AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿಚಾರದಲ್ಲಿ ಯು-ಟರ್ನ್​ ತೆಗೆದುಕೊಂಡ ಕಂಗನಾ

ಕೊರೊನಾ ನಮಗೆ ಎಚ್ಚರಿಕೆಯ ಗಂಟೆ. ನಾವು ಜವಾಬ್ದಾರಿಯುತವಾಗಿ ಬದುಕದೆ ಇದ್ದರೆ ಮನುಷ್ಯ ಜನಾಂಗವು ಭವಿಷ್ಯದಲ್ಲಿ ತೊಂದರೆ ಅನುಭವಿಸಲಿದೆ ಎಂದು ಕಂಗನಾ ಹೇಳಿದ್ದರು.

ಕೊರೊನಾ ವಿಚಾರದಲ್ಲಿ ಯು-ಟರ್ನ್​ ತೆಗೆದುಕೊಂಡ ಕಂಗನಾ
ಕಂಗನಾ ರಣಾವತ್​
ರಾಜೇಶ್ ದುಗ್ಗುಮನೆ
|

Updated on:May 10, 2021 | 7:17 PM

Share

ಕಂಗನಾ ರಣಾವತ್​ಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಕಂಗನಾ ಏನೇ ಮಾಡಿದರೂ ವಿವಾದ ಸೃಷ್ಟಿಯಾಗುತ್ತದೆ. ಕೆಲವೊಂದು ಕಣ್ತಪ್ಪಿನಿಂದ ಆದರೆ, ಇನ್ನೂ ಕೆಲವನ್ನು ಅವರು ಉದ್ದೇಶಪೂರ್ವಕವಾಗಿಯೇ ಮಾಡುತ್ತಾರೆ. ಕೊರೊನಾ ಸಣ್ಣ ಜ್ವರವಷ್ಟೇ ಎಂದು ಟೀಕೆಗೆ ಒಳಗಾಗಿದ್ದ ಕಂಗನಾ ಈಗ ಈ ವಿಚಾರದಲ್ಲಿ ಯು-ಟರ್ನ್​ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಅವರು ಗಿಡ ಬೆಳೆಸಿ ಎಂದು ಹೇಳಿದ ವಿಚಾರ ಸಾಕಷ್ಟು ಟ್ರೋಲ್​ ಆಗಿದೆ.

ಕೊರೊನಾ ನಮಗೆ ಎಚ್ಚರಿಕೆಯ ಗಂಟೆ. ನಾವು ಜವಾಬ್ದಾರಿಯುತವಾಗಿ ಬದುಕದೆ ಇದ್ದರೆ ಮನುಷ್ಯ ಜನಾಂಗವು ಭವಿಷ್ಯದಲ್ಲಿ ತೊಂದರೆ ಅನುಭವಿಸಲಿದೆ. ಹೆಚ್ಚೆಚ್ಚು ಗಿಡಗಳನ್ನು ನೆಡಿ. ಪ್ರತಿ ವ್ಯಕ್ತಿ ಒಂದು ವರ್ಷಕ್ಕೆ 8 ಮರಗಳನ್ನು ನೆಡಬೇಕು ಎಂದು ಕಂಗನಾ ಕೋರಿದ್ದಾರೆ. ಇತ್ತೀಚೆಗೆ ಕೊರೊನಾ ಬಗ್ಗೆ ಹಾಕಿದ್ದ ಪೋಸ್ಟ್​ಗೆ ಈ ಹೇಳಿಕೆ ತದ್ವಿರುದ್ಧವಾಗಿದೆ.

ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಎದುರಾಗಿದೆ. ಈ ಸಂದರ್ಭದಲ್ಲಿ ಅನೇಕರು ನಾವು ಗಿಡಗಳನ್ನು ಬೆಳೆಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿಕೊಂಡಿದ್ದರು. ವೈದ್ಯಕೀಯ ಆಮ್ಲಜನಕ ಹಾಗೂ ಗಿಡಗಳು ನೀಡುವ ಆಮ್ಲಜನಕ ಎರಡೂ ಬೇರೆಬೇರೆ. ಹೀಗಾಗಿ, ಗಿಡ ಬೆಳೆಸುವುದಕ್ಕೂ ವೈದ್ಯಕೀಯ ಆಮ್ಲಜನಕ್ಕೂ ಯಾವುದೇ ನೇರ ಸಂಬಂಧವಿಲ್ಲ. ಈ ವಿಚಾರವನ್ನು ಪ್ರಸ್ತಾಪ ಮಾಡಿ ಕಂಗನಾ ಟ್ರೋಲ್​ ಆಗಿದ್ದಾರೆ. ಅನೇಕರು ಕಂಗನಾಗೆ ಸಾಮಾನ್ಯ ಜ್ಞಾನವೇ ಇಲ್ಲ ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಅವರು ಯು-ಟರ್ನ್​ ತೆಗೆದುಕೊಂಡ ಬಗ್ಗೆ ಬರೆದುಕೊಂಡಿದ್ದರು.

‘ನನ್ನ ದೇಹದೊಳಗೆ ಈ ವೈರಸ್​ ಇದೆ ಎಂಬುದು ತಿಳಿದಿರಲಿಲ್ಲ. ಈಗ ನಾನು ಇದನ್ನು ನಾಶ ಮಾಡುತ್ತೇನೆ. ಹೆದರಿಕೊಂಡರೆ ಇದು ಮತ್ತಷ್ಟು ಹೆದರಿಸುತ್ತದೆ. ಎಲ್ಲರೂ ಇದನ್ನು ನಾಶ ಮಾಡೋಣ. ಕೊವಿಡ್​-19 ಎಂದರೆ ಸಣ್ಣ ಜ್ವರವಲ್ಲದೇ ಮತ್ತೇನೂ ಅಲ್ಲ’ ಎಂದು ಕಂಗನಾ ಬರೆದುಕೊಂಡಿದ್ದರು. ನಂತರ ಈ ಪೋಸ್ಟ್​​ಅನ್ನು ಇನ್​ಸ್ಟಾಗ್ರಾಂ ಡಿಲೀಟ್​ ಮಾಡಿತ್ತು.

ಇದನ್ನೂ ಓದಿ: Kangana Ranaut: ಟ್ವಿಟರ್​ನಿಂದ ಹೊರದಬ್ಬಿಸಿಕೊಂಡ ಕಂಗನಾ ಇನ್​ಸ್ಟಾಗ್ರಾಮ್​ನಲ್ಲಿ ಒಂದು ವಾರ ಉಳಿಯೋದು ಕೂಡ ಅನುಮಾನ

Published On - 7:16 pm, Mon, 10 May 21

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ