AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Bigg Boss Elimination: ಸುದೀಪ್​ ಭೇಟಿ ಮಾಡದೇ ಬಿಗ್​ ಬಾಸ್​ ಮನೆಯಿಂದ ಹೊರಹೋದ ವಿಶ್ವನಾಥ್​

ಬಿಗ್​ ಬಾಸ್​ ಮನೆಯಲ್ಲಿ ಆರಂಭದಲ್ಲಿ ಉತ್ತಮವಾಗಿ ಆಡಿದ್ದ ಅವರು ನಂತರ ಕಳಪೆ ತೋರಿದ್ದರು, ಅಲ್ಲದೆ, ಕ್ಯಾಪ್ಟನ್ ಆದಾಗಂತೂ ಅವರ ಪ್ರದರ್ಶನ ತೃಪ್ತಿದಾಯಕವಾಗಿರಲಿಲ್ಲ.

Kannada Bigg Boss Elimination: ಸುದೀಪ್​ ಭೇಟಿ ಮಾಡದೇ ಬಿಗ್​ ಬಾಸ್​ ಮನೆಯಿಂದ ಹೊರಹೋದ ವಿಶ್ವನಾಥ್​
ವಿಶ್ವನಾಥ್​
ರಾಜೇಶ್ ದುಗ್ಗುಮನೆ
|

Updated on: Apr 18, 2021 | 10:20 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಸ್ಪರ್ಧಿಸುತ್ತಿದ ಅತಿ ಕಿರಿಯ ಸ್ಪರ್ಧಿ ಎಂಬ ಖ್ಯಾತಿ ವಿಶ್ವನಾಥ್​ ಅವರದ್ದಾಗಿತ್ತು. ಆರಂಭದಲ್ಲಿ ಎಡವಿದ್ದ ಅವರು ನಂತರ ತಿದ್ದಿಕೊಂಡು ಮುನ್ನಡೆದಿದ್ದರು. ಆದರೆ, ಈ ವಾರ ಅವರ ಪರ್ಫಾರ್ಮೆನ್ಸ್​ ಕೊಂಚ ತಗ್ಗಿತ್ತು. ಹೀಗಾಗಿ ಅವರು ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ. 

ವಿಶ್ವ ಕ್ಯಾಪ್ಟನ್​ ಆಗಿದ್ದ ಒಂದು ವಾರ ಹೊರತುಪಡಿಸಿ ಮತ್ತೆಲ್ಲ ವಾರದಲ್ಲೂ ವಿಶ್ವನಾಥ್​ ನಾಮಿನೇಟ್​ ಆಗಿದ್ದರು. ಆದರೂ ಏಳು ವಾರಗಳ ಕಾಲ ಎಲ್ಲರಿಗೂ ಪೈಪೋಟಿ ನೀಡಿದ ಅವರು ಈಗ ದೊಡ್ಮನೆಯಿಂದ ಹೊರಬಂದಿದ್ದಾರೆ. ಈ ವಾರ ಶಮಂತ್​ ಬ್ರೊ ಗೌಡ ಕೂಡ ಮನೆಯಿಂದ ಹೊರಗೆ ಹೋಗಬಹುದು ಎಂದು ಊಹಿಸಲಾಗಿತ್ತು.  ಅವರು ಕಳೆದವಾರ ಅದೃಷ್ಟದ ಮೂಲಕ ಸೇವ್​ ಆಗಿದ್ದರು. ಆದರೆ, ಈ ವಾರ ಅದೃಷ್ಟ ವಿಶ್ವ ಅವರಿಗೆ ಕೈಕೊಟ್ಟಿದೆ.

ಬಿಗ್​ ಬಾಸ್​ ಮನೆಯಲ್ಲಿ ಆರಂಭದಲ್ಲಿ ಉತ್ತಮವಾಗಿ ಆಡಿದ್ದ ಅವರು ನಂತರ ಕಳಪೆ ತೋರಿದ್ದರು, ಅಲ್ಲದೆ, ಕ್ಯಾಪ್ಟನ್ ಆದಾಗಲಂತೂ ಅವರ ಪ್ರದರ್ಶನ ತೃಪ್ತಿದಾಯಕವಾಗಿರಲಿಲ್ಲ. ಈ ಬಾರಿ ವೀಕ್ಷಕರು ವಿಶ್ವ ಅವರಿಗೆ ಕಡಿಮೆ ವೋಟ್​ ನೀಡಿದ್ದಾರೆ.

ಪ್ರತಿವಾರ ಎಲಿಮಿನೇಷ್​ನಗೆ ನಾಮಿನೇಟ್​ ಆದವರ ಪೈಕಿ ಸೇಫ್​ ಆದ ಕೆಲವರ ಹೆಸರನ್ನು ಸುದೀಪ್​ ಶನಿವಾರವೇ ಘೋಷಣೆ ಮಾಡುತ್ತಿದ್ದರು. ನಂತರ ಭಾನುವಾರ ಅಂತಿಮವಾಗಿ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬುದು ಘೋಷಣೆ ಆಗುತ್ತಿತ್ತು. ಆದರೆ, ಈ ಬಾರಿ ಬಿಗ್​ ಬಾಸ್​ ಬೇರೆಯದೇ ಮಾರ್ಗ ಅನುಸರಿಸಿದ್ದಾರೆ.  ಈ ವಾರ ಎಲ್ಲಾ ಸ್ಪರ್ಧಿಗಳನ್ನು ಲಿವಿಂಗ್​ ಏರಿಯಾದಲ್ಲಿ ಕೂರಿಸಲಾಗಿದೆ. ಕೊನೆಗೆ ಪರದೆ ಮೇಲೆ ಈ ವಾರ ನಾಮಿನೇಟ್​ ಆದವರ ವಿಡಿಯೋವನ್ನು ವಿಟಿಯನ್ನು ತೋರಿಸಲಾಗಿದೆ. ಅದರಲ್ಲಿ ವಿಶ್ವನಾಥ್‌ ಅವರ ಬಿಗ್ ಬಾಸ್ ಮನೆಯ ಜರ್ನಿಯ ವಿಡಿಯೋ ಪ್ರಸಾರಗಿದೆ. ಹಾಗಾಗಿ, ಅವರು ಎಲಿಮಿನೇಟ್ ಆದರು. ಅಲ್ಲಿಗೆ 48 ದಿನಗಳ ಬಿಗ್ ಬಾಸ್ ಮನೆಯ ಜರ್ನಿಯನ್ನು ಅವರು ಮುಕ್ತಾಯಗೊಳಿಸಿದರು.

ಧನುಶ್ರೀ, ನಿರ್ಮಲಾ ಚೆನ್ನಪ್ಪ, ಗೀತಾ ಭಾರತಿ ಭಟ್​, ಚಂದ್ರಕಲಾ ಮೋಹನ್​, ಶಂಕರ್​ ಅಶ್ವತ್ಥ್​ ಮತ್ತು ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ನೀಡಿದ್ದ ವೈಜಯಂತಿ ಅಡಿಗ ಬಳಿಕ 7ನೇ ಸ್ಪರ್ಧಿಯಾಗಿ ವಿಶ್ವನಾಥ್​ ಎಲಿಮಿನೇಟ್​ ಆಗಿದ್ದಾರೆ. ಇನ್ನುಳಿದ ಸದಸ್ಯರ ನಡುವೆ ಪೈಪೋಟಿ ಮುಂದುವರಿದಿದೆ.

ಇದನ್ನೂ ಓದಿ: ಫೇಶಿಯಲ್​ ತಂದ ಆಪತ್ತು; ಬಿಗ್​ ಬಾಸ್​ ಮಾಜಿ ಸ್ಪರ್ಧಿಯ ಮುಖ ಹೀಗಾಗೋಯ್ತಾ?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು