AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್

‘ನಾನು ಕನ್ನಡದ ಹನುಮಾನ್​ ಚಾಲೀಸ ಹಾಡಿದ್ದೇನೆ. ಏನೇ ತಪ್ಪುಗಳು ಇದ್ದರೂ ದಯವಿಟ್ಟು ಕ್ಷಮಿಸಿ. ಇದೊಂದು ಬಹಳ ಭಕ್ತಿಯಿಂದ ಮಾಡಿದ ಪ್ರಯತ್ನ. ಆ ದೇವರ ಎಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ವಿಜಯ್​ ಪ್ರಕಾಶ್​. ‘ಶ್ರೀಲಕ್ಷ್ಮಿ ವೆಂಕಟೇಶ್ವರ’ ಯೂಟ್ಯೂಬ್​ ಚಾನೆಲ್​ನಲ್ಲಿ ಇದು ಬಿಡುಗಡೆ ಆಗಿದೆ.

ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್
ಕನ್ನಡದಲ್ಲಿ ಹನುಮಾನ್​ ಚಾಲೀಸ ಬಿಡುಗಡೆ
ಮದನ್​ ಕುಮಾರ್​
|

Updated on: Jan 09, 2024 | 12:35 PM

Share

ಆಂಜನೇಯನ ಕುರಿತು ಈಗಾಗಲೇ ಅನೇಕ ಕೃತಿಗಳು, ಹಾಡುಗಳು, ಭಕ್ತಿಗೀತೆಗಳು ರಚನೆ ಆಗಿವೆ. ಹನುಮ ಭಕ್ತರ ಮನದಲ್ಲಿ ಆ ಗೀತೆಗಳು ವಿಶೇಷ ಸ್ಥಾನ ಪಡೆದುಕೊಂಡಿವೆ. ಆದರೆ ಈಗ ಮೊಟ್ಟ ಮೊದಲ ಬಾರಿಗೆ ಹನುಮಾನ್ ಚಾಲೀಸವನ್ನು (Hanuman Chalisa) ಕನ್ನಡಕ್ಕೆ ಭಾಷಾಂತರ ಮಾಡಿ, ಸಂಗೀತ ನೀಡಿ ಬಿಡುಗಡೆ ಮಾಡಿರುವುದು ವಿಶೇಷ. ಹನುಮನ ಭಕ್ತರಾದ ವೆಂಕಟೇಶ್ ಉತ್ತರಹಳ್ಳಿ ಕುಟುಂಬದವರು ಇದರ ನಿರ್ಮಾಣ ಮಾಡಿದ್ದಾರೆ. ಕಾಂತರಾಜ್​ ಹೆಗಡೆ ಅವರು ಭಾಷಾಂತರ ಮಾಡಿದ್ದಾರೆ. ಭಾರಿ ಕಾಳಜಿ, ಶ್ರದ್ಧೆ ವಹಿಸಿ ಈ ಕಾರ್ಯ ಮಾಡಿರುವುದಾಗಿ ತಂಡದವರು ತಿಳಿಸಿದ್ದಾರೆ. ಇದಕ್ಕೆ ಖ್ಯಾತ ಗಾಯಕ ವಿಜಯ್​ ಪ್ರಕಾಶ್​ (Vijay Prakash) ಧ್ವನಿ ನೀಡಿದ್ದಾರೆ.

ದೇಶದಲ್ಲಿ ಈಗ ರಾಮಾಂಜನೇಯರ ಬಗ್ಗೆ ಮಾತುಗಳು ಹೆಚ್ಚಾಗಿವೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭ ಆಗಿದೆ. ಈ ಸಮಯಲ್ಲಿ ಹನುಮಾನ್ ಚಾಲಿಸವನ್ನು ಕನ್ನಡಕ್ಕೆ ಭಾಷಾಂತರಿಸಿ, ವಿಶೇಷ ಪ್ರಯತ್ನ ಮಾಡಲಾಗಿದೆ. ಕನ್ನಡದಲ್ಲಿ ಹನುಮಾನ್​ ಚಾಲೀಸ ಹಾಡಿದಕ್ಕೆ ವಿಜಯ್​ ಪ್ರಕಾಶ್​ ಅವರಿಗೆ ಖುಷಿ ಆಗಿದೆ. ಬಹಳ ಭಕ್ತಿ-ಭಾವದಿಂದ ಅವರು ಇದನ್ನು ಹಾಡಿದ್ದಾರೆ.

Video: ಶಸ್ತ್ರಚಿಕಿತ್ಸೆ ವೇಳೆ ಪಿಯಾನೋ ಮೂಲಕ ಹನುಮಾನ್ ಚಾಲೀಸಾ ನುಡಿಸಿದ ಯುವಕ

‘ಶ್ರೀಲಕ್ಷ್ಮಿ ವೆಂಕಟೇಶ್ವರ’ ಯೂಟ್ಯೂಬ್​ ಚಾನೆಲ್​ನಲ್ಲಿ ಕನ್ನಡದ ಹನುಮಾನ್​ ಚಾಲೀಸ ಬಿಡುಗಡೆ ಆಗಿದೆ. ಕನ್ನಡದ ಹಲವು ಚಿತ್ರಗಳಿಗೆ ಸಂಗೀತ ನೀಡಿರುವ ಲೋಕಿ ತವಸ್ಯ ಅವರು ಇದಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ವೆಂಕಟೇಶ್​ ಉತ್ತರಹಳ್ಳಿ ಕುಟುಂಬದವರು ಹನುಮನ ಭಕ್ತರು. ಕನ್ನಡದಲ್ಲಿ ಹನುಮಾನ್​ ಚಾಲೀಸ ಮಾಡಬೇಕು ಎಂಬುದು ಅವರ ಮಹದಾಸೆ ಆಗಿತ್ತು. ಅದೀಗ ನೆರವೇರಿದೆ’ ಎಂದು ವಿಜಯ್​ ಪ್ರಕಾಶ್​ ಹೇಳಿದ್ದಾರೆ.

‘ನಾನು ಕನ್ನಡದ ಹನುಮಾನ್​ ಚಾಲೀಸ ಹಾಡಿದ್ದೇನೆ. ಏನೇ ತಪ್ಪುಗಳು ಇದ್ದರೂ ದಯವಿಟ್ಟು ಕ್ಷಮಿಸಿ. ಇದೊಂದು ಬಹಳ ಭಕ್ತಿಯಿಂದ ಮಾಡಿದ ಪ್ರಯತ್ನ. ಆ ದೇವರು ಎಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ವಿಜಯ್​ ಪ್ರಕಾಶ್​. ಹನುಮನ ಭಕ್ತರಿಗೆ ಕನ್ನಡದ ಹನುಮಾನ್​ ಚಾಲೀಸ ಮೆಚ್ಚುಗೆ ಆಗಲಿದೆ ಎಂಬ ಭರವಸೆಯಲ್ಲಿ ಈ ಪ್ರಯತ್ನ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್