AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಂಗುವ’ ಚಿತ್ರಕ್ಕೆ ಇದೆಂಥಾ ಸ್ಥಿತಿ; ವಾರದ ದಿನಗಳಲ್ಲಿ ಮತ್ತಷ್ಟು ಹೀನಾಯವಾಯಿತು ಗಳಿಕೆ

‘ಕಂಗುವ’ ಸಿನಿಮಾದಲ್ಲಿ ಸೂರ್ಯ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಜನರಿಗೆ ಇಷ್ಟ ಆಗಿದೆ. ಆದರೆ, ಸಿನಿಮಾಗೆ ನೆಗೆಟಿವ್ ಟಾಕ್ ಇದೆ. ಈ ಚಿತ್ರ ಮೊದಲ ದಿನ ಮಾತ್ರ ಅಬ್ಬರದ ಗಳಿಕೆ ಮಾಡಿತ್ತು. ಆ ಬಳಿಕ ಸಿನಿಮಾದ ಕಲೆಕ್ಷನ್ ಹೀನಾಯವಾಗುತ್ತಾ ಹೋಗಿದೆ.

‘ಕಂಗುವ’ ಚಿತ್ರಕ್ಕೆ ಇದೆಂಥಾ ಸ್ಥಿತಿ; ವಾರದ ದಿನಗಳಲ್ಲಿ ಮತ್ತಷ್ಟು ಹೀನಾಯವಾಯಿತು ಗಳಿಕೆ
ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Nov 19, 2024 | 10:40 AM

Share

‘ಕಂಗುವ’ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರೀಕ್ಷೆಯನ್ನು ಸಿನಿಮಾ ಹುಸಿ ಮಾಡಿದೆ. ಈ ಚಿತ್ರದ ಗಳಿಕೆ ದಿನ ಕಳೆದಂತೆ ತಗುತ್ತಲೇ ಇದೆ. ಸೋಮವಾರ (ನವೆಂಬರ್ 18) ಈ ಚಿತ್ರ ಕಳಪೆ ಕಲೆಕ್ಷನ್ ಮಾಡಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮತ್ತಷ್ಟು ಸಮಸ್ಯೆ ಆಗಬಹುದು ಎಂದು ಹೇಳಲಾಗುತ್ತಿದೆ. ಹಾಗಾದರೆ ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ಕಂಗುವ’ ಸಿನಿಮಾದಲ್ಲಿ ಸೂರ್ಯ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಜನರಿಗೆ ಇಷ್ಟ ಆಗಿದೆ. ಆದರೆ, ಸಿನಿಮಾಗೆ ನೆಗೆಟಿವ್ ಟಾಕ್ ಇದೆ. ಈ ಚಿತ್ರ ಮೊದಲ ದಿನ ಮಾತ್ರ ಅಬ್ಬರದ ಗಳಿಕೆ ಮಾಡಿತ್ತು. ಆ ಬಳಿಕ ಸಿನಿಮಾದ ಕಲೆಕ್ಷನ್ ಹೀನಾಯವಾಗುತ್ತಾ ಹೋಗಿದೆ. ಈಗ ಸೋಮವಾರವೂ ಚಿತ್ರದ ಗಳಿಕೆ ತಗ್ಗಿದೆ.

ಸಾಮಾನ್ಯವಾಗಿ ಸಿನಿಮಾಗಳು ವೀಕೆಂಡ್​ನಲ್ಲಿ ದೊಡ್ಡ ಮಟ್ಟದ ಕಲೆಕ್ಷನ್ ಮಾಡುತ್ತವೆ. ವಾರದ ದಿನಗಳಲ್ಲಿ ಸಿನಿಮಾದ ಕಲೆಕ್ಷನ್ ತಗ್ಗುತ್ತದೆ. ಯಾವ ಚಿತ್ರ ವೀಕೆಂಡ್​ನಲ್ಲಿ ಉತ್ತಮ ಕಲೆಕ್ಷನ್ ಮಾಡಿ, ವಾರದ ದಿನವೂ ಒಳ್ಳೆಯ ಪರ್ಫಾರ್ಮೆನ್ಸ್ ಕೊಟ್ಟರೆ ಸಿನಿಮಾ ಗೆದ್ದಂತೆ. ‘ಕಂಗುವ’ ಭಾನುವಾರ ಎರಡಂಕಿ ಗಳಿಕೆ ಮಾಡಿ, ವಾರದ ದಿನಗಳಲ್ಲಿ ಕೇವಲ ಒಂದಕಿ ಕಲೆಕ್ಷನ್ ಮಾಡಿದೆ.

‘ಕಂಗುವ’ ಸಿನಿಮಾ ಮೊದಲ ದಿನ 24 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆ ನಂತರ ಸಿನಿಮಾದ ಗಳಿಕೆ ತಗ್ಗುತ್ತಾ ಬಂತು. ಈಗ ಐದನೇ ದಿನವಾದ ಸೋಮವಾರ (ನವೆಂಬರ್ 19) ಚಿತ್ರ ಕೇವಲ 3.15 ಕೋಟಿ ರೂಪಾಯಿ ಗಳಿಸಿದೆ. ಇದು ಚಿತ್ರಕ್ಕೆ ತೀವ್ರ ಹಿನ್ನಡೆ ತಂದಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ. ಚಿತ್ರದ ಒಟ್ಟಾರೆ ಗಳಿಕೆ 56 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ‘ಸಿನಿಮಾ ಸೌಂಡ್ ಕಡಿಮೆ ಮಾಡಿ’; ಥಿಯೇಟರ್ ಮಾಲೀಕರ ಬಳಿ ‘ಕಂಗುವ’ ನಿರ್ಮಾಪಕನ ಮನವಿ

ಸೂರ್ಯ ನಟನೆಯ ‘ಕಂಗುವ’ ಸಿನಿಮಾಗೆ ಶಿವ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬಾಬಿ ಡಿಯೋಲ್, ದಿಶಾ ಪಟಾಣಿ ಮೊದಲಾದವರು ನಟಿಸಿದ್ದಾರೆ. ಜ್ಞಾನವೇಲ್ ರಾಜಾ ಇದನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್