AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Bigg Boss 8 Elimination: ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ?

ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಯಾರು ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಕಳೆದ ವಾರ ಅದೃಷ್ಟದ ಬಲದಿಂದ ಎಲಿಮಿನೇಷನ್​ನಿಂದ​ ತಪ್ಪಿಸಿಕೊಂಡ ಶಮಂತ್​ ಈ ವಾರ ನೇರವಾಗಿ ನಾಮಿನೇಟ್​ ಆಗಿದ್ದಾರೆ.

Kannada Bigg Boss 8 Elimination: ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ?
ಬಿಗ್ ​ಬಾಸ್​ ಮನೆ
ರಾಜೇಶ್ ದುಗ್ಗುಮನೆ
| Edited By: |

Updated on:Apr 18, 2021 | 2:18 PM

Share

ಬಿಗ್ ಬಾಸ್​ ಸ್ಪರ್ಧಿಗಳು ಏಳನೇ ವಾರದ ಎಲಿಮಿನೇಷನ್​ ಸನಿಹವಾಗಿದೆ. ಕಿಚ್ಚ ಸುದೀಪ್​ ಇಲ್ಲದೆ ಈ ವಾರದ ಎಲಿಮಿನೇಷನ್​ ನಡೆಯುತ್ತಿದೆ. ಹಾಗಾದರೆ, ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ಸ್ಪರ್ಧಿ ಯಾರು ಎನ್ನುವುದಕ್ಕೆ ನಾಳೆ (ಏ.18) ಉತ್ತರ ಸಿಗಲಿದೆ. ಸದ್ಯ, ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಯಾರು ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಕಳೆದ ವಾರ ಅದೃಷ್ಟದ ಬಲದಿಂದ ಎಲಿಮಿನೇಷನ್​ನಿಂದ​ ತಪ್ಪಿಸಿಕೊಂಡ ಶಮಂತ್​ ಈ ವಾರ ನೇರವಾಗಿ ನಾಮಿನೇಟ್​ ಆಗಿದ್ದಾರೆ. ಉಳಿದಂತೆ ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆ.ಪಿ, ದಿವ್ಯಾ ಉರುಡುಗ, ರಾಜೀವ್​, ಚಕ್ರವರ್ತಿ ಚಂದ್ರಚೂಡ್​, ವಿಶ್ವನಾಥ್​ ಅವರ ಮೇಲೆ ಎಲಿಮಿನೇಷನ್​ ಕತ್ತಿ ತೂಗುಗತ್ತಿ ತೂಗುತ್ತಿದೆ.

ಮಂಜು ಒಬ್ಬ ಟಫ್​ ಸ್ಪರ್ಧಿ ಹಾಗೂ ಅವರು ಕಂಫರ್ಟ್​ ಜೋನ್​ನಿಂದ ಹೊರಬರಲಿ ಎಂಬ ಉದ್ದೇಶದಿಂದ ಅವರನ್ನು ನಾಮಿನೇಟ್​ ಮಾಡಲಾಗಿತ್ತು. ಸ್ಪರ್ಧಿಗಳೇ ಹೇಳಿದಂತೆ ಮಂಜು ಮನೆಯಲ್ಲಿ ಸ್ಟ್ರಾಂಗ್​. ಹೀಗಾಗಿ, ಅವರು ಮನೆಯಿಂದ ಹೊರ ಹೋಗೋಕೆ ಚಾನ್ಸೇ ಇಲ್ಲ. ಅರವಿಂದ್​ ಕೆ.ಪಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​, ರಾಜೀವ್​ ಮನೆಯಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ. ಹೀಗಾಗಿ, ಅವರು ಮನೆಯಿಂದ ಹೊರ ಬರೋದು ಅನುಮಾನವೇ.

ಚಕ್ರವರ್ತಿ ಚಂದ್ರಚೂಡ್​ ಆರಂಭದಲ್ಲಿ ಮನೆಯಲ್ಲಿ ಹುಳಿ ಹಿಂಡೋಕೆ ಪ್ರಾರಂಭಿಸಿದ್ದರು. ಆದರೆ, ಮನೆಯವರ ಜತೆ ಉತ್ತಮವಾಗಿ ಬೆರೆಯುತ್ತಿದ್ದಾರೆ. ಹೀಗಾಗಿ, ಅವರು ಇನ್ನೂ ಕೆಲ ವಾರ ಉಳಿದುಕೊಳ್ಳಬಹುದು. ಕೊನೆಗೆ ಉಳಿದವರು ಶಮಂತ್​ ಹಾಗೂ ವಿಶ್ವನಾಥ್​. ಶಮಂತ್ ಕಳೆದ ವಾರವೇ ಎಲಿಮಿನೇಟ್​ ಆಗುವುದರಲ್ಲಿದ್ದರು. ಆದರೆ, ವೈಜಯಂತಿ ಅಡಿಗ ಅವರು ಶಮಂತ್​ ಅವರನ್ನು ಸೇವ್​ ಮಾಡಿದ್ದರು. ಹೀಗಾಗಿ ಈ ವಾರ ಶಮಂತ್​ ಮನೆಯಿಂದ ಹೊರಹೋಗುವ ಸಾಧ್ಯತೆ ಇತ್ತು. ಆದರೆ ಅಂತಿಮವಾಗಿ ವಿಶ್ವನಾಥ್​ ಎಲಿಮಿನೇಟ್​ ಆಗಿದ್ದಾರೆ ಎನ್ನಲಾಗುತ್ತಿದೆ.

Published On - 5:32 pm, Sat, 17 April 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ