AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್

‘ನಾನು ಕನ್ನಡದ ಹನುಮಾನ್​ ಚಾಲೀಸ ಹಾಡಿದ್ದೇನೆ. ಏನೇ ತಪ್ಪುಗಳು ಇದ್ದರೂ ದಯವಿಟ್ಟು ಕ್ಷಮಿಸಿ. ಇದೊಂದು ಬಹಳ ಭಕ್ತಿಯಿಂದ ಮಾಡಿದ ಪ್ರಯತ್ನ. ಆ ದೇವರ ಎಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ವಿಜಯ್​ ಪ್ರಕಾಶ್​. ‘ಶ್ರೀಲಕ್ಷ್ಮಿ ವೆಂಕಟೇಶ್ವರ’ ಯೂಟ್ಯೂಬ್​ ಚಾನೆಲ್​ನಲ್ಲಿ ಇದು ಬಿಡುಗಡೆ ಆಗಿದೆ.

ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್
ಕನ್ನಡದಲ್ಲಿ ಹನುಮಾನ್​ ಚಾಲೀಸ ಬಿಡುಗಡೆ
ಮದನ್​ ಕುಮಾರ್​
|

Updated on: Jan 09, 2024 | 12:35 PM

Share

ಆಂಜನೇಯನ ಕುರಿತು ಈಗಾಗಲೇ ಅನೇಕ ಕೃತಿಗಳು, ಹಾಡುಗಳು, ಭಕ್ತಿಗೀತೆಗಳು ರಚನೆ ಆಗಿವೆ. ಹನುಮ ಭಕ್ತರ ಮನದಲ್ಲಿ ಆ ಗೀತೆಗಳು ವಿಶೇಷ ಸ್ಥಾನ ಪಡೆದುಕೊಂಡಿವೆ. ಆದರೆ ಈಗ ಮೊಟ್ಟ ಮೊದಲ ಬಾರಿಗೆ ಹನುಮಾನ್ ಚಾಲೀಸವನ್ನು (Hanuman Chalisa) ಕನ್ನಡಕ್ಕೆ ಭಾಷಾಂತರ ಮಾಡಿ, ಸಂಗೀತ ನೀಡಿ ಬಿಡುಗಡೆ ಮಾಡಿರುವುದು ವಿಶೇಷ. ಹನುಮನ ಭಕ್ತರಾದ ವೆಂಕಟೇಶ್ ಉತ್ತರಹಳ್ಳಿ ಕುಟುಂಬದವರು ಇದರ ನಿರ್ಮಾಣ ಮಾಡಿದ್ದಾರೆ. ಕಾಂತರಾಜ್​ ಹೆಗಡೆ ಅವರು ಭಾಷಾಂತರ ಮಾಡಿದ್ದಾರೆ. ಭಾರಿ ಕಾಳಜಿ, ಶ್ರದ್ಧೆ ವಹಿಸಿ ಈ ಕಾರ್ಯ ಮಾಡಿರುವುದಾಗಿ ತಂಡದವರು ತಿಳಿಸಿದ್ದಾರೆ. ಇದಕ್ಕೆ ಖ್ಯಾತ ಗಾಯಕ ವಿಜಯ್​ ಪ್ರಕಾಶ್​ (Vijay Prakash) ಧ್ವನಿ ನೀಡಿದ್ದಾರೆ.

ದೇಶದಲ್ಲಿ ಈಗ ರಾಮಾಂಜನೇಯರ ಬಗ್ಗೆ ಮಾತುಗಳು ಹೆಚ್ಚಾಗಿವೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭ ಆಗಿದೆ. ಈ ಸಮಯಲ್ಲಿ ಹನುಮಾನ್ ಚಾಲಿಸವನ್ನು ಕನ್ನಡಕ್ಕೆ ಭಾಷಾಂತರಿಸಿ, ವಿಶೇಷ ಪ್ರಯತ್ನ ಮಾಡಲಾಗಿದೆ. ಕನ್ನಡದಲ್ಲಿ ಹನುಮಾನ್​ ಚಾಲೀಸ ಹಾಡಿದಕ್ಕೆ ವಿಜಯ್​ ಪ್ರಕಾಶ್​ ಅವರಿಗೆ ಖುಷಿ ಆಗಿದೆ. ಬಹಳ ಭಕ್ತಿ-ಭಾವದಿಂದ ಅವರು ಇದನ್ನು ಹಾಡಿದ್ದಾರೆ.

Video: ಶಸ್ತ್ರಚಿಕಿತ್ಸೆ ವೇಳೆ ಪಿಯಾನೋ ಮೂಲಕ ಹನುಮಾನ್ ಚಾಲೀಸಾ ನುಡಿಸಿದ ಯುವಕ

‘ಶ್ರೀಲಕ್ಷ್ಮಿ ವೆಂಕಟೇಶ್ವರ’ ಯೂಟ್ಯೂಬ್​ ಚಾನೆಲ್​ನಲ್ಲಿ ಕನ್ನಡದ ಹನುಮಾನ್​ ಚಾಲೀಸ ಬಿಡುಗಡೆ ಆಗಿದೆ. ಕನ್ನಡದ ಹಲವು ಚಿತ್ರಗಳಿಗೆ ಸಂಗೀತ ನೀಡಿರುವ ಲೋಕಿ ತವಸ್ಯ ಅವರು ಇದಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ವೆಂಕಟೇಶ್​ ಉತ್ತರಹಳ್ಳಿ ಕುಟುಂಬದವರು ಹನುಮನ ಭಕ್ತರು. ಕನ್ನಡದಲ್ಲಿ ಹನುಮಾನ್​ ಚಾಲೀಸ ಮಾಡಬೇಕು ಎಂಬುದು ಅವರ ಮಹದಾಸೆ ಆಗಿತ್ತು. ಅದೀಗ ನೆರವೇರಿದೆ’ ಎಂದು ವಿಜಯ್​ ಪ್ರಕಾಶ್​ ಹೇಳಿದ್ದಾರೆ.

‘ನಾನು ಕನ್ನಡದ ಹನುಮಾನ್​ ಚಾಲೀಸ ಹಾಡಿದ್ದೇನೆ. ಏನೇ ತಪ್ಪುಗಳು ಇದ್ದರೂ ದಯವಿಟ್ಟು ಕ್ಷಮಿಸಿ. ಇದೊಂದು ಬಹಳ ಭಕ್ತಿಯಿಂದ ಮಾಡಿದ ಪ್ರಯತ್ನ. ಆ ದೇವರು ಎಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ವಿಜಯ್​ ಪ್ರಕಾಶ್​. ಹನುಮನ ಭಕ್ತರಿಗೆ ಕನ್ನಡದ ಹನುಮಾನ್​ ಚಾಲೀಸ ಮೆಚ್ಚುಗೆ ಆಗಲಿದೆ ಎಂಬ ಭರವಸೆಯಲ್ಲಿ ಈ ಪ್ರಯತ್ನ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?