AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Bigg Boss 8 Elimination: ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ?

ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಯಾರು ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಕಳೆದ ವಾರ ಅದೃಷ್ಟದ ಬಲದಿಂದ ಎಲಿಮಿನೇಷನ್​ನಿಂದ​ ತಪ್ಪಿಸಿಕೊಂಡ ಶಮಂತ್​ ಈ ವಾರ ನೇರವಾಗಿ ನಾಮಿನೇಟ್​ ಆಗಿದ್ದಾರೆ.

Kannada Bigg Boss 8 Elimination: ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ?
ಬಿಗ್ ​ಬಾಸ್​ ಮನೆ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on:Apr 18, 2021 | 2:18 PM

Share

ಬಿಗ್ ಬಾಸ್​ ಸ್ಪರ್ಧಿಗಳು ಏಳನೇ ವಾರದ ಎಲಿಮಿನೇಷನ್​ ಸನಿಹವಾಗಿದೆ. ಕಿಚ್ಚ ಸುದೀಪ್​ ಇಲ್ಲದೆ ಈ ವಾರದ ಎಲಿಮಿನೇಷನ್​ ನಡೆಯುತ್ತಿದೆ. ಹಾಗಾದರೆ, ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ಸ್ಪರ್ಧಿ ಯಾರು ಎನ್ನುವುದಕ್ಕೆ ನಾಳೆ (ಏ.18) ಉತ್ತರ ಸಿಗಲಿದೆ. ಸದ್ಯ, ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಯಾರು ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಕಳೆದ ವಾರ ಅದೃಷ್ಟದ ಬಲದಿಂದ ಎಲಿಮಿನೇಷನ್​ನಿಂದ​ ತಪ್ಪಿಸಿಕೊಂಡ ಶಮಂತ್​ ಈ ವಾರ ನೇರವಾಗಿ ನಾಮಿನೇಟ್​ ಆಗಿದ್ದಾರೆ. ಉಳಿದಂತೆ ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆ.ಪಿ, ದಿವ್ಯಾ ಉರುಡುಗ, ರಾಜೀವ್​, ಚಕ್ರವರ್ತಿ ಚಂದ್ರಚೂಡ್​, ವಿಶ್ವನಾಥ್​ ಅವರ ಮೇಲೆ ಎಲಿಮಿನೇಷನ್​ ಕತ್ತಿ ತೂಗುಗತ್ತಿ ತೂಗುತ್ತಿದೆ.

ಮಂಜು ಒಬ್ಬ ಟಫ್​ ಸ್ಪರ್ಧಿ ಹಾಗೂ ಅವರು ಕಂಫರ್ಟ್​ ಜೋನ್​ನಿಂದ ಹೊರಬರಲಿ ಎಂಬ ಉದ್ದೇಶದಿಂದ ಅವರನ್ನು ನಾಮಿನೇಟ್​ ಮಾಡಲಾಗಿತ್ತು. ಸ್ಪರ್ಧಿಗಳೇ ಹೇಳಿದಂತೆ ಮಂಜು ಮನೆಯಲ್ಲಿ ಸ್ಟ್ರಾಂಗ್​. ಹೀಗಾಗಿ, ಅವರು ಮನೆಯಿಂದ ಹೊರ ಹೋಗೋಕೆ ಚಾನ್ಸೇ ಇಲ್ಲ. ಅರವಿಂದ್​ ಕೆ.ಪಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​, ರಾಜೀವ್​ ಮನೆಯಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ. ಹೀಗಾಗಿ, ಅವರು ಮನೆಯಿಂದ ಹೊರ ಬರೋದು ಅನುಮಾನವೇ.

ಚಕ್ರವರ್ತಿ ಚಂದ್ರಚೂಡ್​ ಆರಂಭದಲ್ಲಿ ಮನೆಯಲ್ಲಿ ಹುಳಿ ಹಿಂಡೋಕೆ ಪ್ರಾರಂಭಿಸಿದ್ದರು. ಆದರೆ, ಮನೆಯವರ ಜತೆ ಉತ್ತಮವಾಗಿ ಬೆರೆಯುತ್ತಿದ್ದಾರೆ. ಹೀಗಾಗಿ, ಅವರು ಇನ್ನೂ ಕೆಲ ವಾರ ಉಳಿದುಕೊಳ್ಳಬಹುದು. ಕೊನೆಗೆ ಉಳಿದವರು ಶಮಂತ್​ ಹಾಗೂ ವಿಶ್ವನಾಥ್​. ಶಮಂತ್ ಕಳೆದ ವಾರವೇ ಎಲಿಮಿನೇಟ್​ ಆಗುವುದರಲ್ಲಿದ್ದರು. ಆದರೆ, ವೈಜಯಂತಿ ಅಡಿಗ ಅವರು ಶಮಂತ್​ ಅವರನ್ನು ಸೇವ್​ ಮಾಡಿದ್ದರು. ಹೀಗಾಗಿ ಈ ವಾರ ಶಮಂತ್​ ಮನೆಯಿಂದ ಹೊರಹೋಗುವ ಸಾಧ್ಯತೆ ಇತ್ತು. ಆದರೆ ಅಂತಿಮವಾಗಿ ವಿಶ್ವನಾಥ್​ ಎಲಿಮಿನೇಟ್​ ಆಗಿದ್ದಾರೆ ಎನ್ನಲಾಗುತ್ತಿದೆ.

Published On - 5:32 pm, Sat, 17 April 21

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ