AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?

ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡು ಮತ್ತೆ ಸ್ಲಿಮ್​ ಆಗಿದ್ದರು. ಸಿನಿಮಾಕ್ಕಾಗಿ ಅವರು ತೆಗೆದುಕೊಂಡ ಮತ್ತೊಂದು ರಿಸ್ಕ್​ನ ವಿಚಾರ ಈಗ ಹೊರಬಿದ್ದಿದೆ. 

ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?
ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ
ರಾಜೇಶ್ ದುಗ್ಗುಮನೆ
| Updated By: ganapathi bhat|

Updated on: Apr 04, 2021 | 7:12 PM

Share

ಕಂಗನಾ ರಣಾವತ್ ಪ್ರತಿ ಸಿನಿಮಾಗೂ ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಾರೆ. ಸಿನಿಮಾದಲ್ಲಿರುವ ಪಾತ್ರ ಯಾವ ಅಂಶ ಕೇಳುತ್ತದೆಯೋ ಅದನ್ನು ಈಡೇರಿಸುತ್ತಾರೆ. ತಲೈವಿ ಸಿನಿಮಾಗೆ ಕಂಗನಾ ತೆಗೆದುಕೊಂಡ ದೊಡ್ಡ ರಿಸ್ಕ್​ ವಿಚಾರ ಒಂದು ಈಗ ರಿವೀಲ್​ ಆಗಿದೆ. ಈ ವಿಚಾರ ಕೇಳಿದ ಅಭಿಮಾನಿಗಳು ಕಂಗನಾ ಅವರನ್ನು ಹೊಗಳುತ್ತಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡು ಮತ್ತೆ ಸ್ಲಿಮ್​ ಆಗಿದ್ದರು. ಆ ಟ್ರಾನ್ಸ್​ಫಾರ್ಮೇಷನ್​ ನೋಡಿ ಅನೇಕರು ಮೆಚ್ಚಿಕೊಂಡಿದ್ದರು. ಈಗ ಸಿನಿಮಾಕ್ಕಾಗಿ ಅವರು ತೆಗೆದುಕೊಂಡ ಮತ್ತೊಂದು ರಿಸ್ಕ್​ನ ವಿಚಾರ ಹೊರ ಬಿದ್ದಿದೆ.

ತಲೈವಿ ಸಿನಿಮಾದಲ್ಲಿ ಇಲಾ ಇಲಾ ಹೆಸರಿನ ಹಾಂಡೊಂದು ಬರುತ್ತದೆ. ಈ ಹಾಡಿನ ಬಹುತೇಕ ಶೂಟಿಂಗ್​ ನೀರಿನಲ್ಲೇ ನಡೆದಿದೆಯಂತೆ. ಈ ಹಾಡಿಗಾಗಿ 16 ಗಂಟೆಗಳ ಕಾಲ ಕಂಗನಾ ಒದ್ದೇಯಾಗೇ ಇದ್ದರು. ಈ ವೇಳೆ ಅವರು ತೀವ್ರವಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದನ್ನು ಲೆಕ್ಕಿಸದೇ ಅವರು ನೀರಿನಲ್ಲಿ ಇದ್ದಿದ್ದು ಚಿತ್ರತಂಡದವರಿಗೇ ಅಚ್ಚರಿ ತಂದಿತ್ತು.

ತಲೈವಿ ಸಿನಿಮಾದ ಈ ವಿಶೇಷ ಸಾಂಗ್​​ ಶೂಟ್​ ಮಾಡೋಕೆ ಚಿತ್ರತಂಡ ಸೆಟ್​ ಸಿದ್ಧಪಡಿಸಿಕೊಂಡಿತ್ತು. ಆದರೆ, ಕಂಗನಾಗೆ ಜ್ವರ ಕಾಡಿತ್ತು. ಹೀಗಾಗಿ ಚಿತ್ರತಂಡದವರು ಸಿನಿಮಾ ಶೂಟಿಂಗ್​ ಮುಂದೂಡಲು ನಿರ್ಧರಿಸಿದ್ದರು. ಆದರೆ, ಇದಕ್ಕೆ ಕಂಗನಾ ಒಪ್ಪಲಿಲ್ಲ. ನೇರವಾಗಿ ಅವರು ಸೆಟ್​ಗೆ ಬಂದು 16 ಗಂಟೆ ಕಾಲ ಒದ್ದೆಯಾಗೇ ಇದ್ದರು. ಈ ವೇಳೆ ಅವರ ದೇಹದ ತಾಪಮಾನ ಕೂಡ ಹೆಚ್ಚಾಗಿತ್ತು.

ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ. ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡಿದ್ದರು ಎನ್ನುವುದು ವಿಶೇಷ.

ಇದನ್ನೂ ಓದಿ: ತಮಿಳುನಾಡು ಚುನಾವಣೆ ಹೊಸಿಲಲ್ಲೇ ‘ತಲೈವಿ’ ಟ್ರೇಲರ್ ಬಿಡುಗಡೆ: ಮತದಾರರಿಗೆ ನೆನಪಾಗ್ತಾರಾ ಜಯಲಲಿತಾ?

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ