AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಪರ್ಸೆಂಟ್ ಕೂಡ ಕಲೆಕ್ಷನ್ ಆಗಿಲ್ಲ: ಬಾಕ್ಸಾಫೀಸ್​ನಲ್ಲಿ ಮಕಾಡೆ ಮಲಗಿದ ಕಂಗನಾ ಚಿತ್ರ

Dhaakad Boxoffice Collection: ಬ್ಯಾಕ್ ಟು ಬ್ಯಾಕ್ ನಾಲ್ಕು ಅಟ್ಟರ್ ಫ್ಲಾಪ್ ಚಿತ್ರಗಳನ್ನು ನೀಡಿರುವ ಕಂಗನಾ ರಣಾವತ್ ಮತ್ತೆ ತನು ವೆಡ್ಸ್ ಮನು-3 ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಬಾಲಿವುಡ್ ಅಂಗಳದಲ್ಲಿದೆ.

10 ಪರ್ಸೆಂಟ್ ಕೂಡ ಕಲೆಕ್ಷನ್ ಆಗಿಲ್ಲ: ಬಾಕ್ಸಾಫೀಸ್​ನಲ್ಲಿ ಮಕಾಡೆ ಮಲಗಿದ ಕಂಗನಾ ಚಿತ್ರ
Kanagana Ranaut
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 16, 2022 | 5:15 PM

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ (Kangana Ranaut) ಅಭಿನಯದ ಧಾಕಡ್ (Dhaakad) ಚಿತ್ರವು ಬಾಕ್ಸಾಫೀಸ್​ನಲ್ಲಿ ಮಕಾಡೆ ಮಲಗಿದೆ. ಇದರೊಂದಿಗೆ ಬಿಟೌನ್​ನಲ್ಲಿ ಆ್ಯಕ್ಷನ್ ಕ್ವೀನ್ ಎನಿಸಿಕೊಳ್ಳುವ ಕಂಗನಾ ಅವರ ಕನಸು ಕೂಡ ಕಮರಿದೆ. ಏಕೆಂದರೆ ಧಾಕಡ್ ಚಿತ್ರವು ಇದುವರೆಗೆ ಕಲೆಹಾಕಿದ್ದು ಕೇವಲ 2.58 ಕೋಟಿ ಮಾತ್ರ. ಅಂದರೆ ಈ ಚಿತ್ರಕ್ಕೆ ಹಾಕಿದ ಒಟ್ಟು ಬಂಡವಾಳ ಶೇ.10 ರಷ್ಟು ಕೂಡ ಗಳಿಕೆಯಾಗಿಲ್ಲ ಎಂಬ ಸುದ್ದಿಯೊಂದು ಬಿಟೌನ್​ನಿಂದ ಹೊರಬಿದ್ದಿದೆ. 85 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದ ಆ್ಯಕ್ಷನ್ ಥ್ರಿಲ್ಲರ್ ಧಾಕಡ್ ಸಿನಿಮಾವು ಅಟ್ಟರ್ ಫ್ಲಾಪ್ ಆಗಿರುವ ಕಾರಣ ನಿರ್ಮಾಪಕರು ಬರೋಬ್ಬರಿ 78 ಕೋಟಿ ನಷ್ಟ ಎದುರಿಸುತ್ತಿದ್ದಾರೆ ಎಂದು ಬಾಲಿವುಡ್ ಹಂಗಾಮಾ ವರದಿ ಮಾಡಿದೆ.

ಧಾಕಡ್ ಚಿತ್ರವು ಬಿಡುಗಡೆಯಾದ ಮೊದಲ ವಾರದಲ್ಲೇ ಪ್ರೇಕ್ಷಕರನ್ನು ಸೆಳೆಯುವಲ್ಲಿ ವಿಫಲವಾಗಿತ್ತು. ಇದರೊಂದಿಗೆ ಸಿನಿಮಾ ನೆಲಕಚ್ಚುವುದು ಕೂಡ ಖಚಿತವಾಗಿತ್ತು. ಆದರೆ ಸಿನಿಮಾ ರಿಲೀಸ್​ಗೂ ಮುನ್ನ ನಿರ್ಮಾಪಕರು ಸ್ಯಾಟ್​ಲೈಟ್ ಹಾಗೂ ಡಿಜಿಟಲ್ ರೈಟ್ಸ್​ ಅನ್ನು ಮಾರಾಟ ಮಾಡಿರಲಿಲ್ಲ. ಆದರೀಗ ಚಿತ್ರದ ಬಾಕ್ಸಾಫೀಸ್ ಕಲೆಕ್ಷನ್ ಬಹಿರಂಗವಾಗುತ್ತಿದ್ದಂತೆ ನಿರ್ಮಾಪಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಏಕೆಂದರೆ ಒಂದು ತಿಂಗಳಲ್ಲಿ ಧಾಕಡ್ ಸಿನಿಮಾ ಕಲೆಹಾಕಿದ್ದು ಕೇವಲ 2.58 ಕೋಟಿ ಮಾತ್ರ. ಅಂದರೆ ಬಂಡವಾಳದ 10 ರಷ್ಟು ಕೂಡ ನಿರ್ಮಾಪಕರಿಗೆ ಹಿಂತಿರುಗಿಲ್ಲ. ಹೀಗಾಗಿಯೇ ಚಿತ್ರದ ಡಿಜಿಟಲ್ ಹಾಗೂ ಸ್ಯಾಟ್​ಲೈಟ್ ಹಕ್ಕುಗಳನ್ನು ಖರೀದಿಸಲು ಯಾರು ಕೂಡ ಮುಂದಾಗುತ್ತಿಲ್ಲ. ಅಲ್ಲದೆ ಚಿತ್ರವು ಬಾಕ್ಸಾಫೀಸ್​ನಲ್ಲಿ ಹೀನಾಯ ಸೋಲನುಭವಿಸಿರುವ ಕಾರಣ ಧಾಕಡ್​ ಚಿತ್ರದ ಡಿಜಿಟಲ್ ಹಾಗೂ ಸ್ಯಾಟ್​ಲೈಟ್ ಹಕ್ಕುಗಳು ಕೇವಲ 5 ಕೋಟಿಗಿಂತ ಕಡಿಮೆ ಮೊತ್ತಕ್ಕೆ ಮಾರಾಟವಾಗಲಿದೆ ಎಂಬ ಟಾಕುಗಳು ಶುರುವಾಗಿದೆ.

ಇದನ್ನೂ ಓದಿ
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!
Image
Rakshit Shetty: ನಂಗೆ ಲವ್ ಫೈಲ್ಯುರ್ ಆಗಿಲ್ಲ: ರವಿಚಂದ್ರನ್ ಮುಂದೆ ಮನಬಿಚ್ಚಿದ ರಕ್ಷಿತ್ ಶೆಟ್ಟಿ

ಅಂದರೆ ಬರೋಬ್ಬರಿ 85 ಕೋಟಿ ಬಂಡವಾಳ ಹೂಡಿ ಕಂಗನಾ ರಣಾವತ್​ ಅವರನ್ನು ಆ್ಯಕ್ಷನ್ ಕ್ವೀನ್ ಮಾಡಲೋದ ನಿರ್ಮಾಪಕರಾದ ದೀಪಕ್ ಮುಕುತ್ , ಸೊಹೈಲ್ ಮಕ್ಲೈ ಇದೀಗ ಒಂದೇ ಚಿತ್ರದಿಂದ 78 ಕೋಟಿ ನಷ್ಟ ಅನುಭವಿಸಿದ್ದಾರೆ. ಮತ್ತೊಂದೆಡೆ ಧಾಕಡ್ ಜೊತೆ ತೆರೆಕಂಡ ಕಾರ್ತಿಕ್ ಆರ್ಯನ್ ನಟನೆಯ ಭೂಲ್ ಭುಲಯ್ಯಾ-2 ಚಿತ್ರವು ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಈಗಾಗಲೇ 170 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.

ಆದರೆ ಕಂಗನಾ ರಣಾವತ್ ಅಭಿನಯದ ಕಳೆದ ನಾಲ್ಕು ಚಿತ್ರಗಳ ಒಟ್ಟಾರೆ ಕಲೆಕ್ಷನ್ ಅನ್ನು ಸೇರಿಸಿದರೂ 100 ಕೋಟಿ ದಾಟಲ್ಲ ಎಂಬುದು ವಿಶೇಷ. ಅಂದರೆ ಬಾಲಿವುಡ್​ ಕ್ವೀನ್ ಅಭಿನಯದ ಕೊನೆಯ ನಾಲ್ಕು ಚಿತ್ರಗಳೂ ಕೂಡ ಮಕಾಡೆ ಮಲಗಿದೆ. ಜಡ್ಜ್​ಮೆಂಟಲ್​ ಹೈ ಕ್ಯಾ ಚಿತ್ರವು  33.11 ಕೋಟಿ ಕಲೆಹಾಕಿದರೆ, ಪಂಗ ಚಿತ್ರವು 28.92 ಕೋಟಿಗಳಿಸಷ್ಟೇ ಶಕ್ತವಾಗಿತ್ತು. ಇನ್ನು ತಲೈವಿಯ ಗಳಿಕೆ ಕೇವಲ 1.46 ಕೋಟಿಗೆ ನಿಂತಿತ್ತು. ಇದೀಗ ಧಾಕಡ್ ಕೂಡ 2.58 ಕೋಟಿಯೊಂದಿಗೆ ಮಕಾಡೆ ಮಲಗಿದೆ.

ಬ್ಯಾಕ್ ಟು ಬ್ಯಾಕ್ ನಾಲ್ಕು ಅಟ್ಟರ್ ಫ್ಲಾಪ್ ಚಿತ್ರಗಳನ್ನು ನೀಡಿರುವ ಕಂಗನಾ ರಣಾವತ್ ಮತ್ತೆ ತನು ವೆಡ್ಸ್ ಮನು-3 ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಬಾಲಿವುಡ್ ಅಂಗಳದಲ್ಲಿದೆ. ಅಂದಹಾಗೆ ಕಂಗನಾ ರಣಾವತ್ ಒಂದು ಸೂಪರ್ ಹಿಟ್ ಸಿನಿಮಾ ನೀಡಿ 7 ವರ್ಷಗಳೇ ಕಳೆದಿವೆ. ಅಂದರೆ 2015 ರಲ್ಲಿ ತೆರೆಕಂಡಿದ್ದ ಕಂಗನಾ ಅಭಿನಯದ ತನು ವೆಡ್ಸ್ ಮನು ರಿಟರ್ನ್ಸ್ ಸೂಪರ್ ಡೂಪರ್ ಹಿಟ್ ಆಗಿತ್ತು. ಆ ಸಿನಿಮಾ ಬಾಕ್ಸಾಫೀಸ್​ನಲ್ಲಿ 150 ಕೋಟಿಗೂ ಅಧಿಕ ಮೊತ್ತ ಕಲೆಕ್ಷನ್ ಮಾಡಿತ್ತು. ಇದಾದ ಬಳಿಕ ಕಂಗನಾ ರಣಾವತ್ ಅಭಿನಯದ ಯಾವುದೇ ಚಿತ್ರ 100 ಕೋಟಿಯನ್ನು ದಾಟಿಲ್ಲ ಎಂಬುದೇ ಅಚ್ಚರಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್