AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತನಟ ಸೂರ್ಯಗೆ ಸೆಟ್​ನಲ್ಲಿ ಗಾಯ; ಈಗ ಹೇಗಿದೆ ಆರೋಗ್ಯ ಸ್ಥಿತಿ?

ಶೂಟಿಂಗ್ ವೇಳೆ ಎಷ್ಟೇ ಎಚ್ಚರಿಕೆ ತೆಗೆದುಕೊಂಡರೂ ಅಪಘಾತ ಸಂಭವಿಸುತ್ತದೆ. ಸೂರ್ಯ ಸಿನಿಮಾದ ತಂಡದವರೂ ಸಾಕಷ್ಟು ಎಚ್ಚರಿಕೆ ವಹಿಸಿದ್ದರು. ಆದಾಗ್ಯೂ ಅವಘಡ ಸಂಭವಿಸಿದೆ. ಈಗ ಸೂರ್ಯ ಚೇತರಿಕೆಕಂಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಖ್ಯಾತನಟ ಸೂರ್ಯಗೆ ಸೆಟ್​ನಲ್ಲಿ ಗಾಯ; ಈಗ ಹೇಗಿದೆ ಆರೋಗ್ಯ ಸ್ಥಿತಿ?
ಸೂರ್ಯ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 10, 2024 | 12:15 PM

Share

ಕಾಲಿವುಡ್​ನ ಖ್ಯಾತ ನಟ ಸೂರ್ಯ ಅವರ ತಲೆಗೆ ಪೆಟ್ಟಾದ ಬಗ್ಗೆ ವರದಿ ಆಗಿದೆ. ಅವರು ತ್ತೀಚೆಗೆ ‘ಸೂರ್ಯ 44’ ಸಿನಿಮಾದ ಶೂಟ್​ನಲ್ಲಿ ಬ್ಯುಸಿ ಇದ್ದರು. ಪೆಟ್ಟಾಗಿರೋ ಕಾರಣದಿಂದ ಸಿನಿಮಾದ ಶೂಟ್​ನ ಅರ್ಧಕ್ಕೆ ನಿಲ್ಲಿಸಲಾಗಿದೆ ಎಂದು ವರದಿ ಆಗಿದೆ. ಈ ತಿಂಗಳ ಆರಂಭದಲ್ಲಿ ಊಟಿಯಲ್ಲಿ ‘ಸೂರ್ಯ 44’ ಚಿತ್ರದ ಕೆಲಸ ಆರಂಭ ಆಗಿತ್ತು. ಈಗ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಈ ಚಿತ್ರವನ್ನು ಕಾರ್ತಿಕ್ ಸುಬ್ಬರಾಜು ಅವರು ನಿರ್ದೇಶನ ಮಾಡುತ್ತಿದ್ದಾರೆ.

ಶೂಟಿಂಗ್ ವೇಳೆ ಎಷ್ಟೇ ಎಚ್ಚರಿಕೆ ತೆಗೆದುಕೊಂಡರೂ ಅಪಘಾತ ಸಂಭವಿಸುತ್ತದೆ. ಸೂರ್ಯ ಸಿನಿಮಾದ ತಂಡದವರೂ ಸಾಕಷ್ಟು ಎಚ್ಚರಿಕೆ ವಹಿಸಿದ್ದರು. ಆದಾಗ್ಯೂ ಅವಘಡ ಸಂಭವಿಸಿದೆ. ಈಗ ಸೂರ್ಯ ಚೇತರಿಕೆಕಂಡಿದ್ದಾರೆ. ಈ ಬಗ್ಗೆ ನಿರ್ಮಾಪಕ ರಾಜಶೇಖರ್ ಪಾಂಡಿಯನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಪ್ರೀತಿಯ ಸೂರ್ಯ ಅಭಿಮಾನಿಗಳೇ, ಇದೊಂದು ಸಣ್ಣ ಗಾಯ. ಭಯ ಬೇಡ. ನಿಮ್ಮ ಪ್ರಾರ್ಥನೆ ಹಾಗೂ ಪ್ರೀತಿಯಿಂದ ಸೂರ್ಯ ಅಣ್ಣ ಅವರು ಆರಾಮಾಗಿ ಇದ್ದಾರೆ’ ಎಂದಿದ್ದಾರೆ ಅವರು.

ಈ ಘಟನೆ ಬಗ್ಗೆ ಕೇಳಿ ಸೂರ್ಯ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ವ್ಯಕ್ತವಾಗಿತ್ತು. ಆದರೆ, ಈಗ ನಿರ್ಮಾಪಕರು ಈ ಬಗ್ಗೆ ಮಾಹಿತಿ ಕೊಟ್ಟ ಬಳಿಕ ಎಲ್ಲರೂ ನಿಟ್ಟುಸಿರು ಬಿಡುವಂತೆ ಆಗಿದೆ. ಅವರು ಬೇಗ ಚೇತರಿಕೆ ಕಂಡು ಮತ್ತೆ ಶೂಟಿಂಗ್ ಸೆಟ್ ಸೇರಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ‘ಕಂಗುವ’ ರಿಲೀಸ್ ದಿನಾಂಕ ಘೋಷಣೆ; ‘ಮಾರ್ಟಿನ್’ ಸಿನಿಮಾ ಜೊತೆ ಕ್ಲ್ಯಾಶ್

‘ಕಂಗುವ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಸೂರ್ಯ ಅವರೇ ಹೀರೋ. ಇದು ಬಿಗ್ ಬಜೆಟ್ ಸಿನಿಮಾ. ಈ ಚಿತ್ರವನ್ನು ಸಿರುಥಾಯಿ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಅಕ್ಟೋಬರ್ 10ರಂದು ರಿಲೀಸ್ ಆಗಲಿದೆ. ದಿಶಾ ಪಟಾಣಿ ಅವರು ಈ ಚಿತ್ರಕ್ಕೆ ನಾಯಕಿ. ಬಾಬಿ ಡಿಯೋಲ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ