AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಂಗುವ’ ಚಿತ್ರಕ್ಕೆ ಇದೆಂಥಾ ಸ್ಥಿತಿ; ವಾರದ ದಿನಗಳಲ್ಲಿ ಮತ್ತಷ್ಟು ಹೀನಾಯವಾಯಿತು ಗಳಿಕೆ

‘ಕಂಗುವ’ ಸಿನಿಮಾದಲ್ಲಿ ಸೂರ್ಯ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಜನರಿಗೆ ಇಷ್ಟ ಆಗಿದೆ. ಆದರೆ, ಸಿನಿಮಾಗೆ ನೆಗೆಟಿವ್ ಟಾಕ್ ಇದೆ. ಈ ಚಿತ್ರ ಮೊದಲ ದಿನ ಮಾತ್ರ ಅಬ್ಬರದ ಗಳಿಕೆ ಮಾಡಿತ್ತು. ಆ ಬಳಿಕ ಸಿನಿಮಾದ ಕಲೆಕ್ಷನ್ ಹೀನಾಯವಾಗುತ್ತಾ ಹೋಗಿದೆ.

‘ಕಂಗುವ’ ಚಿತ್ರಕ್ಕೆ ಇದೆಂಥಾ ಸ್ಥಿತಿ; ವಾರದ ದಿನಗಳಲ್ಲಿ ಮತ್ತಷ್ಟು ಹೀನಾಯವಾಯಿತು ಗಳಿಕೆ
ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Nov 19, 2024 | 10:40 AM

Share

‘ಕಂಗುವ’ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರೀಕ್ಷೆಯನ್ನು ಸಿನಿಮಾ ಹುಸಿ ಮಾಡಿದೆ. ಈ ಚಿತ್ರದ ಗಳಿಕೆ ದಿನ ಕಳೆದಂತೆ ತಗುತ್ತಲೇ ಇದೆ. ಸೋಮವಾರ (ನವೆಂಬರ್ 18) ಈ ಚಿತ್ರ ಕಳಪೆ ಕಲೆಕ್ಷನ್ ಮಾಡಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮತ್ತಷ್ಟು ಸಮಸ್ಯೆ ಆಗಬಹುದು ಎಂದು ಹೇಳಲಾಗುತ್ತಿದೆ. ಹಾಗಾದರೆ ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ಕಂಗುವ’ ಸಿನಿಮಾದಲ್ಲಿ ಸೂರ್ಯ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಜನರಿಗೆ ಇಷ್ಟ ಆಗಿದೆ. ಆದರೆ, ಸಿನಿಮಾಗೆ ನೆಗೆಟಿವ್ ಟಾಕ್ ಇದೆ. ಈ ಚಿತ್ರ ಮೊದಲ ದಿನ ಮಾತ್ರ ಅಬ್ಬರದ ಗಳಿಕೆ ಮಾಡಿತ್ತು. ಆ ಬಳಿಕ ಸಿನಿಮಾದ ಕಲೆಕ್ಷನ್ ಹೀನಾಯವಾಗುತ್ತಾ ಹೋಗಿದೆ. ಈಗ ಸೋಮವಾರವೂ ಚಿತ್ರದ ಗಳಿಕೆ ತಗ್ಗಿದೆ.

ಸಾಮಾನ್ಯವಾಗಿ ಸಿನಿಮಾಗಳು ವೀಕೆಂಡ್​ನಲ್ಲಿ ದೊಡ್ಡ ಮಟ್ಟದ ಕಲೆಕ್ಷನ್ ಮಾಡುತ್ತವೆ. ವಾರದ ದಿನಗಳಲ್ಲಿ ಸಿನಿಮಾದ ಕಲೆಕ್ಷನ್ ತಗ್ಗುತ್ತದೆ. ಯಾವ ಚಿತ್ರ ವೀಕೆಂಡ್​ನಲ್ಲಿ ಉತ್ತಮ ಕಲೆಕ್ಷನ್ ಮಾಡಿ, ವಾರದ ದಿನವೂ ಒಳ್ಳೆಯ ಪರ್ಫಾರ್ಮೆನ್ಸ್ ಕೊಟ್ಟರೆ ಸಿನಿಮಾ ಗೆದ್ದಂತೆ. ‘ಕಂಗುವ’ ಭಾನುವಾರ ಎರಡಂಕಿ ಗಳಿಕೆ ಮಾಡಿ, ವಾರದ ದಿನಗಳಲ್ಲಿ ಕೇವಲ ಒಂದಕಿ ಕಲೆಕ್ಷನ್ ಮಾಡಿದೆ.

‘ಕಂಗುವ’ ಸಿನಿಮಾ ಮೊದಲ ದಿನ 24 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆ ನಂತರ ಸಿನಿಮಾದ ಗಳಿಕೆ ತಗ್ಗುತ್ತಾ ಬಂತು. ಈಗ ಐದನೇ ದಿನವಾದ ಸೋಮವಾರ (ನವೆಂಬರ್ 19) ಚಿತ್ರ ಕೇವಲ 3.15 ಕೋಟಿ ರೂಪಾಯಿ ಗಳಿಸಿದೆ. ಇದು ಚಿತ್ರಕ್ಕೆ ತೀವ್ರ ಹಿನ್ನಡೆ ತಂದಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ. ಚಿತ್ರದ ಒಟ್ಟಾರೆ ಗಳಿಕೆ 56 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ‘ಸಿನಿಮಾ ಸೌಂಡ್ ಕಡಿಮೆ ಮಾಡಿ’; ಥಿಯೇಟರ್ ಮಾಲೀಕರ ಬಳಿ ‘ಕಂಗುವ’ ನಿರ್ಮಾಪಕನ ಮನವಿ

ಸೂರ್ಯ ನಟನೆಯ ‘ಕಂಗುವ’ ಸಿನಿಮಾಗೆ ಶಿವ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬಾಬಿ ಡಿಯೋಲ್, ದಿಶಾ ಪಟಾಣಿ ಮೊದಲಾದವರು ನಟಿಸಿದ್ದಾರೆ. ಜ್ಞಾನವೇಲ್ ರಾಜಾ ಇದನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ