Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?

ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡು ಮತ್ತೆ ಸ್ಲಿಮ್​ ಆಗಿದ್ದರು. ಸಿನಿಮಾಕ್ಕಾಗಿ ಅವರು ತೆಗೆದುಕೊಂಡ ಮತ್ತೊಂದು ರಿಸ್ಕ್​ನ ವಿಚಾರ ಈಗ ಹೊರಬಿದ್ದಿದೆ. 

ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?
ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ
Follow us
ರಾಜೇಶ್ ದುಗ್ಗುಮನೆ
| Updated By: ganapathi bhat

Updated on: Apr 04, 2021 | 7:12 PM

ಕಂಗನಾ ರಣಾವತ್ ಪ್ರತಿ ಸಿನಿಮಾಗೂ ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಾರೆ. ಸಿನಿಮಾದಲ್ಲಿರುವ ಪಾತ್ರ ಯಾವ ಅಂಶ ಕೇಳುತ್ತದೆಯೋ ಅದನ್ನು ಈಡೇರಿಸುತ್ತಾರೆ. ತಲೈವಿ ಸಿನಿಮಾಗೆ ಕಂಗನಾ ತೆಗೆದುಕೊಂಡ ದೊಡ್ಡ ರಿಸ್ಕ್​ ವಿಚಾರ ಒಂದು ಈಗ ರಿವೀಲ್​ ಆಗಿದೆ. ಈ ವಿಚಾರ ಕೇಳಿದ ಅಭಿಮಾನಿಗಳು ಕಂಗನಾ ಅವರನ್ನು ಹೊಗಳುತ್ತಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡು ಮತ್ತೆ ಸ್ಲಿಮ್​ ಆಗಿದ್ದರು. ಆ ಟ್ರಾನ್ಸ್​ಫಾರ್ಮೇಷನ್​ ನೋಡಿ ಅನೇಕರು ಮೆಚ್ಚಿಕೊಂಡಿದ್ದರು. ಈಗ ಸಿನಿಮಾಕ್ಕಾಗಿ ಅವರು ತೆಗೆದುಕೊಂಡ ಮತ್ತೊಂದು ರಿಸ್ಕ್​ನ ವಿಚಾರ ಹೊರ ಬಿದ್ದಿದೆ.

ತಲೈವಿ ಸಿನಿಮಾದಲ್ಲಿ ಇಲಾ ಇಲಾ ಹೆಸರಿನ ಹಾಂಡೊಂದು ಬರುತ್ತದೆ. ಈ ಹಾಡಿನ ಬಹುತೇಕ ಶೂಟಿಂಗ್​ ನೀರಿನಲ್ಲೇ ನಡೆದಿದೆಯಂತೆ. ಈ ಹಾಡಿಗಾಗಿ 16 ಗಂಟೆಗಳ ಕಾಲ ಕಂಗನಾ ಒದ್ದೇಯಾಗೇ ಇದ್ದರು. ಈ ವೇಳೆ ಅವರು ತೀವ್ರವಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದನ್ನು ಲೆಕ್ಕಿಸದೇ ಅವರು ನೀರಿನಲ್ಲಿ ಇದ್ದಿದ್ದು ಚಿತ್ರತಂಡದವರಿಗೇ ಅಚ್ಚರಿ ತಂದಿತ್ತು.

ತಲೈವಿ ಸಿನಿಮಾದ ಈ ವಿಶೇಷ ಸಾಂಗ್​​ ಶೂಟ್​ ಮಾಡೋಕೆ ಚಿತ್ರತಂಡ ಸೆಟ್​ ಸಿದ್ಧಪಡಿಸಿಕೊಂಡಿತ್ತು. ಆದರೆ, ಕಂಗನಾಗೆ ಜ್ವರ ಕಾಡಿತ್ತು. ಹೀಗಾಗಿ ಚಿತ್ರತಂಡದವರು ಸಿನಿಮಾ ಶೂಟಿಂಗ್​ ಮುಂದೂಡಲು ನಿರ್ಧರಿಸಿದ್ದರು. ಆದರೆ, ಇದಕ್ಕೆ ಕಂಗನಾ ಒಪ್ಪಲಿಲ್ಲ. ನೇರವಾಗಿ ಅವರು ಸೆಟ್​ಗೆ ಬಂದು 16 ಗಂಟೆ ಕಾಲ ಒದ್ದೆಯಾಗೇ ಇದ್ದರು. ಈ ವೇಳೆ ಅವರ ದೇಹದ ತಾಪಮಾನ ಕೂಡ ಹೆಚ್ಚಾಗಿತ್ತು.

ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ. ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡಿದ್ದರು ಎನ್ನುವುದು ವಿಶೇಷ.

ಇದನ್ನೂ ಓದಿ: ತಮಿಳುನಾಡು ಚುನಾವಣೆ ಹೊಸಿಲಲ್ಲೇ ‘ತಲೈವಿ’ ಟ್ರೇಲರ್ ಬಿಡುಗಡೆ: ಮತದಾರರಿಗೆ ನೆನಪಾಗ್ತಾರಾ ಜಯಲಲಿತಾ?

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ