ಎರಡು ಭಿನ್ನ ಅವತಾರದಲ್ಲಿ ಸೂರ್ಯ; ‘ಕಂಗುವ’ ಚಿತ್ರದಲ್ಲಿ ಇರಲಿದೆ ದ್ವಿಪಾತ್ರ

ನಟ ಸೂರ್ಯ ಅವರು ‘ಕಂಗುವ’ ಸಿನಿಮಾದಲ್ಲಿ ಡಬಲ್​ ರೋಲ್ ಮಾಡುತ್ತಿದ್ದಾರೆ. ಹೊಸ ಪೋಸ್ಟರ್​ ಮೂಲಕ ಈ ವಿಚಾರ ಬಹಿರಂಗಪಡಿಸಲಾಗಿದೆ. ಈ ಎರಡೂ ಪಾತ್ರಗಳು ಯುದ್ಧಕ್ಕೆ ಸಿದ್ಧವಾಗಿ ನಿಂತಂತಿವೆ. ಸಿನಿಮಾ ಮೇಲಿನ ನಿರೀಕ್ಷೆಯನ್ನು ಡಬಲ್​ ಮಾಡುವ ರೀತಿಯಲ್ಲಿ ಈ ಪೋಸ್ಟರ್​ ವಿನ್ಯಾಸಗೊಂಡಿದೆ. ಸೋಶಿಯಲ್​ ಮೀಡಿಯಾದಲ್ಲಿ ‘ಕಂಗುವ’ ಪೋಸ್ಟರ್​ ವೈರಲ್​ ಆಗಿದೆ.

ಎರಡು ಭಿನ್ನ ಅವತಾರದಲ್ಲಿ ಸೂರ್ಯ; ‘ಕಂಗುವ’ ಚಿತ್ರದಲ್ಲಿ ಇರಲಿದೆ ದ್ವಿಪಾತ್ರ
ಸೂರ್ಯ
Follow us
|

Updated on: Apr 15, 2024 | 3:50 PM

ಪ್ರತಿಭಾವಂತ ನಟ ಸೂರ್ಯ ಅವರು ಈಗ ಕಂಗುವ’ (Kanguva) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ನಿರೀಕ್ಷೆ ಮೂಡಲು ಹಲವು ಕಾರಣಗಳಿವೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ನೋಡಿ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ. ಈಗ ಈ ಸಿನಿಮಾದ ಹೊಸ ಪೋಸ್ಟರ್​ ಅನಾವರಣ ಮಾಡಲಾಗಿದೆ. ಇದರಲ್ಲಿ ಎರಡು ವಿಶೇಷ ಅಂಶಗಳನ್ನು ಬಿಟ್ಟುಕೊಡಲಾಗಿದೆ. ಇದೇ ವರ್ಷ ‘ಕಂಗುವ’ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಅಲ್ಲದೇ ಈ ಚಿತ್ರದಲ್ಲಿ ಸೂರ್ಯ (Suriya) ಅವರು ದ್ವಿಪಾತ್ರ ಮಾಡುತ್ತಿದ್ದಾರೆ. ಈ 2 ವಿಚಾರಗಳನ್ನು ಪೋಸ್ಟರ್​ ಮೂಲಕ ಬಿಟ್ಟುಕೊಡಲಾಗಿದೆ.

ಯಾವ ಪಾತ್ರ ಕೊಟ್ಟರೂ ಯಶಸ್ವಿಯಾಗಿ ನಿಭಾಯಿಸಬಲ್ಲ ಪ್ರತಿಭಾವಂತ ನಟ ಸೂರ್ಯ ಅವರು ಈಗಾಗಲೇ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದಾರೆ. ಈಗ ಅವರು ‘ಕಂಗುವಾ’ ಸಿನಿಮಾದಲ್ಲಿ ಎರಡು ಡಿಫರೆಂಟ್​ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಈ ಎರಡೂ ಪಾತ್ರಗಳು ಒಂದಕ್ಕೊಂದು ತದ್ವಿರುದ್ಧವಾಗಿವೆ. ಒಂದರಲ್ಲಿ ಅವರು ಪುರಾತನ ಕಾಲದ ವ್ಯಕ್ತಿಯಂತೆ ಕಾಣಿಸಿಕೊಂಡಿದ್ದರೆ, ಇನ್ನೊಂದರಲ್ಲಿ ಆಧುನಿಕ ಯುಗದ ವ್ಯಕ್ತಿಯಾಗಿ ಗನ್​ ಹಿಡಿದು ನಿಂತಿದ್ದಾರೆ.

ಈ ಎರಡೂ ಪಾತ್ರಗಳು ಯುದ್ಧಕ್ಕೆ ಸಿದ್ಧವಾಗಿ ನಿಂತಂತಿವೆ. ಈ ಎರಡರಲ್ಲಿ ಒಂದು ಪಾತ್ರಕ್ಕೆ ನೆಗೆಟಿವ್​ ಶೇಡ್​ ಇರಲಿದೆಯಾ ಎಂಬ ಅನುಮಾನ ಕೂಡ ಅಭಿಮಾನಿಗಳ ಮನದಲ್ಲಿ ಮೂಡಿದೆ. ‘ಕಂಗುವ’ ಚಿತ್ರಕ್ಕೆ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. 2024ರಲ್ಲೇ ಈ ಸಿನಿಮಾ ಬಿಡುಗಡೆ ಆಗಲಿದೆ ಎಂಬುದು ಹೌದಾದರೂ ನಿರ್ದಿಷ್ಟ ದಿನಾಂಕವನ್ನು ಚಿತ್ರತಂಡ ಇನ್ನೂ ಪ್ರಕಟಿಸಿಲ್ಲ.

ಇದನ್ನೂ ಓದಿ: ಹೆಣಗಳ ರಾಶಿ, ರಕ್ತದ ಓಕುಳಿ, ರಾಕ್ಷಸರ ಹಾವಳಿ; ಭಯಂಕರವಾಗಿದೆ ‘ಕಂಗುವ’ ಟೀಸರ್​

ನಟಿ ದಿಶಾ ಪಟಾನಿ ಅವರು ‘ಕಂಗುವ’ ಸಿನಿಮಾ ಮೂಲಕ ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಬಾಬಿ ಡಿಯೋಲ್​ ಕೂಡ ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರಿಗೂ ಇದು ಮೊದಲ ತಮಿಳು ಸಿನಿಮಾ. ದೇವಿ ಶ್ರೀ ಪ್ರಸಾದ್​ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ‘ಸ್ಟುಡಿಯೋ ಗ್ರೀನ್​’ ಮತ್ತು ‘ಯು.ವಿ. ಕ್ರಿಯೇಷನ್ಸ್​’ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಿಸುತ್ತಿವೆ. 10 ಬೇರೆ ಬೇರೆ ಭಾಷೆಗಳಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾ 3ಡಿ ವರ್ಷನ್​ನಲ್ಲೂ ಬರಲಿದೆ. ಈ ಎಲ್ಲ ಕಾರಣಗಳಿಂದ ಸಿಕ್ಕಾಪಟ್ಟೆ ಹೈಪ್​ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ