Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಮರ್ಜೆನ್ಸಿ’ ಸಿನಿಮಾ ಹೊಗಳಿದವರಿಗೂ ಕ್ಲಾಸ್ ತೆಗೆದುಕೊಂಡ ಕಂಗನಾ; ಯಾಕ್ ಹಿಂಗೆ?

ಕಂಗನಾ ರಣಾವತ್ ಅವರ ನಿರ್ದೇಶನದ "ಎಮರ್ಜೆನ್ಸಿ" ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣದಿದ್ದರೂ, ಒಟಿಟಿ ಬಿಡುಗಡೆಯ ನಂತರ ಮೆಚ್ಚುಗೆ ಗಳಿಸಿದೆ. ಕಂಗನಾ ಅವರು ಚಿತ್ರದ ಬಗ್ಗೆ ಪೂರ್ವಾಗ್ರಹವಿಲ್ಲದೆ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ. ಸಂಜಯ್ ಗುಪ್ತಾ ಅವರ ಮೆಚ್ಚುಗೆಯನ್ನು ಉಲ್ಲೇಖಿಸಿ, ಚಲನಚಿತ್ರ ಉದ್ಯಮದಲ್ಲಿನ ಪಕ್ಷಪಾತದ ಬಗ್ಗೆ ಅವರು ಮಾತನಾಡಿದ್ದಾರೆ.

‘ಎಮರ್ಜೆನ್ಸಿ’ ಸಿನಿಮಾ ಹೊಗಳಿದವರಿಗೂ ಕ್ಲಾಸ್ ತೆಗೆದುಕೊಂಡ ಕಂಗನಾ; ಯಾಕ್ ಹಿಂಗೆ?
ಕಂಗನಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 19, 2025 | 2:31 PM

ಕಂಗನಾ ನಟನೆಯ ‘ಎಮರ್ಜೆನ್ಸಿ’ ಸಿನಿಮಾ (Emergency Movie) ಬಾಕ್ಸ್ ಆಫೀಸ್​​ನಲ್ಲಿ ಸೋತಿದೆ. ಈ ಚಿತ್ರದ ಬಗ್ಗೆ ಒಳ್ಳೆಯ ಟಾಕ್ ಬರಲಿಲ್ಲ. ಈಗ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಸಿನಿಮಾನ ಹೊಗಳಿ, ಕಂಗನಾ ನಿರ್ದೇಶನವನ್ನು ಮೆಚ್ಚಿ ಟ್ವೀಟ್ ಮಾಡುತ್ತಿದ್ದಾರೆ. ಈ ಬಗ್ಗೆ ಕಂಗನಾ ಮಾತನಾಡಿದ್ದಾರೆ. ಪೂರ್ವ ನಿರ್ಧಾರಿತವಾಗಿ ತಮ್ಮ ಸಿನಿಮಾ ನೋಡದೇ ಇರಬೇಡಿ ಎಂದು ಅವರು ಕೋರಿದ್ದಾರೆ.

ಕಂಗನಾ ಮೊದಲಿನಿಂದಲೂ ಬಿಜೆಪಿ ಹಾಗೂ ಆ ಪಕ್ಷದ ಆಲೋಚನೆಗಳನ್ನು ಬೆಂಬಲಿಸುತ್ತಾ ಬಂದವರು. ಅವರು ‘ಎಮರ್ಜೆನ್ಸಿ’ ಸಿನಿಮಾ ಮಾಡುತ್ತಾರೆ ಎಂದಾಗ ಅನೇಕರು ಇದೊಂದು ಪ್ರೊಪೊಗಾಂಡ ಸಿನಿಮಾ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಇಲ್ಲ ಎಂದು ಅನೇಕರಿಗೆ ಆ ಬಳಿಕ ಅನಿಸಿದೆ. ಈ ರೀತಿ ಪೂರ್ವ ನಿರ್ಧಾರಿತ ಆಗಬೇಡಿ ಎಂದು ಕಂಗನಾ ಕೋರಿಕೊಂಡಿದ್ದಾರೆ.

ಇತ್ತೀಚೆಗೆ ನಿರ್ದೇಶಕ ಸಂಜಯ್ ಗುಪ್ತಾ ಅವರು ‘ಎಮರ್ಜೆನ್ಸಿ’ ಚಿತ್ರವನ್ನು ಹೊಗಳಿದ್ದರು. ಈ ಬಗ್ಗೆ ಮಾತನಾಡಿರೋ ಕಂಗನಾ, ‘ಸಂಜಯ್ ಗುಪ್ತಾ ಅವರು ತಮಗೆ ಪೂರ್ವಾಗ್ರಹ ಪೀಡಿತ ಭಾವನೆಗಳು ಇವೆ ಎಂದು ಒಪ್ಪಿಕೊಂಡಿದ್ದಾರೆ. ನೀವು ವಿಫಲರಾಗುತ್ತಿರುವಾಗ ನನ್ನನ್ನು ಅರ್ಥಮಾಡಿಕೊಳ್ಳಲು ಏಕೆ ಪ್ರಯತ್ನಿಸುತ್ತಿದ್ದೀರಿ? ಅಚ್ಚರಿಯ ಸಂಗತಿ ಎಂದರೆ ಅವರು ತಾವು ವಿಫಲವಾಗಿದ್ದಾಗಿಯೂ ಅವರು ಒಪ್ಪಿಕೊಂಡಿದ್ದಾರೆ’ ಎಂದಿದ್ದಾರೆ ಕಂಗನಾ.

ಇದನ್ನೂ ಓದಿ
Image
ತನ್ನದೇ ಹೆಸರನ್ನು ತಪ್ಪಾಗಿ ಕರೆದುಕೊಂಡು ರಣಬೀರ್; ಆಮಿರ್ ರಿಯಾಕ್ಷನ್ ನೋಡಿ
Image
ಐಪಿಎಲ್ ಉದ್ಘಾಟನೆಗೆ ಹಾಜರಿ ಹಾಕಲಿದೆ ಇಡೀ ಬಾಲಿವುಡ್; ಇಲ್ಲಿದೆ ಲಿಸ್ಟ್
Image
ರಾಮ್ ಚರಣ್ ಮುಂದಿನ ಚಿತ್ರದಲ್ಲಿ ನಟಿಸಲಿದ್ದಾರೆ ಎಂಎಸ್ ಧೋನಿ?
Image
ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ

‘ನನ್ನ ಬಗ್ಗೆ ನಕಾರಾತ್ಮಕ ಚಿಂತನೆಗಳನ್ನು ಮಾತ್ರ ಇಟ್ಟುಕೊಂಡು, ನಕಾರಾತ್ಮಕವಾಗಿ ಮಾತ್ರ ಯೋಚನೆ ಮಾಡುವಾಗ ಮತ್ತು ನಾನು ಸೋಲು ಕಾಣಲಿ ಎಂದು ಬಯಸುವಾಗ ನಾನು ಏನು ಮಾಡುತ್ತಿದ್ದೇನೆ ಎಂದು ನಿಮಗೆ ಹೇಗೆ ಗೊತ್ತಾಗುತ್ತದೆ? ನನ್ನನ್ನು ಅರ್ಥಮಾಡಿಕೊಳ್ಳಲು ನಿಮಗೆ ಬುದ್ಧಿಶಕ್ತಿ ಇದೆಯೇ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

‘ನೀವು ಒಬ್ಬ ವ್ಯಕ್ತಿಯ ಬಗ್ಗೆ ವಿಶಾಲ ಹೃದಯಿ ಆಗಿ ತಿಳಿದುಕೊಳ್ಳಲು ಬಯಸುತ್ತೀರಿ ಎಂದರೆ ಆ ವಸ್ತು ಅಥವಾ ವಿಷಯದ ಬಗ್ಗೆ ನಿಮಗೆ ವಿಸ್ತೃತ ದೃಷ್ಟಿಕೋನವಿರಬೇಕು. ನೀವು ಯಾವ ರೀತಿಯ ಸಿನಿಮಾ ಮಾಡುತ್ತೀರಿ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಂಗನಾ ರಣಾವತ್, ಜಾವೇದ್ ಅಖ್ತರ್ ನಡುವಿನ ಸುದೀರ್ಘ ಕೋರ್ಟ್ ಕೇಸ್ ಅಂತ್ಯ

‘ಸಿನಿಮಾ ಇಂಡಸ್ಟ್ರಿ ದ್ವೇಷ ಮತ್ತು ಪೂರ್ವಾಗ್ರಹಗಳಿಂದ ಹೊರಬಂದು ಉತ್ತಮ ಕೆಲಸವನ್ನು ಒಪ್ಪಿಕೊಳ್ಳಬೇಕು. ಸಂಜಯ್ ಅವರೇ ಆ ತಡೆಗೋಡೆಯನ್ನು ಮುರಿದಿದ್ದಕ್ಕಾಗಿ ಧನ್ಯವಾದ. ಎಲ್ಲಾ ಸಿನಿಮಾ ಬುದ್ಧಿಜೀವಿಗಳಿಗೆ ನನ್ನ ಸಂದೇಶ. ನನ್ನ ಬಗ್ಗೆ ಯಾವುದೇ ಕಲ್ಪನೆಗಳನ್ನು ಎಂದಿಗೂ ಇಟ್ಟುಕೊಳ್ಳಬೇಡಿ. ನನ್ನನ್ನು ಕಂಡುಹಿಡಿಯಲು ಪ್ರಯತ್ನಿಸಬೇಡಿ, ನಾನು ನಿಮ್ಮ ವ್ಯಾಪ್ತಿಯಿಂದ ಹೊರಗಿದ್ದೇನೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ