದು ಕೂಡ ಅನುಮಾನ

Published On - 7:16 pm, Mon, 10 May 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ