ಖ್ಯಾತನಟ ಸೂರ್ಯಗೆ ಸೆಟ್​ನಲ್ಲಿ ಗಾಯ; ಈಗ ಹೇಗಿದೆ ಆರೋಗ್ಯ ಸ್ಥಿತಿ?

ಶೂಟಿಂಗ್ ವೇಳೆ ಎಷ್ಟೇ ಎಚ್ಚರಿಕೆ ತೆಗೆದುಕೊಂಡರೂ ಅಪಘಾತ ಸಂಭವಿಸುತ್ತದೆ. ಸೂರ್ಯ ಸಿನಿಮಾದ ತಂಡದವರೂ ಸಾಕಷ್ಟು ಎಚ್ಚರಿಕೆ ವಹಿಸಿದ್ದರು. ಆದಾಗ್ಯೂ ಅವಘಡ ಸಂಭವಿಸಿದೆ. ಈಗ ಸೂರ್ಯ ಚೇತರಿಕೆಕಂಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಖ್ಯಾತನಟ ಸೂರ್ಯಗೆ ಸೆಟ್​ನಲ್ಲಿ ಗಾಯ; ಈಗ ಹೇಗಿದೆ ಆರೋಗ್ಯ ಸ್ಥಿತಿ?
ಸೂರ್ಯ
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 10, 2024 | 12:15 PM

ಕಾಲಿವುಡ್​ನ ಖ್ಯಾತ ನಟ ಸೂರ್ಯ ಅವರ ತಲೆಗೆ ಪೆಟ್ಟಾದ ಬಗ್ಗೆ ವರದಿ ಆಗಿದೆ. ಅವರು ತ್ತೀಚೆಗೆ ‘ಸೂರ್ಯ 44’ ಸಿನಿಮಾದ ಶೂಟ್​ನಲ್ಲಿ ಬ್ಯುಸಿ ಇದ್ದರು. ಪೆಟ್ಟಾಗಿರೋ ಕಾರಣದಿಂದ ಸಿನಿಮಾದ ಶೂಟ್​ನ ಅರ್ಧಕ್ಕೆ ನಿಲ್ಲಿಸಲಾಗಿದೆ ಎಂದು ವರದಿ ಆಗಿದೆ. ಈ ತಿಂಗಳ ಆರಂಭದಲ್ಲಿ ಊಟಿಯಲ್ಲಿ ‘ಸೂರ್ಯ 44’ ಚಿತ್ರದ ಕೆಲಸ ಆರಂಭ ಆಗಿತ್ತು. ಈಗ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಈ ಚಿತ್ರವನ್ನು ಕಾರ್ತಿಕ್ ಸುಬ್ಬರಾಜು ಅವರು ನಿರ್ದೇಶನ ಮಾಡುತ್ತಿದ್ದಾರೆ.

ಶೂಟಿಂಗ್ ವೇಳೆ ಎಷ್ಟೇ ಎಚ್ಚರಿಕೆ ತೆಗೆದುಕೊಂಡರೂ ಅಪಘಾತ ಸಂಭವಿಸುತ್ತದೆ. ಸೂರ್ಯ ಸಿನಿಮಾದ ತಂಡದವರೂ ಸಾಕಷ್ಟು ಎಚ್ಚರಿಕೆ ವಹಿಸಿದ್ದರು. ಆದಾಗ್ಯೂ ಅವಘಡ ಸಂಭವಿಸಿದೆ. ಈಗ ಸೂರ್ಯ ಚೇತರಿಕೆಕಂಡಿದ್ದಾರೆ. ಈ ಬಗ್ಗೆ ನಿರ್ಮಾಪಕ ರಾಜಶೇಖರ್ ಪಾಂಡಿಯನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಪ್ರೀತಿಯ ಸೂರ್ಯ ಅಭಿಮಾನಿಗಳೇ, ಇದೊಂದು ಸಣ್ಣ ಗಾಯ. ಭಯ ಬೇಡ. ನಿಮ್ಮ ಪ್ರಾರ್ಥನೆ ಹಾಗೂ ಪ್ರೀತಿಯಿಂದ ಸೂರ್ಯ ಅಣ್ಣ ಅವರು ಆರಾಮಾಗಿ ಇದ್ದಾರೆ’ ಎಂದಿದ್ದಾರೆ ಅವರು.

ಈ ಘಟನೆ ಬಗ್ಗೆ ಕೇಳಿ ಸೂರ್ಯ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ವ್ಯಕ್ತವಾಗಿತ್ತು. ಆದರೆ, ಈಗ ನಿರ್ಮಾಪಕರು ಈ ಬಗ್ಗೆ ಮಾಹಿತಿ ಕೊಟ್ಟ ಬಳಿಕ ಎಲ್ಲರೂ ನಿಟ್ಟುಸಿರು ಬಿಡುವಂತೆ ಆಗಿದೆ. ಅವರು ಬೇಗ ಚೇತರಿಕೆ ಕಂಡು ಮತ್ತೆ ಶೂಟಿಂಗ್ ಸೆಟ್ ಸೇರಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ‘ಕಂಗುವ’ ರಿಲೀಸ್ ದಿನಾಂಕ ಘೋಷಣೆ; ‘ಮಾರ್ಟಿನ್’ ಸಿನಿಮಾ ಜೊತೆ ಕ್ಲ್ಯಾಶ್

‘ಕಂಗುವ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಸೂರ್ಯ ಅವರೇ ಹೀರೋ. ಇದು ಬಿಗ್ ಬಜೆಟ್ ಸಿನಿಮಾ. ಈ ಚಿತ್ರವನ್ನು ಸಿರುಥಾಯಿ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಅಕ್ಟೋಬರ್ 10ರಂದು ರಿಲೀಸ್ ಆಗಲಿದೆ. ದಿಶಾ ಪಟಾಣಿ ಅವರು ಈ ಚಿತ್ರಕ್ಕೆ ನಾಯಕಿ. ಬಾಬಿ ಡಿಯೋಲ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್