AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

ಕಂಗನಾ ತಮ್ಮನ್ನು ತಾವು ಶಾರುಖ್​ ಖಾನ್​ಗೆ ಹೋಲಿಕೆ ಮಾಡಿಕೊಂಡಿದ್ದು, ಪರೋಕ್ಷವಾಗಿ ಶಾರುಖ್​ ಖಾನ್​ಗಿಂತ ತಾವು ಗ್ರೇಟ್​ ಎಂದು ಹೇಳಿಕೊಂಡಿದ್ದು ಅನೇಕರಿಗೆ ಇಷ್ಟವಾಗಿಲ್ಲ.

ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​
ಶಾರುಖ್​- ಕಂಗನಾ
ರಾಜೇಶ್ ದುಗ್ಗುಮನೆ
|

Updated on: Apr 28, 2021 | 8:23 PM

Share

ನಟಿ ಕಂಗನಾ ರಣಾವತ್​ ಯಾವುದೇ ಹಿನ್ನೆಲೆ ಇಲ್ಲದೆ ಬಾಲಿವುಡ್​ಗೆ ಕಾಲಿಟ್ಟವರು. ಅವರ ಮೊದಲ ಸಿನಿಮಾ ಗ್ಯಾಂಗ್​ಸ್ಟರ್ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಚಿತ್ರ ತೆರೆಕಂಡು 15 ವರ್ಷ ಕಳೆದಿದೆ. ಈ ಖುಷಿಗೆ ಕಂಗನಾ ಸರಣಿ ಟ್ವೀಟ್​ ಮಾಡಿದ್ದಾರೆ. ಅಷ್ಟೇ ಅಲ್ಲ ತಮ್ಮನ್ನು ತಾವು ಶಾರುಖ್​ ಖಾನ್​ ಜತೆ ಹೋಲಿಕೆ ಮಾಡಿಕೊಂಡಿದ್ದಾರೆ. ಕೆಲವರು ಇದನ್ನು ಟ್ರೋಲ್​ ಮಾಡಿದರೆ, ಇನ್ನೂ ಕೆಲವರು ಕಂಗನಾ ಅವರನ್ನು ಹೊಗಳಿದ್ದಾರೆ.

2006ರಲ್ಲಿ ತೆರೆಗೆ ಬಂದ ಗ್ಯಾಂಗ್​ಸ್ಟರ್​ ಸಿನಿಮಾ ಮೂಲಕ ಬಣ್ಣ ಬದುಕು ಆರಂಭಿಸಿದವರು ಕಂಗನಾ. ಇಮ್ರಾನ್​ ಹಶ್ಮಿ ಈ ಚಿತ್ರದ ಹೀರೋ. ಅಂದಿನ ಕಾಲದಲ್ಲಿ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡಿತ್ತು. ನಂತರ ಕಂಗನಾಗೆ ಸಾಲು ಸಾಲು ಸಿನಿಮಾ ಆಫರ್​ಗಳು ಬರೋಕೆ ಪ್ರಾರಂಭವಾದವು. 15 ವರ್ಷಗಳ ಜರ್ನಿಯಲ್ಲಿ ಕಂಗನಾ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ.

15 ವರ್ಷಗಳ ಹಿಂದೆ ಗ್ಯಾಂಗ್​ಸ್ಟರ್​ ರಿಲೀಸ್​ ಆಗಿತ್ತು. ನನ್ನದು ಹಾಗೂ ಶಾರುಖ್​ ಖಾನ್​​ ಇಬ್ಬರದ್ದೂ ದೊಡ್ಡ ಸಕ್ಸಸ್​ ಸ್ಟೋರಿಗಳಿವೆ. ನಮ್ಮಿಬ್ಬರಿಗೆ ವ್ಯತ್ಯಾಸ ಇಷ್ಟೆ. ಶಾರುಖ್​ ದೆಹಲಿಯಿಂದ ಬಂದವರು. ಕಾನ್ವೆಂಟ್​ನಲ್ಲಿ ಓದಿದವರು. ಅವರ ಪಾಲಕರು ಸಿನಿಮಾ ಇಂಡಸ್ಟ್ರಿಯನ್ನು ಹತ್ತಿರದಿಂದ ಕಂಡವರು. ಆದರೆ, ನನಗೆ ಒಂದಕ್ಷರ ಇಂಗ್ಲಿಷ್​ ಬರುತ್ತಿರಲಿಲ್ಲ. ಹಿಮಾಚಲ ಪ್ರದೇಶದ ಕುಗ್ರಾಮದಿಂದ ಬಂದವಳು ನಾನು. ನನ್ನ ಪ್ರತಿ ದಿನವೂ ಹೋರಾಟವೇ ಆಗಿತ್ತು ಎಂದು ಕಂಗನಾ ಹೇಳಿಕೊಂಡಿದ್ದಾರೆ.

ಕಂಗನಾ ತಮ್ಮನ್ನು ತಾವು ಶಾರುಖ್​ ಖಾನ್​ಗೆ ಹೋಲಿಕೆ ಮಾಡಿಕೊಂಡಿದ್ದು, ಪರೋಕ್ಷವಾಗಿ ಶಾರುಖ್​ ಖಾನ್​ಗಿಂತ ತಾವು ಗ್ರೇಟ್​ ಎಂದು ಹೇಳಿಕೊಂಡಿದ್ದು ಅನೇಕರಿಗೆ ಇಷ್ಟವಾಗಿಲ್ಲ. ಇದನ್ನು ಸಾಕಷ್ಟು ಜನರು ಟ್ರೋಲ್​ ಮಾಡಿದ್ದಾರೆ. ಶಾರುಖ್​ ತಂದೆ-ತಾಯಿಗೂ ಚಿತ್ರರಂಗಕ್ಕೂ ಎಲ್ಲಿ ಸಂಬಂಧ ಇತ್ತು ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆಗೆ ಸಿನಿಮಾ ರಂಗ ಮತ್ತೆ ತೊಂದರೆಗೆ ಸಿಲುಕಿದೆ. ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಕೆಲವೆಡೆ ಚಿತ್ರಮಂದಿರ ಮುಚ್ಚಲಾಗಿದೆ ಇದರಿಂದಾಗಿ ಅನೇಕ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿದೆ. ಈ ಸಾಲಿಗೆ ಕಂಗನಾ ರಣಾವತ್​ ನಟನೆಯ ತಲೈವಿ ಸಿನಿಮಾ ಕೂಡ ಸೇರ್ಪಡೆ ಆಗಿತ್ತು. ಚಿತ್ರತಂಡದಿಂದ ಮುಂದಿನ ರಿಲೀಸ್​ ದಿನಾಂಕ ಯಾವಾಗ ಎಂಬುದು ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಕೊರೊನಾ ಪ್ರಕರಣಗಳು ಕಡಿಮೆ ಆದ ನಂತರದಲ್ಲಿ ಸಿನಿಮಾ ತೆರೆಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಶಾರುಖ್​ ಖಾನ್​ಗೂ ಇತ್ತು ಆಹ್ವಾನ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?