AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Bigg Boss 8 Elimination: ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ?

ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಯಾರು ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಕಳೆದ ವಾರ ಅದೃಷ್ಟದ ಬಲದಿಂದ ಎಲಿಮಿನೇಷನ್​ನಿಂದ​ ತಪ್ಪಿಸಿಕೊಂಡ ಶಮಂತ್​ ಈ ವಾರ ನೇರವಾಗಿ ನಾಮಿನೇಟ್​ ಆಗಿದ್ದಾರೆ.

Kannada Bigg Boss 8 Elimination: ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ?
ಬಿಗ್ ​ಬಾಸ್​ ಮನೆ
ರಾಜೇಶ್ ದುಗ್ಗುಮನೆ
| Edited By: |

Updated on:Apr 18, 2021 | 2:18 PM

Share

ಬಿಗ್ ಬಾಸ್​ ಸ್ಪರ್ಧಿಗಳು ಏಳನೇ ವಾರದ ಎಲಿಮಿನೇಷನ್​ ಸನಿಹವಾಗಿದೆ. ಕಿಚ್ಚ ಸುದೀಪ್​ ಇಲ್ಲದೆ ಈ ವಾರದ ಎಲಿಮಿನೇಷನ್​ ನಡೆಯುತ್ತಿದೆ. ಹಾಗಾದರೆ, ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ಸ್ಪರ್ಧಿ ಯಾರು ಎನ್ನುವುದಕ್ಕೆ ನಾಳೆ (ಏ.18) ಉತ್ತರ ಸಿಗಲಿದೆ. ಸದ್ಯ, ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಯಾರು ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಕಳೆದ ವಾರ ಅದೃಷ್ಟದ ಬಲದಿಂದ ಎಲಿಮಿನೇಷನ್​ನಿಂದ​ ತಪ್ಪಿಸಿಕೊಂಡ ಶಮಂತ್​ ಈ ವಾರ ನೇರವಾಗಿ ನಾಮಿನೇಟ್​ ಆಗಿದ್ದಾರೆ. ಉಳಿದಂತೆ ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆ.ಪಿ, ದಿವ್ಯಾ ಉರುಡುಗ, ರಾಜೀವ್​, ಚಕ್ರವರ್ತಿ ಚಂದ್ರಚೂಡ್​, ವಿಶ್ವನಾಥ್​ ಅವರ ಮೇಲೆ ಎಲಿಮಿನೇಷನ್​ ಕತ್ತಿ ತೂಗುಗತ್ತಿ ತೂಗುತ್ತಿದೆ.

ಮಂಜು ಒಬ್ಬ ಟಫ್​ ಸ್ಪರ್ಧಿ ಹಾಗೂ ಅವರು ಕಂಫರ್ಟ್​ ಜೋನ್​ನಿಂದ ಹೊರಬರಲಿ ಎಂಬ ಉದ್ದೇಶದಿಂದ ಅವರನ್ನು ನಾಮಿನೇಟ್​ ಮಾಡಲಾಗಿತ್ತು. ಸ್ಪರ್ಧಿಗಳೇ ಹೇಳಿದಂತೆ ಮಂಜು ಮನೆಯಲ್ಲಿ ಸ್ಟ್ರಾಂಗ್​. ಹೀಗಾಗಿ, ಅವರು ಮನೆಯಿಂದ ಹೊರ ಹೋಗೋಕೆ ಚಾನ್ಸೇ ಇಲ್ಲ. ಅರವಿಂದ್​ ಕೆ.ಪಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​, ರಾಜೀವ್​ ಮನೆಯಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ. ಹೀಗಾಗಿ, ಅವರು ಮನೆಯಿಂದ ಹೊರ ಬರೋದು ಅನುಮಾನವೇ.

ಚಕ್ರವರ್ತಿ ಚಂದ್ರಚೂಡ್​ ಆರಂಭದಲ್ಲಿ ಮನೆಯಲ್ಲಿ ಹುಳಿ ಹಿಂಡೋಕೆ ಪ್ರಾರಂಭಿಸಿದ್ದರು. ಆದರೆ, ಮನೆಯವರ ಜತೆ ಉತ್ತಮವಾಗಿ ಬೆರೆಯುತ್ತಿದ್ದಾರೆ. ಹೀಗಾಗಿ, ಅವರು ಇನ್ನೂ ಕೆಲ ವಾರ ಉಳಿದುಕೊಳ್ಳಬಹುದು. ಕೊನೆಗೆ ಉಳಿದವರು ಶಮಂತ್​ ಹಾಗೂ ವಿಶ್ವನಾಥ್​. ಶಮಂತ್ ಕಳೆದ ವಾರವೇ ಎಲಿಮಿನೇಟ್​ ಆಗುವುದರಲ್ಲಿದ್ದರು. ಆದರೆ, ವೈಜಯಂತಿ ಅಡಿಗ ಅವರು ಶಮಂತ್​ ಅವರನ್ನು ಸೇವ್​ ಮಾಡಿದ್ದರು. ಹೀಗಾಗಿ ಈ ವಾರ ಶಮಂತ್​ ಮನೆಯಿಂದ ಹೊರಹೋಗುವ ಸಾಧ್ಯತೆ ಇತ್ತು. ಆದರೆ ಅಂತಿಮವಾಗಿ ವಿಶ್ವನಾಥ್​ ಎಲಿಮಿನೇಟ್​ ಆಗಿದ್ದಾರೆ ಎನ್ನಲಾಗುತ್ತಿದೆ.

Published On - 5:32 pm, Sat, 17 April 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?