
‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಮೂಲಕ ಭಾರಿ ದೊಡ್ಡ ಹಿಟ್ ಸಿನಿಮಾ ನೀಡಿರುವ ರಿಷಬ್ ಶೆಟ್ಟಿ ಇದೀಗ ತೆಲುಗು ಪ್ಯಾನ್ ಇಂಡಿಯಾ ಸಿನಿಮಾ ಆಗಿರುವ ‘ಜೈ ಹನುಮಾನ್’ನಲ್ಲಿ ನಟಿಸುತ್ತಿದ್ದಾರೆ. ರಿಷಬ್ ಅವರದ್ದು ಸಿನಿಮಾನಲ್ಲಿ ಹನುಮಂತನ ಪಾತ್ರ. ಇದು ಸಂಪೂರ್ಣವಾಗಿ ಹನುಮಂತನ ಕುರಿತಾದ ಸಿನಿಮಾನಾ? ಅಥವಾ ಹನುಮಂತನ ಭಕ್ತನ ಕುರಿತಾದ ಫ್ಯಾಂಟಸಿ ಕತೆಯ ಎಂಬ ಬಗ್ಗೆ ಅನುಮಾನವಿದೆ. ಈ ಹಿಂದೆ ಬಿಡುಗಡೆ ಆಗಿರುವ ಪೋಸ್ಟರ್ ಗಮನಿಸಿದರೆ ಹನುಮಂತ ದೇವರ ಕುರಿತಾದ ಸಿನಿಮಾ ಎಂಬ ಅನುಮಾನ ಮೂಡುತ್ತಿದೆ.
ಈ ಸಿನಿಮಾನಲ್ಲಿ ವಮಿಕಾ ಗಬ್ಬಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು ಸಿನಿಮಾನಲ್ಲಿ ಮತ್ತೊಂದು ಪ್ರಮುಖವಾದ ಪಾತ್ರವಿದೆ. ಅದುವೇ ಶ್ರೀರಾಮನ ಪಾತ್ರ. ಈ ಪಾತ್ರಕ್ಕೆ ತೆಲುಗಿನ ನಟರನ್ನು ಹಾಕಿಕೊಳ್ಳುವ ಉದ್ದೇಶ ಸಿನಿಮಾದ ನಿರ್ದೇಶಕ ಪ್ರಶಾಂತ್ ವರ್ಮಾ ಅವರಿಗೆ ಇತ್ತಂತೆ. ಆದರೆ ಈಗ ಅದು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಪ್ರಭಾಸ್ ಈಗಾಗಲೇ ಶ್ರೀರಾಮನ ಪಾತ್ರದಲ್ಲಿ ಸೋಲು ಕಂಡಿದ್ದಾರೆ. ಮಹೇಶ್ ಬಾಬು ಪ್ರಸ್ತುತ ‘ಆರ್ಆರ್ಆರ್’ ಸಿನಿಮಾನಲ್ಲಿ ರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ಜೂ ಎನ್ಟಿಆರ್ ಅವರನ್ನೂ ಕೇಳಲಾಗಿದ್ದು, ಅವರು ತಮ್ಮ ಮುಂದಿನ ಸಿನಿಮಾನಲ್ಲಿ ಮುರುಗನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಾಗಾಗಿ ಈಗ ರಾಮನ ಪಾತ್ರದಲ್ಲಿ ನಟಿಸಿದರೆ ಆ ಲುಕ್ಗೆ ಸಮಸ್ಯೆ ಆಗುವ ಕಾರಣಕ್ಕೆ ಅವರೂ ಸಹ ನೋ ಎಂದಿದ್ದಾರಂತೆ.
ಇದೀಗ ಮೂಲಗಳ ಪ್ರಕಾರ, ಕನ್ನಡದ ಸ್ಟಾರ್ ನಟರೊಬ್ಬರು ‘ಜೈ ಹನುಮಾನ್’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಅದು ಯಾರು ಎಂಬುದು ಇನ್ನೂ ಖಾತ್ರಿ ಆಗಿಲ್ಲ. ಕೆಲ ನೆಟ್ಟಿಗರು ಊಹಿಸಿರುವಂತೆ ಶಿವರಾಜ್ ಕುಮಾರ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿ ಎಂದಿದ್ದಾರೆ. ಇನ್ನು ಕೆಲವರು ಯಶ್ ಅವರ ಹೆಸರು ಹೇಳಿದ್ದಾರೆ. ಇನ್ನು ಕೆಲವರು ಕೆಲ ಯುವನಟರ ಹೆಸರುಗಳನ್ನು ಸಹ ಹೇಳಿದ್ದಾರೆ.
ಇದನ್ನೂ ಓದಿ:ಪ್ರವಾಸದ ಖುಷಿಯಲ್ಲಿ ಕಾಂತಾರ ಚೆಲುವೆ ಸಪ್ತಮಿ ಗೌಡ
‘ಜೈ ಹನುಮಾನ್’ ಸಿನಿಮಾ ರಿಷಬ್ ಶೆಟ್ಟಿಯ ದೊಡ್ಡ ಬಜೆಟ್ನ ಪ್ಯಾನ್ ಇಂಡಿಯಾ ತೆಲುಗು ಸಿನಿಮಾ ಆಗಿದೆ. ಈ ಸಿನಿಮಾಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದಾರೆ. ಸಿನಿಮಾ ಅನ್ನು ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಇವರು ‘ಹನು ಮ್ಯಾನ್’ ಹೆಸರಿನ ಫ್ಯಾಂಟಸಿ ಕತೆಯುಳ್ಳ ಸಿನಿಮಾ ಮಾಡಿದ್ದು, ಆ ಸಿನಿಮಾ ದೊಡ್ಡ ಹಿಟ್ ಆಗಿತ್ತು. ಇದೀಗ ಅವರು ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡುತ್ತಿದ್ದಾರೆ. ಸಿನಿಮಾದ ಮುಹೂರ್ತ ಹಂಪಿಯಲ್ಲಿ ನಡೆದಿತ್ತು. ಸಿನಿಮಾ ಮುಂದಿನ ವರ್ಷ ಸಂಕ್ರಾಂತಿ ವೇಳೆಗೆ ಬಿಡುಗಡೆ ಆಗುವ ಸಾಧ್ಯತೆ ಇದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ