AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?

ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡು ಮತ್ತೆ ಸ್ಲಿಮ್​ ಆಗಿದ್ದರು. ಸಿನಿಮಾಕ್ಕಾಗಿ ಅವರು ತೆಗೆದುಕೊಂಡ ಮತ್ತೊಂದು ರಿಸ್ಕ್​ನ ವಿಚಾರ ಈಗ ಹೊರಬಿದ್ದಿದೆ. 

ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?
ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 04, 2021 | 7:12 PM

Share

ಕಂಗನಾ ರಣಾವತ್ ಪ್ರತಿ ಸಿನಿಮಾಗೂ ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಾರೆ. ಸಿನಿಮಾದಲ್ಲಿರುವ ಪಾತ್ರ ಯಾವ ಅಂಶ ಕೇಳುತ್ತದೆಯೋ ಅದನ್ನು ಈಡೇರಿಸುತ್ತಾರೆ. ತಲೈವಿ ಸಿನಿಮಾಗೆ ಕಂಗನಾ ತೆಗೆದುಕೊಂಡ ದೊಡ್ಡ ರಿಸ್ಕ್​ ವಿಚಾರ ಒಂದು ಈಗ ರಿವೀಲ್​ ಆಗಿದೆ. ಈ ವಿಚಾರ ಕೇಳಿದ ಅಭಿಮಾನಿಗಳು ಕಂಗನಾ ಅವರನ್ನು ಹೊಗಳುತ್ತಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡು ಮತ್ತೆ ಸ್ಲಿಮ್​ ಆಗಿದ್ದರು. ಆ ಟ್ರಾನ್ಸ್​ಫಾರ್ಮೇಷನ್​ ನೋಡಿ ಅನೇಕರು ಮೆಚ್ಚಿಕೊಂಡಿದ್ದರು. ಈಗ ಸಿನಿಮಾಕ್ಕಾಗಿ ಅವರು ತೆಗೆದುಕೊಂಡ ಮತ್ತೊಂದು ರಿಸ್ಕ್​ನ ವಿಚಾರ ಹೊರ ಬಿದ್ದಿದೆ.

ತಲೈವಿ ಸಿನಿಮಾದಲ್ಲಿ ಇಲಾ ಇಲಾ ಹೆಸರಿನ ಹಾಂಡೊಂದು ಬರುತ್ತದೆ. ಈ ಹಾಡಿನ ಬಹುತೇಕ ಶೂಟಿಂಗ್​ ನೀರಿನಲ್ಲೇ ನಡೆದಿದೆಯಂತೆ. ಈ ಹಾಡಿಗಾಗಿ 16 ಗಂಟೆಗಳ ಕಾಲ ಕಂಗನಾ ಒದ್ದೇಯಾಗೇ ಇದ್ದರು. ಈ ವೇಳೆ ಅವರು ತೀವ್ರವಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದನ್ನು ಲೆಕ್ಕಿಸದೇ ಅವರು ನೀರಿನಲ್ಲಿ ಇದ್ದಿದ್ದು ಚಿತ್ರತಂಡದವರಿಗೇ ಅಚ್ಚರಿ ತಂದಿತ್ತು.

ತಲೈವಿ ಸಿನಿಮಾದ ಈ ವಿಶೇಷ ಸಾಂಗ್​​ ಶೂಟ್​ ಮಾಡೋಕೆ ಚಿತ್ರತಂಡ ಸೆಟ್​ ಸಿದ್ಧಪಡಿಸಿಕೊಂಡಿತ್ತು. ಆದರೆ, ಕಂಗನಾಗೆ ಜ್ವರ ಕಾಡಿತ್ತು. ಹೀಗಾಗಿ ಚಿತ್ರತಂಡದವರು ಸಿನಿಮಾ ಶೂಟಿಂಗ್​ ಮುಂದೂಡಲು ನಿರ್ಧರಿಸಿದ್ದರು. ಆದರೆ, ಇದಕ್ಕೆ ಕಂಗನಾ ಒಪ್ಪಲಿಲ್ಲ. ನೇರವಾಗಿ ಅವರು ಸೆಟ್​ಗೆ ಬಂದು 16 ಗಂಟೆ ಕಾಲ ಒದ್ದೆಯಾಗೇ ಇದ್ದರು. ಈ ವೇಳೆ ಅವರ ದೇಹದ ತಾಪಮಾನ ಕೂಡ ಹೆಚ್ಚಾಗಿತ್ತು.

ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ. ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡಿದ್ದರು ಎನ್ನುವುದು ವಿಶೇಷ.

ಇದನ್ನೂ ಓದಿ: ತಮಿಳುನಾಡು ಚುನಾವಣೆ ಹೊಸಿಲಲ್ಲೇ ‘ತಲೈವಿ’ ಟ್ರೇಲರ್ ಬಿಡುಗಡೆ: ಮತದಾರರಿಗೆ ನೆನಪಾಗ್ತಾರಾ ಜಯಲಲಿತಾ?

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ