AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್

‘ನಾನು ಕನ್ನಡದ ಹನುಮಾನ್​ ಚಾಲೀಸ ಹಾಡಿದ್ದೇನೆ. ಏನೇ ತಪ್ಪುಗಳು ಇದ್ದರೂ ದಯವಿಟ್ಟು ಕ್ಷಮಿಸಿ. ಇದೊಂದು ಬಹಳ ಭಕ್ತಿಯಿಂದ ಮಾಡಿದ ಪ್ರಯತ್ನ. ಆ ದೇವರ ಎಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ವಿಜಯ್​ ಪ್ರಕಾಶ್​. ‘ಶ್ರೀಲಕ್ಷ್ಮಿ ವೆಂಕಟೇಶ್ವರ’ ಯೂಟ್ಯೂಬ್​ ಚಾನೆಲ್​ನಲ್ಲಿ ಇದು ಬಿಡುಗಡೆ ಆಗಿದೆ.

ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್
ಕನ್ನಡದಲ್ಲಿ ಹನುಮಾನ್​ ಚಾಲೀಸ ಬಿಡುಗಡೆ
ಮದನ್​ ಕುಮಾರ್​
|

Updated on: Jan 09, 2024 | 12:35 PM

Share

ಆಂಜನೇಯನ ಕುರಿತು ಈಗಾಗಲೇ ಅನೇಕ ಕೃತಿಗಳು, ಹಾಡುಗಳು, ಭಕ್ತಿಗೀತೆಗಳು ರಚನೆ ಆಗಿವೆ. ಹನುಮ ಭಕ್ತರ ಮನದಲ್ಲಿ ಆ ಗೀತೆಗಳು ವಿಶೇಷ ಸ್ಥಾನ ಪಡೆದುಕೊಂಡಿವೆ. ಆದರೆ ಈಗ ಮೊಟ್ಟ ಮೊದಲ ಬಾರಿಗೆ ಹನುಮಾನ್ ಚಾಲೀಸವನ್ನು (Hanuman Chalisa) ಕನ್ನಡಕ್ಕೆ ಭಾಷಾಂತರ ಮಾಡಿ, ಸಂಗೀತ ನೀಡಿ ಬಿಡುಗಡೆ ಮಾಡಿರುವುದು ವಿಶೇಷ. ಹನುಮನ ಭಕ್ತರಾದ ವೆಂಕಟೇಶ್ ಉತ್ತರಹಳ್ಳಿ ಕುಟುಂಬದವರು ಇದರ ನಿರ್ಮಾಣ ಮಾಡಿದ್ದಾರೆ. ಕಾಂತರಾಜ್​ ಹೆಗಡೆ ಅವರು ಭಾಷಾಂತರ ಮಾಡಿದ್ದಾರೆ. ಭಾರಿ ಕಾಳಜಿ, ಶ್ರದ್ಧೆ ವಹಿಸಿ ಈ ಕಾರ್ಯ ಮಾಡಿರುವುದಾಗಿ ತಂಡದವರು ತಿಳಿಸಿದ್ದಾರೆ. ಇದಕ್ಕೆ ಖ್ಯಾತ ಗಾಯಕ ವಿಜಯ್​ ಪ್ರಕಾಶ್​ (Vijay Prakash) ಧ್ವನಿ ನೀಡಿದ್ದಾರೆ.

ದೇಶದಲ್ಲಿ ಈಗ ರಾಮಾಂಜನೇಯರ ಬಗ್ಗೆ ಮಾತುಗಳು ಹೆಚ್ಚಾಗಿವೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭ ಆಗಿದೆ. ಈ ಸಮಯಲ್ಲಿ ಹನುಮಾನ್ ಚಾಲಿಸವನ್ನು ಕನ್ನಡಕ್ಕೆ ಭಾಷಾಂತರಿಸಿ, ವಿಶೇಷ ಪ್ರಯತ್ನ ಮಾಡಲಾಗಿದೆ. ಕನ್ನಡದಲ್ಲಿ ಹನುಮಾನ್​ ಚಾಲೀಸ ಹಾಡಿದಕ್ಕೆ ವಿಜಯ್​ ಪ್ರಕಾಶ್​ ಅವರಿಗೆ ಖುಷಿ ಆಗಿದೆ. ಬಹಳ ಭಕ್ತಿ-ಭಾವದಿಂದ ಅವರು ಇದನ್ನು ಹಾಡಿದ್ದಾರೆ.

Video: ಶಸ್ತ್ರಚಿಕಿತ್ಸೆ ವೇಳೆ ಪಿಯಾನೋ ಮೂಲಕ ಹನುಮಾನ್ ಚಾಲೀಸಾ ನುಡಿಸಿದ ಯುವಕ

‘ಶ್ರೀಲಕ್ಷ್ಮಿ ವೆಂಕಟೇಶ್ವರ’ ಯೂಟ್ಯೂಬ್​ ಚಾನೆಲ್​ನಲ್ಲಿ ಕನ್ನಡದ ಹನುಮಾನ್​ ಚಾಲೀಸ ಬಿಡುಗಡೆ ಆಗಿದೆ. ಕನ್ನಡದ ಹಲವು ಚಿತ್ರಗಳಿಗೆ ಸಂಗೀತ ನೀಡಿರುವ ಲೋಕಿ ತವಸ್ಯ ಅವರು ಇದಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ವೆಂಕಟೇಶ್​ ಉತ್ತರಹಳ್ಳಿ ಕುಟುಂಬದವರು ಹನುಮನ ಭಕ್ತರು. ಕನ್ನಡದಲ್ಲಿ ಹನುಮಾನ್​ ಚಾಲೀಸ ಮಾಡಬೇಕು ಎಂಬುದು ಅವರ ಮಹದಾಸೆ ಆಗಿತ್ತು. ಅದೀಗ ನೆರವೇರಿದೆ’ ಎಂದು ವಿಜಯ್​ ಪ್ರಕಾಶ್​ ಹೇಳಿದ್ದಾರೆ.

‘ನಾನು ಕನ್ನಡದ ಹನುಮಾನ್​ ಚಾಲೀಸ ಹಾಡಿದ್ದೇನೆ. ಏನೇ ತಪ್ಪುಗಳು ಇದ್ದರೂ ದಯವಿಟ್ಟು ಕ್ಷಮಿಸಿ. ಇದೊಂದು ಬಹಳ ಭಕ್ತಿಯಿಂದ ಮಾಡಿದ ಪ್ರಯತ್ನ. ಆ ದೇವರು ಎಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ವಿಜಯ್​ ಪ್ರಕಾಶ್​. ಹನುಮನ ಭಕ್ತರಿಗೆ ಕನ್ನಡದ ಹನುಮಾನ್​ ಚಾಲೀಸ ಮೆಚ್ಚುಗೆ ಆಗಲಿದೆ ಎಂಬ ಭರವಸೆಯಲ್ಲಿ ಈ ಪ್ರಯತ್ನ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ